LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಒಬಿಸಿ ಮಹಿಳೆಯರನ್ನು ಅವಮಾನಿಸಿದ ಕಾಂಗ್ರೆಸ್: ರಾಹುಲ್ ಗಾಂಧಿಯವರ ‘ನಾರಿ ನ್ಯಾಯ್’ ಬೂಟಾಟಿಕೆ ಎಂದ ಆರ್‌ಅಶೋಕ್ 

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ಕಾಂಗ್ರೆಸ್ ಪಕ್ಷದ 'ನಾರಿ ನ್ಯಾಯ್' ಹಾಗೂ ಮಹಿಳಾ ಸಬಲೀಕರಣದ ಮಾತುಗಳು ಕೇವಲ ಬೂಟಾಟಿಕೆಯಿಂದ ಕೂಡಿದ್ದು, ಅಧಿಕಾರ ಬಂದಾಗ ಮಹಿಳೆಯರಿಗೆ ನಿರಂತರ ದ್ರೋಹ ಎಸಗಲಾಗುತ್ತಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್‌ಆಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಿಲುವನ್ನು ಪ್ರಶ್ನಿಸಿರುವ ಅವರು, ಕಾಂಗ್ರೆಸ್‌ನ ನೈಜ ಮುಖವಾಡ ಕಳಚಿಬಿದ್ದಿದೆ ಎಂದು ಕಿಡಿಕಾರಿದ್ದಾರೆ. 

​ರಾಜ್ಯ ಸರ್ಕಾರದ ನೂತನ ಸಂಪುಟ ಸೇರ್ಪಡೆ ವೇಳೆ ಅಧಿಕೃತ ಪಟ್ಟಿಯಲ್ಲಿದ್ದ ಹಿಂದುಳಿದ ವರ್ಗದ ಮಹಿಳಾ ನಾಯಕಿಯ ಹೆಸರನ್ನು ಕೊನೆ ಕ್ಷಣದಲ್ಲಿ ತೆಗೆದುಹಾಕಿ, ಪ್ರಮಾಣವಚನ ಸ್ವೀಕರಿಸದಂತೆ ತಡೆದಿರುವುದು ಇಡೀ ಮಹಿಳಾ ಕುಲಕ್ಕೆ ಹಾಗೂ ಹಿಂದುಳಿದ ವರ್ಗಕ್ಕೆ ಮಾಡಿದ ಬಹಿರಂಗ ಅವಮಾನವಾಗಿದೆ ಎಂದು ಅಶೋಕ್ ಆರೋಪಿಸಿದ್ದಾರೆ. 

​ಕ್ಯಾಮೆರಾಗಳ ಮುಂದೆ ಸಾಮಾಜಿಕ ನ್ಯಾಯ, ಮಹಿಳಾ ಸಬಲೀಕರಣದ ಬಗ್ಗೆ ಭಾಷಣ ಮಾಡುವ ರಾಹುಲ್ ಗಾಂಧಿ, ನೈಜ ಅಧಿಕಾರ ಮತ್ತು ಆಡಳಿತದ ವಿಷಯ ಬಂದಾಗ ಕಣ್ಣೊರೆಸುವ ತಂತ್ರ ಮಾಡುತ್ತಿದ್ದಾರೆ. ಸಂಸತ್ತಿನಲ್ಲಿ ದಶಕಗಳ ಕಾಲ ಮಹಿಳಾ ಮೀಸಲಾತಿ ವಿಧೇಯಕವನ್ನು ತಡೆಹಿಡಿದಿದ್ದ ಕಾಂಗ್ರೆಸ್, ಈಗ ಕರ್ನಾಟಕದಲ್ಲೂ ಹಿಂದುಳಿದ ವರ್ಗದ ಮಹಿಳೆಗೆ ಸಂಪುಟದ ಬಾಗಿಲನ್ನು ಮುಚ್ಚಿ ಸಾರ್ವಜನಿಕವಾಗಿ ಅವಮಾನಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

​ಕಾಂಗ್ರೆಸ್ ಪಕ್ಷವು ಮಹಿಳಾ ಹಕ್ಕುಗಳ ವಿರೋಧಿ, ಸಮಾನ ಪ್ರಾತಿನಿಧ್ಯದ ವಿರೋಧಿ ಹಾಗೂ ಸಾಮಾಜಿಕ ನ್ಯಾಯದ ವಿರೋಧಿ ಎಂಬುದು ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ. ರಾಜ್ಯದ ಜನರು ಕಾಂಗ್ರೆಸ್‌ನ ಈ ನಕಲಿ ಘೋಷಣೆಗಳು ಹಾಗೂ ಬೂಟಾಟಿಕೆಯನ್ನು ಸರಿಯಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಆರ್ ಅಶೋಕ್ ಹೇಳಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಟಿ.ರಘುಮೂರ್ತಿ ಅವರಿಗೆ ಇಂದು ಅದ್ದೂರಿ ಸ್ವಾಗತ ಕೋಟೆ ನಾಡು ಸಜ್ಜು | ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ : ಕೆಯುಡಬ್ಲ್ಯೂಜೆ ಒತ್ತಾಯಕ್ಕೆ ಸರ್ಕಾರದ ಸ್ಪಂದನೆ; ಜುಲೈ 30ರ ಮನವಿಯ ಬೆನ್ನಲ್ಲೇ ಆ.6ಕ್ಕೆ ಸಭೆಡಾ. ರಾಜ್ ಬಗ್ಗೆ ಅಪ ಪ್ರಚಾರ ಸಹಿಸುವುದಿಲ್ಲ-ಕನ್ನಡ ಪರ ಸಂಘಟನೆಗಳ ಆಕ್ರೋಶಪಟ್ಟಣ ಪಂಚಾಯ್ತಿ ಹಗರಣಗಳ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಮಾನವನಾಗಿ ಬಾಳುವುದಕ್ಕಿಂತ ಮಹಾ ಮಾನವನಾಗಿ ಬದುಕುವುದು ಲೇಸು- ದಿವ್ಯ ಜ್ಞಾನಾನಂದಗಿರಿಶ್ರೀಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿಯಾದ ಪರೀಕ್ಷಾ ಅಕ್ರಮಗಳ ತಡೆ ಕಾಯ್ದೆಯಲ್ಲದಕೆರೆ ಗ್ರಾ.ಪಂ.ಗೆ ಮುತ್ತಿಗೆ; ಕುಡಿಯುವ ನೀರಿಗೆ ಆಗ್ರಹಿಸಿ ಪಂಚಾಯಿತಿ ಆವರಣದಲ್ಲೇ ಅಡುಗೆ ಮಾಡಿ ಗ್ರಾಮಸ್ಥರ ಆಕ್ರೋಶ!ಕರಿಯಾಲ ಗ್ರಾಪಂನಲ್ಲಿ ವಿ.ಬಿ. ಗ್ರಾಮ್ ಜಿ ಯೋಜನೆ ಜಾಗೃತಿ: ಕಾರ್ಮಿಕರಿಗೆ ಸಮಾನ ಕೂಲಿ ಹಾಗೂ ಹಕ್ಕುಗಳ ಕುರಿತು ಅಧಿಕಾರಿಗಳಿಂದ ಮಾಹಿತಿನೂತನ ಸಚಿವರ ಆಯ್ಕೆಗೆ ಬಿಜೆಪಿ-ಜೆಡಿಎಸ್ ತೀವ್ರ ಆಕ್ಷೇಪ: ಜಂಟಿ ವಾಗ್ದಾಳಿಜಾಗತಿಕ ತಂತ್ರಜ್ಞಾನದ ಮುಂದಿನ ಕ್ರಾಂತಿ ಕರ್ನಾಟಕದಿಂದಲೇ ರೂಪಗೊಳ್ಳಲಿ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್