Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಸಲ್ಮಾನರನ್ನು ಅತಿಯಾಗಿ ಓಲೈಸಲು ಮುಂದಾದ ಕಾಂಗ್ರೆಸ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸತತ ಹತ್ತು ವರ್ಷಗಳಿಂದ ಅಧಿಕಾರದಿಂದ ದೂರ ಉಳಿದಿರುವ ಕಾಂಗ್ರೆಸ್ ಪಕ್ಷ ಹೇಗಾದರೂ ಮಾಡಿ ಮರಳಿ ಅಧಿಕಾರ ಪಡೆಯಬೇಕೆಂದು ಹೆಣಗಾಡುತ್ತಿದೆ. ಅದಕ್ಕಾಗಿ ಕಾಂಗ್ರೆಸ್ ತಾನು ಆರಂಭದಿಂದಲೂ ಅಂಟಿಕೊಂಡಿದ್ದ ಓಲೈಕೆಯ ನೀತಿಯನ್ನು ಮತ್ತೊಂದು ಹಂತಕ್ಕೆ ಏರಿಸಿದೆ ಎಂದು ಬಿಜೆಪಿ ಟ್ವೀಟ್ ಮಾಡಿ ಆರೋಪಿಸಿದೆ.

ಕಾಂಗ್ರೆಸ್ ಈಗ ನೇರವಾಗಿ ಮೀಸಲಾತಿಯ ಬುಟ್ಟಿಗೆ ಕೈ ಹಾಕಿದೆ. ದಲಿತರು, ಹಿಂದುಳಿದವರು ತಮ್ಮ ಕೈ ಹಿಡಿಯುತ್ತಿಲ್ಲ‌ಎಂದು ಕಾಂಗ್ರೆಸ್ ಪಕ್ಷಕ್ಕೆ ಅರಿವಾಗುತ್ತಲೇ ಮುಸಲ್ಮಾನರನ್ನು ಅತಿಯಾಗಿ ಓಲೈಸಲು ಮುಂದಾಗಿದೆ. ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಯಲಿದ್ದು,

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ದಲಿತರ, ಹಿಂದುಳಿದವರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ನೀಡಲು ಷಡ್ಯಂತ್ರ ರೂಪಿಸಿದೆ ಎಂದು ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದೆ. ಮಹಾರಾಷ್ಟ್ರದಲ್ಲಿ ಉಲೇಮಾ ಅಸೋಸಿಯೇಷನ್, ಮುಸ್ಲಿಂ ಸಮುದಾಯಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ 10% ರಷ್ಟು ಮೀಸಲು ಕೋರಿ ಕಾಂಗ್ರೆಸ್ ಪಕ್ಷಕ್ಕೆ ಮನವಿ ಸಲ್ಲಿಸಿದೆ.

ಇದಕ್ಕೆ ಮಹರಾಷ್ಟ್ರ ಕಾಂಗ್ರೆಸ್ ಒಪ್ಪಿದೆ. ಕಾಂಗ್ರೆಸ್ಸಿನ ಈ ನಿರ್ಧಾರದಿಂದಾಗಿ ಬುಡಕಟ್ಟು ಜನಾಂಗ, ದಲಿತರು ಹಾಗೂ ಹಿಂದುಳಿದ ವರ್ಗಗಳ ಅವಕಾಶಗಳಿಗೆ ಕುತ್ತು ಬರಲಿದೆ ಎಂದು ಬಿಜೆಪಿ ಆತಂಕ ವ್ಯಕ್ತ ಪಡಿಸಿದೆ. ಕೇವಲ ಮತಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಪಕ್ಷ ದಲಿತರು ಹಾಗೂ ಹಿಂದುಳಿದವರ ಬದುಕಿಗೆ ಕೊಳ್ಳಿ ಇಡುತ್ತಿದೆ.

ಸ್ವತಃ ಬಾಬಾ ಸಾಹೇಬ್ ಅಂಬೇಡ್ಕರ್ ಅವರೂ ಕೂಡಾ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ತಪ್ಪು ಎಂದು ಸ್ಪಷ್ಟವಾಗಿ ತಿಳಿಸಿದ್ದರೂ ಮುಸಲ್ಮಾನರನ್ನು ಮೆಚ್ಚಿಸಲು ಕಾಂಗ್ರೆಸ್ ಇಂದು ಅಂಬೇಡ್ಕರ್ ಅವರ ಮಾತುಗಳಿಗೂ ಕಿಮ್ಮತ್ತು ನೀಡುತ್ತಿಲ್ಲ ಎಂದು ಬಿಜೆಪಿ ಆರೋಪಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ