ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂಪುಟ ವಿಸ್ತರಣೆಯ ಈ ರಾಜಕೀಯ ಹಗ್ಗಜಗ್ಗಾಟದ ನಡುವೆಯೇ, ಬಾಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಆಯ್ದ ಕಾಂಗ್ರೆಸ್ ಶಾಸಕರಿಗೆ ಹಮ್ಮಿಕೊಂಡಿದ್ದ ಔತಣಕೂಟ ಭಾರಿ ಕುತೂಹಲ ಮೂಡಿಸಿದೆ.
ಭಾಗವಹಿಸಿದ್ದ ಪ್ರಮುಖರು: ಸಿಎಂ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ ಅವರ ಹಕ್ಕನ್ನು ಬಹಿರಂಗವಾಗಿ ಸಮರ್ಥಿಸುತ್ತಾ ಬಂದಿರುವ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ, ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ, ಮದ್ದೂರು ಶಾಸಕ ಕದಲೂರು ಉದಯ್, ಶಿರಾ ಶಾಸಕ ಟಿ.ಬಿ. ಜಯಚಂದ್ರ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ, ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹಾಗೂ ನೂತನ ವಿಧಾನ ಪರಿಷತ್ ಸದಸ್ಯ ವಿನಯ್ ಕಾರ್ತಿಕ್ ಸೇರಿದಂತೆ ಹಲವರು ಈ ಔತಣಕೂಟದಲ್ಲಿ ಭಾಗಿಯಾಗಿದ್ದರು.
ಉದ್ದೇಶ: ಡಿ.ಕೆ. ಸುರೇಶ್ ಪರವಾಗಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರೇ ಮುಂಚೂಣಿಯಲ್ಲಿ ನಿಂತು ಈ ಔತಣಕೂಟ ಆಯೋಜಿಸಿದ್ದು, ಮುಂದಿನ ರಾಜಕೀಯ ಲೆಕ್ಕಾಚಾರಗಳಿಗಾಗಿ ಶಾಸಕರೊಂದಿಗೆ ಬಾಂಧವ್ಯ ಗಟ್ಟಿಗೊಳಿಸಿಕೊಳ್ಳುವ ಉದ್ದೇಶ ಇದರ ಹಿಂದೆ ಎದ್ದುಕಾಣುತ್ತಿದೆ.



