Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಮತಗಳ್ಳತನ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆ ಆ-8ಕ್ಕೆ ಮುಂದೂಡಿಕೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಹುಲ್ ಗಾಂಧಿ ನೇತೃತ್ವದಲ್ಲಿ ಆ.5ರಂದು ಮಂಗಳವಾರ ನಗರದ ಫ್ರೀಡಂ ಪಾರ್ಕ್​ನಲ್ಲಿ ನಡೆಸಲು ಉದ್ದೇಶಿಸಿದ್ದ ಮತಗಳ್ಳತನ ವಿರುದ್ಧದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶವನ್ನು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್​ ನಿಧನದ ಹಿನ್ನೆಲೆಯಲ್ಲಿ ಆಗಸ್ಟ್-​​ 8ಕ್ಕೆ ಮುಂದೂಡಲಾಗಿದೆ.


ಈ ಬಗ್ಗೆ ಮಾತನಾಡಿರುವ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.


ಮಾಜಿ ಸಿಎಂ ಶಿಬು ಸೊರೇನ್ ನಿಧನರಾಗಿದ್ದು ಈ ಬಗ್ಗೆ ಸಿಎಂ ಹೇಮಂತ್ ಸೊರೇನ್ ಮಾಹಿತಿ ನೀಡಿದ್ದಾರೆ. ನಮ್ಮ ಶ್ರದ್ಧಾಂಜಲಿಯನ್ನು ಶಿಬು ಸೊರೇನ್​​ಗೆ ಅರ್ಪಿಸುತ್ತೇವೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಡಿ.ಕೆ.ಶಿವಕುಮಾರ್ ಜೊತೆ ಮಾತನಾಡಿದ್ದಾರೆ. ಹೀಗಾಗಿ ಪ್ರತಿಭಟನೆ ಮುಂದೂಡಿ ಆಗಸ್ಟ್ 8 ರಂದು ಮಾಡಲು ತೀರ್ಮಾನ ಮಾಡಿದ್ದೇವೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಇದೇ ವೇಳೆ ಮಾತನಾಡಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆಯನ್ನು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಆಗಸ್ಟ್ 8ಕ್ಕೆ ಮುಂದೂಡಲಾಗಿದೆ. ಶಿಬು ಸೊರೇನ್ ಬುಡಕಟ್ಟು ಸಮುದಾಯದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷದ ಬಹುಕಾಲದ ಮೈತ್ರಿ ನಾಯಕರು. ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.


ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಶಿಬು ಸೊರೇನ್ ಅವರಿಗೆ ಗೌರವ ಸಲ್ಲಿಸಬೇಕು. ಅವರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆತುರದಲ್ಲಿ ಮಾಡುವುದು ಬೇಡ ಎಂಬ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ. ಶೋಕಾಚರಣೆ ಆಚರಿಸುವ ದಿನ ದೇಶಕ್ಕೆ ಒಂದು ಸಂದೇಶ ನೀಡುವ ಕಾರ್ಯಕ್ರಮ ಬೇಡ ಎಂದು ನಿರ್ಧರಿಸಿದ್ದೇವೆ. ಈ ವಿಚಾರವಾಗಿ ನಮ್ಮ ನಾಯಕರ ಜೊತೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಅವರು ಮಾಹಿತಿ ನೀಡಿದರು.

ಪಕ್ಷದ ನಾಯಕರು, ಶಾಸಕರು, ಕಾರ್ಯಕರ್ತರಿಗೆ ಮಂಗಳವಾರದ ಕಾರ್ಯಕ್ರಮಕ್ಕೆ ಮಾಡಿಕೊಂಡಿರುವ ಸಿದ್ಧತೆ ಹಾಗೆಯೇ ಮುಂದುವರಿಸಿಕೊಂಡು ಹೋಗಬೇಕು ಎಂದು ಮನವಿ ಮಾಡುತ್ತೇನೆ. ಆ.8ರಂದು ಅದೇ ಸ್ಥಳದಲ್ಲಿ, ಅದೇ ಸಮಯಕ್ಕೆ ನಡೆಯಲಿದೆ.

ನಮ್ಮ ಕಾರ್ಯಕರ್ತರು, ಮುಖಂಡರು ಹಾಗೂ ಮತದಾರರು ಈ ಹೋರಾಟದಲ್ಲಿ ಭಾಗವಹಿಸಲು ಬಹಳ ಉತ್ಸುಕರಾಗಿದ್ದಾರೆ. ಅಂತ್ಯಕ್ರಿಯೆ ನಂತರ ಇದರ ಬಗ್ಗೆ ಚರ್ಚಿಸಿ ಮಾಹಿತಿಯನ್ನು ಅವರು ತಿಳಿಸಲಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ