Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆರ್. ಮಂಜುನಾಥ್ ಗೆ ಬ್ಯಾಡರಹಳ್ಳಿ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ

ರಾಜ್ಯದ ಶೇ. 90 ರಷ್ಟು ಜನರಿಗೆ ತಲುಪಿದ ಗ್ಯಾರಂಟಿ ಯೋಜನೆಗಳು: ಕೆಪಿಸಿಸಿ ಉಪಾಧ್ಯಕ್ಷ ಆರ್. ಮಂಜುನಾಥ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕಿನ ಬ್ಯಾಡರಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ
, ಸ್ಥಳೀಯ ಅಭ್ಯರ್ಥಿ ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಆರ್. ಮಂಜುನಾಥ್ ಅವರು ಹಮ್ಮಿಕೊಂಡಿದ್ದ ಬಿರುಸಿನ ಚುನಾವಣಾ ಪ್ರಚಾರಕ್ಕೆ ಗ್ರಾಮಸ್ಥರಿಂದ ಅಭೂತಪೂರ್ವ ಬೆಂಬಲ ಹಾಗೂ ಅದ್ಧೂರಿ ಸ್ವಾಗತ ವ್ಯಕ್ತವಾಯಿತು. ಗ್ರಾಮಕ್ಕೆ ಆಗಮಿಸಿದ ಅವರಿಗೆ ಪೂರ್ಣಕುಂಭ ಸ್ವಾಗತ ಕೋರಿ, ಹೂಮಾಲೆ ಹಾಕಿ ಅತ್ಯಂತ ಸಡಗರದಿಂದ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಆರ್. ಮಂಜುನಾಥ್ ಅವರು, ತಮ್ಮ ವಿದ್ಯಾರ್ಥಿ ಜೀವನದ ದಿನಗಳನ್ನು ಸ್ಮರಿಸುತ್ತಾ, ಅಂದಿನಿಂದಲೇ ತಾವು ನಡೆಸಿಕೊಂಡು ಬಂದ ಸಾಮಾಜಿಕ ಮತ್ತು ರಾಜಕೀಯ ಸಂಘಟನೆಗಳ ಹೋರಾಟದ ಹಾದಿಯನ್ನು ಜನರ ಮುಂದೆ ಹಂಚಿಕೊಂಡರು.

ಗ್ಯಾರಂಟಿಗಳಿಂದ ಜನತೆ ಸಂತೋಷ:
"ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಶೇ. 90 ರಷ್ಟು ಜನರಿಗೆ ನಮ್ಮ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ತಲುಪಿವೆ. ಇದರಿಂದಾಗಿ ರಾಜ್ಯದ ಬಡವರು
, ಮಧ್ಯಮ ವರ್ಗದ ಜನತೆ ಇಂದು ನೆಮ್ಮದಿ ಮತ್ತು ಸಂತೋಷದಿಂದ ಜೀವನ ನಡೆಸುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಜನಪರ ಆಡಳಿತಕ್ಕೆ ಮತ್ತಷ್ಟು ವೇಗ ಸಿಕ್ಕಿದ್ದು, ಜನಸಾಮಾನ್ಯರ ಹಿತದೃಷ್ಟಿಯಿಂದ ಇನ್ನೂ ಹೆಚ್ಚಿನ ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದೆ," ಎಂದು ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದರು.

ಬಿಜೆಪಿ ವಿರುದ್ಧ ವಾಗ್ದಾಳಿ:
ಇದೇ ವೇಳೆ ಪ್ರತಿಪಕ್ಷಗಳ ನೀತಿಯನ್ನು ಖಂಡಿಸಿದ ಅವರು
, "ಬಿಜೆಪಿ ಪಕ್ಷವು ಎಸ್‌ಐಆರ್ ನಂತಹ ವ್ಯವಸ್ಥೆಗಳ ಮೂಲಕ ಬಡವರ ಮತ್ತು ಶೋಷಿತರ ಪವಿತ್ರವಾದ ವೋಟಿನ ಹಕ್ಕನ್ನು ಹೇಗೆ ಕಸಿದುಕೊಳ್ಳುತ್ತಿದೆ" ಎಂಬುದನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟರಲ್ಲದೆ, ಮತದಾರರು ಇಂತಹ ಆಮಿಷ ಮತ್ತು ಸಂಚುಗಳ ವಿರುದ್ಧ ಜಾಗೃತರಾಗಿರಬೇಕು ಎಂದು ಕರೆ ನೀಡಿದರು.

news_1782480034_5_165.webp

 

ಅಂಬೇಡ್ಕರ್ ಆಶಯ ಮತ್ತು ತಾಲೂಕಿನ ಅಭಿವೃದ್ಧಿ:
ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದುಳಿದ
, ದಲಿತ ಹಾಗೂ ಶೋಷಿತ ಜನಾಂಗಗಳ ಕಲ್ಯಾಣ ಮತ್ತು ಹಕ್ಕುಗಳಿಗಾಗಿ ನಡೆಸಿದ ಐತಿಹಾಸಿಕ ಹೋರಾಟಗಳನ್ನು ಸ್ಮರಿಸಿದ ಮಂಜುನಾಥ್, ಅವರ ಆಶಯಗಳ ಅಡಿಯಲ್ಲೇ ಕಾಂಗ್ರೆಸ್ ಮುನ್ನಡೆಯುತ್ತಿದೆ ಎಂದರು. ಮುಂದುವರಿದು, "ಹಿರಿಯೂರು ತಾಲೂಕಿನ ಸಮಗ್ರ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆಯಾಗಿದೆ. ನೀರಾವರಿ, ರಸ್ತೆ, ಉದ್ಯೋಗ ಸೇರಿದಂತೆ ಈ ಭಾಗದ ಮೂಲಸೌಕರ್ಯಗಳ ಸುಧಾರಣೆಗೆ ನಾನು ಪ್ರಾಮಾಣಿಕವಾಗಿ ಶ್ರಮಿಸಲಿದ್ದೇನೆ," ಎಂದು ತಾಲೂಕಿನ ಅಭಿವೃದ್ಧಿಯ ತಮ್ಮ ದೂರದೃಷ್ಟಿಯನ್ನು ಜನರ ಮುಂದಿಟ್ಟರು.

ಕಾರ್ಯಕ್ರಮದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ಪ್ರಮುಖರು ಹಾಗೂ ಬ್ಯಾಡರಹಳ್ಳಿ ಗ್ರಾಮದ ನೂರಾರು ಸಾರ್ವಜನಿಕರು ಭಾಗವಹಿಸಿ ಆರ್. ಮಂಜುನಾಥ್ ಅವರಿಗೆ ಪೂರ್ಣ ಬೆಂಬಲ ಘೋಷಿಸಿದರು.


ಈ ಸಂದರ್ಭದಲ್ಲಿ ಮುಸ್ಲಿಂ ಮುಖಂಡರಾದ ಸಾದತ್ ವುಲ್ಲಾ, ದಾದು, ಬ್ಯಾಡರಹಳ್ಳಿ ಓಬಳೇಶ್, ಮಾಜಿ ನಗರಸಭಾ ಸದಸ್ಯರಾದ ಧನಂಜಯ, ಪದ್ಮನಾಭ, ಮುಖಂಡ ಹೆಚ್.ಆರ್.ತಿಮ್ಮಯ್ಯ ಸೇರಿದಂತೆ ಗ್ರಾಮದ ಹಲವು ಮುಖಂಡರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನ್ಮದಿನಾಚರಣೆಗಳು ದುಂದು ವೆಚ್ಚದ ತೋರಿಕೆಯ ಆಚರಣೆಗಳಾಗಬಾರದು- ಚಂದ್ರಮೋಹನ್ಇನ್ಸ್ಪೆಕ್ಟರ್ ಕಲ್ಲಪ್ಪ ಎಸ್. ಖರತ್ ರವರಿಗೆ ಡಿಜಿ-ಐಜಿಪಿ ಪದಕಕಂಠಪೂರ್ತಿ ಕುಡಿದು ರಸ್ತೆಯಲ್ಲಿ ದಾವಣಗೆರೆ ಯುವತಿ ಹೈಡ್ರಾಮಾ; ಪ್ರಶ್ನಿಸಿದ ಮಹಿಳಾ ಪಿಎಸ್‌ಐಗೆ ಕಾಲಿನಿಂದ ಒದ್ದು ದರ್ಪ!ಸಚಿವ ಜಾರಕಿಹೊಳಿ ಬಾಮೈದನ ನಿವಾಸದ ಮೇಲೆ ಇಡಿ ದಾಳಿ; 13 ಕೋಟಿ ಆಸ್ತಿ, ನೂರಾರು ಬೇನಾಮಿ ಬಾರ್ ಲೈಸೆನ್ಸ್ ಪತ್ತೆ!ತ್ರಿವಳಿ ಕೊಲೆ: ಹಂತಕಿ ಶ್ವೇತಾ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ ಪ್ರಿಯಕರ ಕೆನ್ನೆತ್ ಬಂಧನ!ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಜನರ ವಿರುದ್ಧ FIR ದಾಖಲಿಸಿದ SITಡಿಕೆಶಿ ಜೊತೆ ಯಾವುದೇ ವ್ಯವಹಾರವಿಲ್ಲ, ಹೊಂದಾಣಿಕೆಯೂ ಇಲ್ಲ; ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ!ಮೆಟ್ರೋ ಬಾಗಿಲು ಲಾಕ್ ಆಗದಿರಲು ತಾಂತ್ರಿಕ ದೋಷವಲ್ಲ, ಪ್ರಯಾಣಿಕರ ಸರ ಕಾರಣ! ಅಸಲಿ ಸತ್ಯ ಬಿಚ್ಚಿಟ್ಟ ಬಿಎಂಆರ್‌ಸಿಎಲ್ನಟಿ ಕೃಷಿ ತಾಪಂಡ ಫ್ಲ್ಯಾಟ್‌ಬೆಡ್‌ರೂಮ್‌ನಲ್ಲಿ ಗೆಳೆಯ ಆತ್ಮಹತ್ಯೆ; ಪೊಲೀಸರ ಮುಂದೆ ನಟಿ ಬಿಚ್ಚಿಟ್ಟ ಸತ್ಯ ಇಲ್ಲಿದೆ!ಪ್ರದೀಪ್ ಈಶ್ವರ್‌ಆರೋಪಕ್ಕೆ ಕೈಯಲ್ಲಿದ್ದ HMT ವಾಚ್ ತೋರಿಸಿ ಕುಮಾರಸ್ವಾಮಿ ಟಾಂಗ್!