Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಹಕಾರಿ ಕ್ಷೇತ್ರ ಪ್ರಾಮಾಣಿಕ, ನಂಬಿಕೆ ಮೇಲೆ ನಿಂತಿದೆ: ಸಚಿವ ಸುಧಾಕರ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಸಹಕಾರಿ ಕ್ಷೇತ್ರಗಳಲ್ಲಿ ಅಭಿವೃದ್ದಿ ಸಾಧಿಸಬೇಕಾದರೆ ಪ್ರಾಮಾಣಿಕತೆ ಮತ್ತು ನಂಬಿಕೆ ಸೇವೆ ಬಹಳ ಮುಖ್ಯವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಅನೇಕ ಸಹಕಾರಿ ಬ್ಯಾಂಕ್‌ಗಳು ವಹಿವಾಟಿನಲ್ಲಿ ಅಭಿವೃದ್ದಿ ಸಾಧಿಸಿದ್ದು
, ಬ್ಯಾಂಕ್‌ನ ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿವೆ.

ಗ್ರಾಹಕರ ವಿಶ್ವಾಸಗಳಿಸಿದಲ್ಲಿ ಮಾತ್ರ ಬ್ಯಾಂಕ್ ಅಭಿವೃದ್ದಿಯತ್ತ ದಾಪುಗಾಲಿಡಲು ಸಾಧ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ, ಡಿಸಿಸಿಬ್ಯಾಂಕ್ ಜಿಲ್ಲಾಧ್ಯಕ್ಷ ಹಾಗೂ ಹೊಯ್ಸಳ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಿ.ಸುಧಾಕರ ತಿಳಿಸಿದರು.


ಅವರು, ಶನಿವಾರ ಬ್ಯಾಂಕ್ ಕಚೇರಿ ಆವರಣದಲ್ಲಿ ೨೦೨೩-೨೪ನೇ ಸಾಲಿನ ೨೨ನೇ ವರ್ಷದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾರಂಭದ ಹಂತದಲ್ಲಿ ಕೇವಲ ಕೆಲವೇ ಜನರ ಸಹಕಾರದೊಂದಿಗೆ ಆರಂಭಗೊಂಡ ಹೊಯ್ಸಳ ಕ್ರೆಡಿಟ್ ಸೌಹಾರ್ಧ ಸಹಕಾರಿ ಸಂಘ ನಿಯಮಿತ ಇಂದು ನಿಮ್ಮೆಲ್ಲರ ಸಹಕಾರದಿಂದ ಉತ್ತಮ ಲಾಭದತ್ತ ಮುನ್ನಡೆದಿದೆ.

ಸೌಹಾರ್ಧ ಸಹಕಾರಿ ಕ್ಷೇತ್ರದ ಮುಂಚೂಣಿ ಬ್ಯಾಂಕ್‌ಗಳಲ್ಲಿ ಹೊಯ್ಸಳ ಕ್ರೆಡಿಟ್ ಸೌಹಾರ್ಧ ಸಹ ಒಂದಾಗಿದೆ. ಬ್ಯಾಂಕ್‌ನ ಆರ್ಥಿಕ ಬಲವರ್ಧನೆಗೆ ಪ್ರಾಮಾಣಿಕವಾಗಿ ಸಹಕರಿಸುತ್ತಿರುವ ಬ್ಯಾಂಕ್‌ನ ಎಲ್ಲಾ ನಿರ್ದೇಶಕರಿಗೂ, ಸಿಬ್ಬಂದಿ ವರ್ಗಕ್ಕೂ ಗ್ರಾಹಕರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಸಹಕಾರದಿಂದ ಇನ್ನೂ ಹೆಚ್ಚಿನ ಆರ್ಥಿಕ ಸಾಧನೆಯನ್ನು ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವೆ.

ಹೊಯ್ಸಳ ಕ್ರೆಡಿಟ್ ಸೌಹಾರ್ಧ ಬ್ಯಾಂಕ್ ಇನ್ನೂ ಕೆಲವೇ ದಿನಗಳಲ್ಲಿ ಹಲವಾರು ನೂತನ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದರು. ಮಹಾಸಭೆಯಲ್ಲಿ ನಿರ್ದೇಶಕರಾದ ಸಿ.ವೀರಭದ್ರಬಾಬು, ಪ್ರಹ್ಲಾದ್‌ಶೆಟ್ಟಿ, ಎಸ್.ಕೆ.ಮರಳಿ, ವ್ಯವಸ್ಥಾಪಕ ವೀರೇಶ್‌ಹಳ್ಳೇರ ಮುಂತಾದವರು ಪಾಲ್ಗೊಂಡಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ