Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಂಸ್ಕೃತಿಕ ಕಲೆ ಸಮುದಾಯಗಳನ್ನು ಬೆಸೆಯುತ್ತದೆ-ರವಿಕುಮಾರ್

Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಮ್ಮ ಜೀವನದ ಆನೇಕ ಕಲೆ ಸಂಸ್ಕೃತಿಯ ಬಗ್ಗೆ ಉತ್ತೇಜಿಸುವುದು ಅನಿವಾರ್ಯವಾಗಿದೆ   ಎಂದು  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಡಿ.ಎಂ.ರವಿಕುಮಾರ್ ಹೇಳಿದರು.


ಅವರು ನಗರದ ಕನ್ನಡ ಜಾಗೃತಿ ಭವನದಲ್ಲಿ ನಾಟ್ಯ ಮಯೂರಿ ಕಲಾ ಕೇಂದ್ರ ಟ್ರಸ್ಟ್‌ವತಿಯಿಂದ ಆಯೋಜಿಸಲಾಗಿದ್ದ 14ನೇ ವಾರ್ಷಿಕೋತ್ಸವ ಕರುನಾಡ ಸಾಂಸ್ಕೃತಿಕ ಉತ್ಸವ - 2026 ಉದ್ಘಾಟಿಸಿ ಮಾತನಾಡಿದ ಅವರು


ಸಾಂಸ್ಕೃತಿಕ ಕಲೆ ಎಂದರೆ ಒಂದು ಜನಾಂಗದ ಅಥವಾ ಪ್ರದೇಶದ ಜೀವನಶೈಲಿ, ನಂಬಿಕೆಗಳು, ಸಂಪ್ರದಾಯಗಳು ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುವ ಸೃಜನಶೀಲ ಅಭಿವ್ಯಕ್ತಿಗಳಾದ ಚಿತ್ರಕಲೆ, ಶಿಲ್ಪಕಲೆ, ಸಂಗೀತ, ನೃತ್ಯ, ರಂಗಭೂಮಿ, ಸಾಹಿತ್ಯ ಇತ್ಯಾದಿಗಳ ಸಂಗ್ರಹವಾಗಿದೆ. ಇದು ಇತಿಹಾಸಪೂರ್ವ ಕಾಲದಿಂದಲೂ ಪ್ರಚಲಿತದಲ್ಲಿದ್ದು ಸಮುದಾಯಗಳನ್ನು ಬೆಸೆಯುತ್ತದೆ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುತ್ತದೆ. ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ, ಯಕ್ಷಗಾನ, ವೀರಗಾಸೆ, ಡೊಳ್ಳು ಕುಣಿತ, ಕಂಸಾಳೆ ಮುಂತಾದ ಜಾನಪದ ಕಲೆಗಳು ಮತ್ತು ಶಾಸ್ತ್ರೀಯ ಸಂಗೀತ, ಭರತನಾಟ್ಯಗಳು ಪ್ರಮುಖವಾಗಿವೆ ಎಂದರು.


ನಂತರ  ಕನ್ನಡಪರ ಹಿರಿಯ  ಹೋರಾಟಗಾರ ತ.ನ. ಪ್ರಭುದೇವ್ ಮಾತನಾಡಿ, ನಾವು ನಮ್ಮ ಸಂಸ್ಕೃತಿಯನ್ನು ಕಲೆಯನ್ನು ಉಳಿಸಿಕೊಳ್ಳಲು ಇಂತಹ ಕಾರ್ಯಕ್ರಮಗಳನ್ನು ಮಾಡಬೇಕು. ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಎಲ್ಲರೂ ಪ್ರೋತ್ಸಾಹಿಸಬೇಕಾಗಿದೆ. ನಾಟ್ಯ ಮಯೂರಿ ಕಲಾ ಸಂಘವು ಕಳೆದ 14 ವರ್ಷಗಳಿಂದ ನಿರಂತರವಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬಂದಿರುವುದು ಸಂತೋಷದ ಸಂಗತಿ. ನಾಟ್ಯ ಮಯೂರಿ ಕಲಾ ಕೇಂದ್ರವು ತಾಲ್ಲೂಕಿನ ಹೂಸ ಪ್ರತಿಭೆಗಳನ್ನು ಹೊರತರಲು ಉತ್ತಮ ವೇದಿಕೆಯಾಗಿದೆ ಎಂದು ಶುಭ ಹಾರೈಸಿದರು.


 ಸಾಧಕರಿಗೆ ಸನ್ಮಾನ;
ಪೋಷಕರು ಹಾಗು ವಿದ್ಯಾರ್ಥಿಗಳಿಂದ ಸಾಮೂಹಿಕ ನೃತ್ಯ
, ಜಾನಪದ ನೃತ್ಯ, ಭರತ ನಾಟ್ಯ, ಗಾಯನ ಕಾರ್ಯಕ್ರಮ ನಡೆಯಿತು. ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಮಾಡಲಾಯಿತು.


 ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ನಂಜುಂಡೇಶ್ವರಸ್ವಾಮಿ ಬಾಬು, ಕನ್ನಡ ಜಾಗೃತ ಪರಿಷತ್‌ಅಧ್ಯಕ್ಷ ಕೆ.ವೆಂಕಟೇಶ, ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ನಾಗರಾಜ್, ನೇಕಾರ ಹೋರಾಟ ಸಮಿತಿಯ ಅದ್ಯಕ್ಷ ಹೇಮಂತರಾಜು, ಮಹಿಳಾ ಸಮಾಜದ ಅದ್ಯಕ್ಷೆ ಎಂ.ಕೆ. ವತ್ಸಲಾ, ಕನ್ನಡ ಪ್ರಾಧ್ಯಾಪಕೆ ಕೆ.ಎಚ್.ಸುಮಲತಾ, ಲಯನ್ಸ್ ಕ್ಲಬ್ ಉಪಾದ್ಯಕ್ಷೆ ವಸುಂದರಾ ದೇವಿ, ಹಿರಿಯ ಕಲಾವಿದೆ ನಾಗರತ್ನಮ್ಮ, ಕೆಂಪೇಗೌಡ ಮಹಿಳಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಲಕ್ಷ್ಮಮ್ಮ, ನಾಟ್ಯ ಮಯೂರಿ ಕಲಾ ಕೇಂದ್ರ 9 ಟ್ರಸ್ಟ್ ಅಧ್ಯಕ್ಷೆ ಮೈತ್ರಾ ಅರುಣಮೂರ್ತಿ, ಕಾರ್ಯದರ್ಶಿ ಹಂಸವೇಣಿ ವಿನಯ್ ಕುಮಾರ್ ಕಲಾ ಪ್ರತಿಭೆಗಳು ಹಾಜರಿದ್ದರು.


 


 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ