Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾ

Advertisement
Advertisement

ಚಂದ್ರವಳ್ಳಿ ನ್ಯೂಸ್, ವಿಜಯನಗರ:
ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಅಂಗವಾಗಿ ವಿಜಯನಗರ ಜಿಲ್ಲಾ ಪೊಲೀಸ್ ಹಾಗೂ ಹೊಸಪೇಟೆ ಉಪವಿಭಾಗದ ವತಿಯಿಂದ ಗುರುವಾರ ಹೊಸಪೇಟೆಯಲ್ಲಿ ಜಾಗೃತಿ ಸೈಕಲ್ ಜಾಥಾ ಆಯೋಜಿಸಲಾಯಿತು.

ಈ ಕಾರ್ಯಕ್ರಮವನ್ನು ನಗರ ವೈದ್ಯರದ ಡಿ.ಆರ್ ಸಾಲಿಯಾನ್,ಮತ್ತು ವೇದಿಕೆ ಮೇಲಿನ ಗಣ್ಯರು ಸಸಿಗೆ ನಿರೂಹಾಕುವುದರ ಮೂಲಕ ಉದ್ಘಾಟಿಸಿದರು ತದನಂತರ ಮಾತನಾಡಿದ ಡಿ.ಆರ್ ಸಾಲಿಯಾನ್ ರವರು ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಈ ಮಾಡಾಕ ವ್ಯಾಸನಕ್ಕೆ ಬಲಿಯಾಗುತ್ತಿದ್ದಾರೆ ನಾನು ಹಲವಾರು ವ್ಯಾಸನಿಗಳಿಗೆ ಚಿಕಿತ್ಸೆ ಮಾಡುವುದರ ಮೂಲಕ ಪುನಃ ವ್ಯಾಸನಕ್ಕೆ ಹೋಗದಂತೆ ತಿಳಿಸುತ್ತೇನೆ ಎಂದರು.

ಈ ಕಾರ್ಯಕ್ರಮಕ್ಕೆ ವಿಜಯನಗರ ಜಿಲ್ಲೆಯ ಹೊಸಪೇಟೆ ಹಲವಾರು ಶಾಲೆಗಳ ಮಕ್ಕಳು ಸೈಕಲ್ ಮೂಲಕ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ಸು ಗೊಳಿಸಿದರು.

ಹೊಸಪೇಟೆಯ ಡಾ. ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಎಸ್. ಜಾಹ್ನವಿ ಸೈಕಲ್ ಜಾಥಾಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಪಿ ಎಸ್. ಜಾಹ್ನವಿ ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ ಹದಗೆಡುವುದಷ್ಟೇ ಅಲ್ಲ, ಕುಟುಂಬವೂ ಸಂಕಷ್ಟಕ್ಕೆ ಸಿಲುಕುತ್ತದೆ. ಪ್ರತಿಯೊಬ್ಬರೂ ಮಾದಕ ವಸ್ತುಗಳಿಂದ ದೂರವಿರಬೇಕು. ಎಲ್ಲಿಯಾದರೂ ಮಾದಕ ವಸ್ತುಗಳ ಸೇವನೆ ಅಥವಾ ಮಾರಾಟ ನಡೆಯುತ್ತಿರುವುದು ಗಮನಕ್ಕೆ ಬಂದರೆ ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು" ಎಂದು ಮನವಿ ಮಾಡಿದರು.

ಮಾದಕ ವ್ಯಸನದಿಂದ ಅನೇಕ ಯುವಕರು ತಮ್ಮ ಜೀವ ಕಳೆದುಕೊಂಡಿದ್ದಾರೆ. ಆದ್ದರಿಂದ ಯುವಜನರಲ್ಲಿ ನಿರಂತರ ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯವಾಗಿದೆ. ಮಾದಕ ವಸ್ತುಗಳ ವಿರೋಧಿ ಜಾಗೃತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಅವರು ತಿಳಿಸಿದರು.

ಡಾ. ಪುನೀತ್ ರಾಜ್‌ಕುಮಾರ್ ವೃತ್ತದಿಂದ ಆರಂಭವಾದ ಸೈಕಲ್ ಜಾಥಾ , ಮಾಡ್ರನ್ ಸರ್ಕಲ್,ಪುಣ್ಯ ಮೂರ್ತಿ ಸರ್ಕಲ್, ತ್ರೀ ಶಾಪ್  ಸರ್ಕಲ್, ಮೇನ್ ಮಾಸ್ಕ್, ರಾಮ ಸರ್ಕಲ್, ವಾಲ್ಮೀಕಿ ಸರ್ಕಲ್, ಮಾರ್ಕಂಡೇಶ್ವರ ದೇವಸ್ಥಾನ ಕ್ರಾಸ್, ಹಂಡ್ರೆಡ್ ಬೆಡ್ ಹಾಸ್ಪಿಟಲ್ ರೋಡ್,ಜಿಲ್ಲಾ ಗ್ರಂಥಾಲಯ,ಇಂಡೋರ್ ಸ್ಟೇಡಿಯಂ.

ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿತು.

ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯ ಪೊಲೀಸ್ ಅಧಿಕಾರಿಗಳದ ಎಸ್‌.ಪಿ ಎಸ್.ಜಾಹ್ನವಿ. ಹೆಚ್ಚುವರಿ ಎಸ್.ಪಿ ಮಂಜುನಾಥ್. ಡಿ.ವೈ.ಎಸ್‌.ಪಿ.ಮುರುಳಿದರ್.  ಪಿ.ಐ ಗುರುರಾಜ್. ಫಾಜುಲ್ಲಾ ಮತ್ತು ಆರ್.ಪಿ.ಐ ಗೋವಿಂದರಾಜ್ ಮತ್ತು ನಗರದ ವೈದ್ಯರದ ಡಿ.ಆರ್ ಸಾಲಿಯಾನ್. ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು ನಿಧಿ ಹಂಚಿಕೆಯಲ್ಲಿ ತಾರತಮ್ಯ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್‌ಅಶೋಕ್ ತೀವ್ರ ವಾಗ್ದಾಳಿ!ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಪಾರದರ್ಶಕತೆ: ಚುನಾವಣಾ ಆಯೋಗಕ್ಕೆ ಕರ್ನಾಟಕ ಸಚಿವ ಸಂಪುಟದ ಬಿಗಿ ಷರತ್ತುಗಳು!ಖ್ಯಾತ ಹಿರಿಯ ಚಿತ್ರ ಕಲಾವಿದ ಕೆ.ಟಿ ಶಿವಪ್ರಸಾದ್ ನಿಧನ!ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಬೇಲೂರು ಶಾಸಕ ಆಣೆ ಪ್ರಮಾಣ!ಜಿಲ್ಲಾಸ್ಪತ್ರೆಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಕೋಟ್ಯಂತರ ಮೌಲ್ಯದ ಸಲಕರಣೆ ಭಸ್ಮ, ಕೂದಲೆಳೆ ಅಂತರದಲ್ಲಿ ತಪ್ಪಿದ ಪ್ರಾಣಾಪಾಯ!ವಿಚಾರಣೆ ನೆಪದಲ್ಲಿ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ: ಪಿಎಸ್‌ಐ ಪೋಕ್ಸೋ ಕಾಯ್ದೆಯಡಿ ಬಂಧನ!ಬಿಡದಿ ಬೃಹತ್ ಉಪನಗರ ಯೋಜನೆಗೆ ಹೈಕೋರ್ಟ್ ಬ್ರೇಕ್? ಸರ್ಕಾರದ ವಿರುದ್ಧ ಸಲ್ಲಿಕೆಯಾಯ್ತು ಸಾರ್ವಜನಿಕ ಹಿತಾಸಕ್ತಿ ಅರ್ಜಿ!ಶತಮಾನದ ಸಾಮಾಜಿಕ ಅಂತರಕ್ಕೆ ಬ್ರೇಕ್: ಸೌಹಾರ್ದಯುತವಾಗಿ ದೇವಸ್ಥಾನ ಪ್ರವೇಶಿಸಿದ ದಲಿತರು!ಹದಿಹರೆಯ ವಯಸ್ಸಿನ ಆವೇಗಕ್ಕೆ ವಿವೇಕದ ಅಂಕುಶ ಅಗತ್ಯಅಂತರರಾಷ್ಟ್ರೀಯ ಚಿತ್ರಕಲಾವಿದ ಕೆ.ಟಿ ಶಿವಪ್ರಸಾದ್ ನಿಧನ