Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ನೌಕರರ ವಾರ್ಷಿಕ ಕ್ರೀಡಾಕೂಟ ಆಯೋಜನೆಗೆ ನಿರ್ಧಾರ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
      ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ವಿವಿಧ ಪದಾಧಿಕಾರಿಗಳ ಪದಗ್ರಹಣ ನಗರದ ಸರ್ಕಾರಿ ನೌಕರರ ಸಂಘ ಭವನದ ಸಭಾಂಗಣದಲ್ಲಿ ನೆರವೇರಿತು.  ಅಲ್ಲದೆ ಬರುವ ಏಪ್ರಿಲ್ ೧೬ ಮತ್ತು ೧೭ ರಂದು ಜಿಲ್ಲಾ ಸರ್ಕಾರಿ ನೌಕರರ ವಾರ್ಷಿಕ ಕ್ರೀಡಾಕೂಟ ಆಯೋಜಿಸಲು ಇದೇ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

      ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ೨೦೨೪-೨೯ ರ ಅವಧಿಗೆ ಆಯ್ಕೆಯಾದ ನೂತನ ನಿರ್ದೇಶಕರಿಗೆ ಪದಾಧಕಾರಿಗಳ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ಜಿಲ್ಲಾ ಶಾಖೆಗೆ ಅಧ್ಯಕ್ಷರಾಗಿ ಮಾಲತೇಶ ಮುದಜ್ಜಿ, ಜಿಲ್ಲಾ ಕಾರ್ಯದರ್ಶಿಯಾಗಿ ಶ್ರೀನಿವಾಸ ಆರ್., ಜಿಲ್ಲಾ ಖಜಾಂಚಿಯಾಗಿ ಮಲ್ಲಿಕಾರ್ಜುನ ಎ, ರಾಜ್ಯ ಪರಿಷತ್ ಸದಸ್ಯರಾಗಿ ರಾಜಪ್ಪ ಎಸ್ ಅವರು ಆಯ್ಕೆಯಾಗಿ, ಅಧಿಕಾರ ವಹಿಸಿಕೊಂಡಿದ್ದರು.  ಇದೀಗ ಜಿಲ್ಲಾ ಶಾಖೆಯ ವಿವಿಧ ಪದಾಧಿಕಾರಿಗಳ ಸ್ಥಾನಗಳಿಗೆ ನಿರ್ದೇಶಕರನ್ನು ಆಯ್ಕೆ ಮಾಡಲಾಗಿದ್ದು,

ಗೌರವಾಧ್ಯಕ್ಷರನ್ನಾಗಿ ನಾರಾಯಣಸ್ವಾಮಿ  ಎಂ., ಕಾರ್ಯಾಧ್ಯಕ್ಷರಾಗಿ ವಿಶ್ವನಾಥ ಬಿ.ಟಿ., ಹಿರಿಯ ಉಪಾಧ್ಯಕ್ಷರಾಗಿ ಡಾ. ಚಂದ್ರಕಾಂತ್ ನಾಗಸಮುದ್ರ, ಉಪಾಧ್ಯಕ್ಷರಾಗಿ ತುಕಾರಾಂರಾವ್ ಬಿ.ವಿ., ವಿಮಲಾಕ್ಷಿ ಬಿ., ಪೂಜಾರ್ ಹೆಚ್. ರುದ್ರಮುನಿ ಬಿ., ನಯಾಜ್ ಅಹ್ಮದ್ ಖಾನ್, ಸಹ ಕಾರ್ಯದರ್ಶಿಯಾಗಿ ಯಶವಂತಕುಮಾರ್, ಸುನೀಲ್‌ಕುಮಾರ್ ಸೇರಿದಂತೆ ಜಂಟಿಕಾರ್ಯದರ್ಶಿಗಳು, ಸಂಘಟನಾ ಕಾರ್ಯದರ್ಶಿಗಳು, ಸಾಂಸ್ಕೃತಿಕ ಕಾರ್ಯದರ್ಶಿಗಳು, ಕ್ರೀಡಾ ಕಾರ್ಯದರ್ಶಿಗಳು, ಆಂತರಿಕ ಲೆಕ್ಕ ಪರಿಶೋಧಕರು ಒಳಗೊಂಡಂತೆ ವಿವಿಧ ಪದಾಧಿಕಾರಿಗಳ ಹುದ್ದೆಗೆ ನೇಮಕಗೊಂಡವರ ಪದಗ್ರಹಣ ಸಮಾರಂಭದಲ್ಲಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಿಸಿ ಸನ್ಮಾನಿಸಲಾಯಿತು.

     ಬಳಿಕ ಜಿಲ್ಲಾ ಅಧ್ಯಕ್ಷ ಮಾಲತೇಶ್ ಮುದಜ್ಜಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಸರ್ಕಾರಿ ನೌಕರರ ವಾರ್ಷಿಕ ಕ್ರೀಡಾಕೂಟ ಆಯೋಜಿಸುವ ಬಗ್ಗೆ ಚರ್ಚಿಸಿ, ಎಲ್ಲ ನೌಕರ ವೃಂದದವರಿಗೂ ಅನುಕೂಲವಾಗುವಂತೆ ಕ್ರೀಡಾಕೂಟವನ್ನು ಏಪ್ರಿಲ್ ೧೬ ಮತ್ತು ೧೭ ರಂದು ಜರುಗಿಸಲು ನಿರ್ಧರಿಸಲಾಯಿತು.

ಒಳಾಂಗಣ ಮತ್ತು ಹೊರಾಂಗಣ ಸ್ಪರ್ಧೆಗಳನ್ನು ಆಯ್ಕೆ ಮಾಡಿಕೊಂಡು, ಎಲ್ಲಾ ತಾಲ್ಲೂಕುಗಳಿಂದ ರಾಜ್ಯ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು, ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲ ನೌಕರರಿಗೆ ಒಒಡಿ ಸೌಲಭ್ಯ ಕಲ್ಪಿಸುವುದು, ನೌಕರರು ಪಾಲ್ಗೊಳ್ಳಲು ಆನ್‌ಲೈನ್‌ನಲ್ಲಿ ಕಡ್ಡಾಯವಾಗಿ ನೊಂದಣಿ ಮಾಡಿಕೊಳ್ಳಲು ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು.  ನೌಕರರು ತಮ್ಮ ಕೆಜಿಐಡಿ ಸಂಖ್ಯೆಯೊಂದಿಗೆ ಆಯಾ ಕಚೇರಿ ಮುಖ್ಯಸ್ಥರಿಂದ ದೃಢೀಕರಣ ಪತ್ರವನ್ನು ಹಾಜರುಪಡಿಸಬೇಕು. 

ಬೇಸಿಗೆ ಕಾಲವಾಗಿರುವುದರಿಂದ, ಕ್ರೀಡಾಂಗಣದಲ್ಲಿ ಕುಡಿಯುವ ನೀರು, ನೆರಳು, ತುರ್ತು ವೈದ್ಯಕೀಯ ನೆರವು, ಊಟೋಪಹಾರ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಪ್ರತ್ಯೇಕವಾಗಿ ಉಪಸಮಿತಿಗಳನ್ನು ರಚಿಸಲು ನಿರ್ಧರಿಸಲಾಯಿತು.  ವಾರ್ಷಿಕ ಕ್ರೀಡಾಕೂಟ ಆಯೋಜನೆ ಕುರಿತಂತೆ ಸಂಬಂಧಪಟ್ಟ ಎಲ್ಲ ಇಲಾಖಾ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಗುವುದು.  ಎಲ್ಲಾ ವೃಂದದ ನೌಕರರ ಸಹಭಾಗಿತ್ವದಲ್ಲಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಎಲ್ಲ ಉಪಸಮಿತಿಯವರು, ಪದಾಧಿಕಾರಿಗಳು ತಮಗೆ ವಹಿಸುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಿ ಸಹಕಾರ ನೀಡಬೇಕು ಎಂದು ಅಧ್ಯಕ್ಷ ಮಾಲತೇಶ ಮುದಜ್ಜಿ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

      ನೌಕರರ ಸಂಘಕ್ಕೆ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾಗಿರುವ ರಾಜೇಂದ್ರ ಚಕ್ರವರ್ತಿ ಅವರು ಮಾತನಾಡಿ, ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ವಾರ್ಷಿಕ ಕ್ರೀಡಾ ಕೂಟವನ್ನು ಆಯೋಜಿಸಿರುವುದು ನೌಕರರ ಹಿತದೃಷ್ಟಿಯಿಂದ ಸ್ವಾಗತಾರ್ಹವಾಗಿದೆ.  ನಾವೆಲ್ಲರೂ ಒಟ್ಟಾಗಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಸಹಕಾರ ನೀಡುತ್ತೇವೆ ಎಂದರು.

     ಜಿಲ್ಲಾ ಸಂಘದ ಕಾರ್ಯದರ್ಶಿ ಶ್ರೀನಿವಾಸ ಆರ್., ಖಜಾಂಚಿ ಮಲ್ಲಿಕಾರ್ಜುನ ಎ, ರಾಜ್ಯ ಪರಿಷತ್ ಸದಸ್ಯ ರಾಜಪ್ಪ ಎಸ್ ಸೇರಿದಂತೆ ನೌಕರರ ಸಂಘದ ವಿವಿಧ ಪದಾಧಿಕಾರಿಗಳು, ನಿರ್ದೇಶಕರುಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.     

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ