Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅವಶೇಷಗಳಡಿ ಸಿಲುಕಿದ್ದ ವೃದ್ಧ ದಂಪತಿಗಳ ರಕ್ಷಿಸಿದ ಅಗ್ನಿಶಾಮಕದಳ

Advertisement
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಭಾರೀ ಮಳೆಯಿಂದಾಗಿ ಮನೆಯೊಂದು ಕುಸಿದು ಬಿದ್ದಿದ್ದು ಅವಶೇಷಗಳಡಿ ಸಿಲುಕಿದ ವೃದ್ಧ ದಂಪತಿಯನ್ನು ರಕ್ಷಣೆ ಮಾಡಿರುವ ಘಟನೆ ಮೆಹಬೂಬ್ ನಗರದಲ್ಲಿ ನಡೆದಿದೆ.


ಅವಶೇಷಗಳಡಿ ಸಿಲುಕಿದ್ದ ವೃದ್ಧ ದಂಪತಿಗಳಾದ ಶೇಖ್ ಬುಡೇನ್ ಸಾಬ್ (85), ನೂರ್ ಜಹಾನ್ (76) ಇವರನ್ನು ಅಗ್ನಿಶಾಮಕ ದಳದವರು ರಕ್ಷಿಸಿದ್ದಾರೆ.

ಶುಕ್ರವಾರ ಬೆಳಗಿನ ಜಾವ 04 ಗಂಟೆಗೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ನಾಲ್ಕೈದು ದಿನಗಳಿಂದ ತುಂತುರು ಮಳೆ ಆಗುತ್ತಿರುವ ಹಿನ್ನೆಲೆ ವೃದ್ಧ ದಂಪತಿ ವಾಸಿಸುತ್ತಿದ್ದ ಇಡೀ ಮನೆ ತೇವಾಂಶಗೊಂಡು ಕುಸಿದು ಬಿದ್ದಿದೆ.

ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ವೃದ್ಧ ದಂಪತಿ ಶೇಕ್ ಬುಡೇನ್ ಸಾಬ್, ನೂರ್ ಜಹಾನ್ ಅವರನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.


ವೃದ್ಧ ದಂಪತಿ ರಕ್ಷಣೆಗೆ ಸ್ಥಳೀಯರು ಕೈ ಜೋಡಿಸಿದ್ದು, ಹಿರಿಜೀವಗಳು ನಿಟ್ಟುಸಿರು ಬಿಟ್ಟಿವೆ. ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.


ಅಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಇಬ್ಬರೇ ವೃದ್ಧ ದಂಪತಿ ವಾಸಿಸುತ್ತಿದ್ದು, ಮನೆ ಕುಸಿದಾಗ ಹೊರಬರಲಾಗದೆ ಅವಶೇಷಗಳಡಿ ಸಿಲುಕಿದ್ದರು.


 ಬೆಳಗಿನ ಜಾವ ಘಟನೆ ನಡೆದಿದ್ದರಿಂದಾಗಿ ಕತ್ತಲು ಆವರಿಸಿತ್ತು. ಮನೆ ಬಿದ್ದು ಎಷ್ಟೋ ಹೊತ್ತಿನ ಬಳಿಕ ಸ್ಥಳೀಯರ ಗಮನಕ್ಕೆ ಬಂದಿದೆ. ಆಗ ಅಗ್ನಿಶಾಮಕ ದಳದ ಸಿಬ್ಬಂದಿ ಸಹಾಯದಿಂದ ಸ್ಥಳೀಯರು ವೃದ್ಧ ದಂಪತಿ ಹೊರತರುವಲ್ಲಿ ಯಶಸ್ವಿಯಾಗಿದ್ದಾರೆ.



ವೃದ್ಧ ದಂಪತಿಯ ಮೊಮ್ಮಗ ಸಾದಾತ್ ಪ್ರತಿಕ್ರಿಯಿಸಿ, ಬೆಳಗಿನ ಜಾವ ನಾಲ್ಕು ಗಂಟೆಗೆ ಈ ಘಟನೆ ನಡೆದಿದೆ. ಮನೆ ಬಿದ್ದಿದೆ, ಶೇಕ್ ಬುಡೇನ್ ಸಾಬ್, ಅಜ್ಜಿ ನೂರ್ ಜಹಾನ್ ಇಬ್ಬರು ಮನೆ ಅವಶೇಷಗಳಡಿಯಲ್ಲಿ ಸಿಲುಕಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ವೃದ್ಧ ದಂಪತಿ ರಕ್ಷಣೆ ಮಾಡಿದ್ದಾರೆ, ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ