Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜಮೀನು ಗುರುತಿಸುವುದರಲ್ಲಿ ವಿಳಂಬ: ಮಹತ್ವಾಕಾಂಕ್ಷೆಯ ನಿವೇಶನ ಯೋಜನೆ ಪ್ರಗತಿ ಕುಂಟಿತ?

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಬಡ ವಸತಿ ರಹಿತರಿಗೆ ಉಚಿತವಾಗಿ ನಿವೇಶನಗಳನ್ನು ಹಂಚಿಕೆ ಮಾಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಡಿಸೆಂಬರ್ ಅಂತ್ಯದೊಳಗೆ ಮೊದಲ ಹಂತವಾಗಿ
5 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲು ಗುರಿ ಹೊಂದಲಾಗಿದ್ದು, ಇದಕ್ಕಾಗಿ ಅಗತ್ಯವಿರುವ ಸರ್ಕಾರಿ ಜಮೀನು ಗುರುತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.

ರಾಜ್ಯಾದ್ಯಂತ ಬಡವರಿಗೆ ಒಟ್ಟು 15 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡುವ ಗುರಿ ಹೊಂದಲಾಗಿದ್ದು, ಮೊದಲ ಹಂತದಲ್ಲಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನಗಳನ್ನು ಹಂಚಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಯೋಜನೆಯಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ವರ್ಗದವರಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುತ್ತಿದೆ.

Advertisement

ಯೋಜನೆಯ ಜಮೀನು ಗುರುತಿಸುವ ಪ್ರಗತಿ: ಒಟ್ಟು ಫಲಾನುಭವಿಗಳು: ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ಮಾಹಿತಿಯ ಪ್ರಕಾರ, ಸದ್ಯ ರಾಜ್ಯದ 31 ಜಿಲ್ಲೆಗಳಲ್ಲಿ ಒಟ್ಟು 5,59,619 ವಸತಿರಹಿತ ಫಲಾನುಭವಿಗಳಿದ್ದಾರೆ.

ಅಗತ್ಯವಿರುವ ಜಮೀನು: 30/40 ಅಳತೆಯ ನಿವೇಶನಗಳನ್ನು ಅಭಿವೃದ್ಧಿಪಡಿಸಿ ಹಂಚಲು ಒಟ್ಟು ಸುಮಾರು 60,000 ಎಕರೆಗೂ ಅಧಿಕ ಜಮೀನಿನ ಅವಶ್ಯಕತೆಯಿದೆ.

ಈವರೆಗೆ ಗುರುತಿಸಲಾದ ಜಮೀನು: ಕಂದಾಯ ಸಚಿವರ ನೇತೃತ್ವದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಂಕಿ-ಅಂಶಗಳಂತೆ, ಈಗಾಗಲೇ ಒಟ್ಟು ಶೇ. 47ರಷ್ಟು ಜಮೀನು (ಸುಮಾರು 9,604 ಎಕರೆ) ಗುರುತಿಸುವ ಹಾಗೂ ಕಾಯ್ದಿರಿಸುವ ಕಾರ್ಯ ಪೂರ್ಣಗೊಂಡಿದೆ. ಇದರಿಂದ ಸುಮಾರು 2,64,580 ನಿವೇಶನಗಳನ್ನು ರಚಿಸಬಹುದಾಗಿದೆ.

ಬಾಕಿ ಇರುವ ಕೆಲಸ: ಇನ್ನೂ 2,95,039 ಫಲಾನುಭವಿಗಳಿಗೆ ನಿವೇಶನ ನೀಡಲು ಹೆಚ್ಚುವರಿಯಾಗಿ 15,154 ಎಕರೆ ಜಮೀನನ್ನು ಗುರುತಿಸಬೇಕಿದೆ.

 18 ಜಿಲ್ಲೆಗಳಲ್ಲಿ ಜಮೀನು ಗುರುತಿಸುವಿಕೆಯಲ್ಲಿ ಹಿನ್ನಡೆ: ರಾಜ್ಯದ 18 ಜಿಲ್ಲೆಗಳಲ್ಲಿ ಈ ಯೋಜನೆಗಾಗಿ ಅಗತ್ಯವಿರುವ ಹೆಚ್ಚುವರಿ ಜಮೀನನ್ನು ಗುರುತಿಸುವಲ್ಲಿ ಇನ್ನೂ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ. ಬಾಗಲಕೋಟೆ, ಗದಗ, ಚಾಮರಾಜನಗರ, ಧಾರವಾಡ, ಶಿವಮೊಗ್ಗ, ಬೆಂಗಳೂರು ನಗರ, ಚಿಕ್ಕಮಗಳೂರು, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕೊಡಗು, ಚಿಕ್ಕಬಳ್ಳಾಪುರ, ವಿಜಯಪುರ, ದಾವಣಗೆರೆ, ದಕ್ಷಿಣ ಕನ್ನಡ, ಹಾವೇರಿ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಜಮೀನು ಗುರುತಿಸುವ ಪ್ರಕ್ರಿಯೆ ತeಳುಕಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳು ವಿಶೇಷ ಗಮನಹರಿಸಬೇಕಿದೆ.

ಸರ್ಕಾರದ ಕಟ್ಟುನಿಟ್ಟಿನ ಸೂಚನೆ: ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು, ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಡಿಸಿಎಂ ಹಾಗೂ ಕಂದಾಯ ಸಚಿವ ಜಿ.ಪರಮೇಶ್ವರ್ ಅವರು ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ತಿಂಗಳಾಂತ್ಯದೊಳಗೆ ಜಮೀನು ಗುರುತಿಸುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಮುಗಿಸುವಂತೆ ನಿರ್ದೇಶಿಸಲಾಗಿದೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಖ್ಯಾತ ಜೈನ ಜ್ಯೋತಿಷಿ ಬಿಕೆ ಸುಭಾಷ್ ಚಂದ್ರ ಜೈನ್ ಭೇಟಿಸೆ. 21ರಂದು ನೇರ ನೇಮಕಾತಿ ಸಂದರ್ಶನರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಭಗವಾನ್ ವಿಶ್ವಕರ್ಮ ಜಯಂತಿ ಆಚರಣೆಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು; ಕೊಲೆಯೋ ಅಥವಾ ಆತ್ಮಹತ್ಯೆಯೋ...? ಭದ್ರೆ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮನ್ನಣೆ ನೀಡಿ-ರೈತಸಂಘ ಜಿಲ್ಲಾಧ್ಯಕ್ಷ ಡಿಎಸ್ ಹಳ್ಳಿ ಮಲ್ಲಿಕಾರ್ಜುನ್ಹೈಕೋರ್ಟ್ ವೃತ್ತದಲ್ಲಿ ರಾತ್ರೋರಾತ್ರಿ ಸಿದ್ದರಾಮಯ್ಯ ಮೂರ್ತಿ ಪ್ರತಿಷ್ಠಾಪನೆ: ಪಾಲಿಕೆಯಿಂದ ಕ್ಷಿಪ್ರ ತೆರವು!ಕೆಕೆ ಅಭಿವೃದ್ಧಿಗೆ ಹೊಸ ಮನ್ವಂತರ: 50 ಸಾವಿರ ನಿವೇಶನ, ಐಟಿ ಪಾರ್ಕ್ ಸೇರಿ 10 ಮಹತ್ವದ ಯೋಜನೆ ಘೋಷಣೆ!ಕೋರ್ಟ್ ಕಚೇರಿಯಲ್ಲಿ ಕುಡಿದು ರಂಪಾಟ: ವಕೀಲನಿಗೆ ಹೈಕೋರ್ಟ್‌ನಿಂದ ಜೈಲು ಶಿಕ್ಷೆ!ತಹಶೀಲ್ದಾರ್ 50 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ! ಮಾಲ್‌ಗಳ ಡಿ.ಜಿ ಸೆಟ್‌ಗಳಿಗೆ ವಾರ್ಷಿಕ ಟ್ರೇಡ್‌ ಲೈಸೆನ್ಸ್‌ ಅಗತ್ಯವಿಲ್ಲ!-ಹೈಕೋರ್ಟ್