Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿ ವಿಧಾನಸಭಾ ಚುನಾವಣೆ ಜಯಭೇರಿ: ಬಿಜೆಪಿ ಸಂಭ್ರಮಾಚರಣೆ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ರಾಷ್ಟ್ರದ ರಾಜ್ಯಧಾನಿ ನವದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ವಿಜಯವನ್ನು ಸಾಧಿಸಿ ನವದೆಹಲಿಯ ಆಡಳಿತ ಚುಕ್ಕಾಣಿ ಭಾರತೀಯ ಜನತಾ ಪಕ್ಷದ ಪಾಲಾಗಿದ್ದು
, ಈ ಗೆಲುವಿನ ಎಲ್ಲಾ ಯಶಸ್ಸನ್ನು ಪ್ರಧಾನಮಂತ್ರಿ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥಸಿಂಗ್, ರಾಷ್ಟ್ರೀಯ ಮಾಜಿ ಅಧ್ಯಕ್ಷ ಜೆ.ಪಿ.ನಡ್ಡಾರವರಿಗೆ ಸಲ್ಲುತ್ತದೆ ಎಂದು ಬಿಜೆಪಿ ಜಿಲ್ಲಾಪ್ರಧಾನ ಕಾರ್ಯದರ್ಶಿ ಬಾಳೆಮಂಡಿರಾಮದಾಸ್ ತಿಳಿಸಿದರು.

ಅವರು, ಶನಿವಾರ ನೆಹರೂ ವೃತ್ತದಲ್ಲಿ ನವದೆಹಲಿಯ ಚುನಾವಣೆಯಲ್ಲಿ ವಿಜಯಸಾಧಿಸಿದ ಸಂದರ್ಭದಲ್ಲಿ ಕಾರ್ಯಕರೊಡನೆ ಪಟಾಕಿ ಸಿಡಿಸಿ, ಸಿಹಿ ಹಂಚಿದ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಳೆದ ೨೭ ವರ್ಷಗಳ ನಂತರ ದೆಹಲಿ ಆಡಳಿತವನ್ನು ಭಾರತೀಯ ಜನತಾ ಪಕ್ಷ ಪಡೆದಿರುವುದು ಸಂತಸ ತಂದಿದೆ.

ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿ ವಿಶೇಷವಾಗಿ ಬಿಜೆಪಿಯ ಮಹಿಳಾ, ಯುವ ಘಟಕಗಳು ಚುನಾವಣೆ ಗೆಲುವಿಗೆ ಸಾಕಷ್ಟು ಪರಿಶ್ರಮ ವಹಿಸಿವೆ. ದೆಹಲಿಯಲ್ಲಿದ್ದ ಲಂಚಾವತಾರ ಸರ್ಕಾರವನ್ನು ಮತದಾರ ಕಿತ್ತೆಸೆದಿದ್ದಾನೆ. ಮುಂಬರುವ ವರ್ಷಗಳಲ್ಲಿ ಕರ್ನಾಟಕದಲ್ಲೂ ಸಹ ಇದೇ ಸ್ಥಿತಿ ಉಂಟಾಗಲಿದೆ ಎಂದರು.

ಬಿಜೆಪಿ ಮಂಡಲಾಧ್ಯಕ್ಷ, ಗ್ರಾಮ ಪಂಚಾಯಿತಿ ಸದಸ್ಯ ಬಿ.ಎಂ.ಸುರೇಶ್, ಬಿಜೆಪಿ ಹಿರಿಯ ಮುಖಂಡರಾದ ಸೋಮಶೇಕರ್‌ಮಂಡಿಮಠ, ಸಿ.ಎಸ್.ಪ್ರಸಾದ್, ದಿನೇಶ್‌ರೆಡ್ಡಿ, ಚಿದಾನಂದ, ಟಿ.ತಿಮ್ಮಪ್ಪ, ಆದಿಭಾಸ್ಕರಶೆಟ್ಟಿ, ಜಗದಾಂಬ, ಶಾಂತಲಾ, ಸೂರಯ್ಯ, ಬಂಡೆರಂಗಪ್ಪ, ಎ.ವಿಜಯೇಂದ್ರ, ಮೋಹನ್, ಮಾರುತಿ ಮುಂತಾದವರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ