Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವೇಶ್ವರಯ್ಯ ಜಲ ನಿಗಮ ವ್ಯಾಪ್ತಿಗೆ ಭದ್ರಾ ಒಳಪಡಿಸಲು ಆಗ್ರಹ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಶ್ವೇಶ್ವರಯ್ಯ ಜಲ ನಿಗಮ(ವಿಜೆಎನ್ಎಲ್)ದ ವ್ಯಾಪ್ತಿಗೆ ಭದ್ರಾ ಜಲಾಶಯ ಸೇರಿಸುವ ತನ್ನ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬಾರದೆಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ಬಿ.ಎ ಲಿಂಗಾರೆಡ್ಡಿ ಅವರು ಆಗ್ರಹಿಸಿದರು.


 ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಹಾಲಿ ಭದ್ರಾ ಜಲಾಶಯ ಕರ್ನಾಟಕ ನೀರಾವರಿ ನಿಗಮದ ಅಡಿಯಲ್ಲಿದೆ. ಭದ್ರಾ ಮೇಲ್ದಂಡೆ ಕಾಮಗಾರಿಗಳು ವಿಶ್ವೇಶ್ವರಯ್ಯ ನೀರಾವರಿ ನಿಗಮದಿಂದ ನಿರ್ವಹಣೆಗೆ ಒಳಪಟ್ಟಿದ್ದು ಭವಿಷ್ಯದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ನೀರು ಪಡೆಯಬೇಕಾದರೆ ಎರಡು ನಿಗಮಗಳ ನಡುವೆ ಸಂಘರ್ಷ ಏರ್ಪಡುವ ಸಾಧ್ಯತೆ ಇರುತ್ತದೆ. ಎರಡೂ ನಿಗಮಗಳ  ವ್ಯವಸ್ಥಾಪಕ ನಿರ್ದೇಶಕರ(ಎಂಡಿಗಳು) ನಡುವೆ ಒಮ್ಮತ  ಮೂಡದೇ ಇರಬಹುದು. ಹಾಗಾಗಿ ಭದ್ರಾ  ಜಲಾಶಯವನ್ನು ವಿಶ್ವೇಶ್ವರಯ್ಯ ಜಲ ನಿಗಮದ ವ್ಯಾಪ್ತಿಗೆ ಒಳಪಡಿಸಿ ಒಬ್ಬರೇ ವ್ವವಸ್ಥಾಪಕ ನಿರ್ದೇಶಕರ ನಿರ್ವಹಣೆ ಮಾಡುವ ವ್ಯವಸ್ಥೆ ಜಾರಿಗೆ ಬರಬೇಕೆಂದು ಅವರು ಆಗ್ರಹ ಮಾಡಿದರು.

ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ವಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ ಅವರಿಗೆ ಮನವಿ ಮಾಡಿಕೊಂಡಿತ್ತು. ಭದ್ರಾ ಜಲಾಶಯದ ಕಾಡ ಸಮಿತಿಯಲ್ಲಿ ಚಿತ್ರದುರ್ಗ ಜಿಲ್ಲೆಗೂ ಸೂಕ್ತ ಸ್ಥಾನ ಮಾನ ನೀಡಬೇಕು ಎಂಬ ಬೇಡಿಕೆ ಮಂಡಿಸಿತ್ತು. ಈ ನಿಟ್ಟಿನಲ್ಲಿ ಕಾರ್ಯತತ್ಪರರಾಗಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಭದ್ರಾ ಜಲಾಶಯವ ಕರ್ನಾಟಕ ನೀರಾವರಿ ನಿಗಮ ವ್ಯಾಪ್ತಿಯಿಂದ ಹೊರ ತೆಗೆದು ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಸೇರ್ಪಡಿಸುವ ತೀರ್ಮಾನ ಕೈಗೊಂಡು ಆ ನಿಟ್ಟಿನಲ್ಲಿ ಮುಂದಡಿ ಇಟ್ಟಿದ್ದರು ಎಂದು ಅವರು ತಿಳಿಸಿದರು.

ದಾವಣಗೆರೆ ಜಿಲ್ಲೆಯ ಕ್ಯಾತೆ ಶೂರ ರೇಣುಕಾಚಾರ್ಯ ಈ ಸುಳಿವು ಅರಿತು ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿ ಯಾವುದೇ ಕಾರಣದಿಂದ ಕರ್ನಾಟಕ ನೀರಾವರಿ ನಿಗಮದಿಂದ ವಿಜೆಎನ್ಎಲ್ ಗೆ ಭದ್ರಾ ಜಲಾಶಯವ ಶಿಫ್ಟ್ ಮಾಡಲು ಅವಕಾಶ ಕೊಡುವುದಿಲ್ಲವೆಂದು ಹೇಳಿಕೆ ನೀಡಿ ಉಭಯ ಜಿಲ್ಲೆಯ ರೈತರ ನಡುವೆ ಸಂಘರ್ಷ ಸೃಷ್ಟಿ ಮಾಡಲು ಮುಂದಾಗಿದ್ದಾರೆ. ರೇಣುಕಾಚಾರ್ಯರ ಈ ನಡೆಯನ್ನು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಉಗ್ರವಾಗಿ ಖಂಡಿಸುತ್ತದೆ ಎಂದರು.

        ಭದ್ರಾ ಮೇಲ್ದಂಡೆ ಯೋಜನೆಯಡಿ ತುಂಗಾ ಜಲಾಶಯದಿಂದ 17.4 ಟಿಎಂಸಿ ಹಾಗೂ ಭದ್ರಾ ಜಲಾಶಯದಿಂದ  12.5 ಟಿಎಂಸಿ ಸೇರಿ ಒಟ್ಟು 29.9 ಟಿಎಂಸಿಯಷ್ಟು ನೀರನ್ನು ಹಂಚಿಕೆ ಮಾಡಲಾಗಿದೆ. ತುಂಗಾ ಜಲಾಶಯದಿಂದ ನೀರು ಲಿಪ್ಟ್ ಮಾಡಿ ಭದ್ರಾ ಜಲಾಶಯಕ್ಕೆ ಹಾಕಿಕೊಂಡು ನಂತರ ಕಾಲುವೆಗೆ ಹರಿಸಲಾಗುತ್ತದೆ. ಹಾಗಾಗಿ ಭದ್ರಾ ಜಲಾಶಯದ ಮೇಲೆ ಹೆಚ್ಚು ಅವಲಂಬನೆ ಇದೆ. ಜಲಾಶಯವ  ಒಂದೇ ನಿಗಮ ನಿರ್ವಹಣೆ ಮಾಡಿದ್ದಲ್ಲಿ ತೊಂದರೆ ಆಗುವುದಿಲ್ಲ.

ಚಿತ್ರದುರ್ಗ, ಚಿಕ್ಕಮಗಳೂರು, ಜಗಳೂರು, ತುಮಕೂರು ಜಿಲ್ಲೆಯ ರೈತರು  ಯಾವುದೇ ಸಂಘರ್ಷಕ್ಕೆ ಇಳಿಯದೇ ಭದ್ರಾ ಜಲಾಶಯದಿಂದ ನೀರು ಪಡೆಯಬಹುದಾಗಿದೆ. ರಾಜ್ಯ ಸರ್ಕಾರ ಭದ್ರಾ ಜಲಾಶಯವ ನೀರಾವರಿ ನಿಗಮದ ವ್ಯಾಪ್ತಿಯಿಂದ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಸೇರಿಸುವ ತನ್ನ ನಿಲುವಿನಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು. ಹಾಗೊಂದು ವೇಳೆ ಒತ್ತಡಕ್ಕೆ ಮಣಿದು ನೀರಾವರಿ ನಿಗಮದ ವ್ಯಾಪ್ತಿಯಲ್ಲಿ ಉಳಿಸಿದರೆ ಮಧ್ಯ ಕರ್ನಾಟಕದ ರೈತರ ಆಕ್ರೋಶ ಎದುರಿಸಬೇಕಾಗುತ್ತದೆ , ಹೋರಾಟದ ಹಾದಿ ತುಳಿಯಬೇಕಾಗುತ್ತದೆ ಎಂದು ಲಿಂಗಾರೆಡ್ಡಿ ಎಚ್ಚರಿಸಿದರು.


ದೈನೇಸಿ ಸ್ಥಿತಿ ಬಿಡಿ, ಹಕ್ಕೊತ್ತಾಯ ಮಂಡಿಸಿ-
ಭದ್ರಾ ಮೇಲ್ದಂಡೆ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು  ಯೋಜನೆ ವ್ಯಾಪ್ತಿಯ ಜನ ಪ್ರತಿನಿಧಿಗಳು ಅನುದಾನಕ್ಕಾಗಿ ರಾಜ್ಯ ಸರ್ಕಾರದ ಮುಂದೆ ದೈನೇಸಿಯಾಗಿ ಕೈ ಕಟ್ಟಿ ನಿಲ್ಲದೆ ಹಕ್ಕೊತ್ತಾಯ ಮಂಡಿಸುವಂತೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಆಗ್ರಹಿಸುತ್ತದೆ.


ಕಳೆದ ವಾರ ಸಚಿವ ಡಿ.ಸುಧಾಕರ್ ನೇತೃತ್ವದಲ್ಲಿ ಜಿಲ್ಲೆಯ ಶಾಸಕರುಗಳು ಕಾಮಗಾರಿ ಪರಿಶೀಲನೆ ನಡೆಸಿದ್ದು ವಾರದೊಳಗೆ ಸಿಎಂ, ಡಿಸಿಎಂ ಭೇಟಿ ಮಾಡಿ 200 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿಸಿಕೊಂಡು  ಫೆಬ್ರವರಿ ಅಂತ್ಯದ ಒಳಗೆ  ಗೋನೂರು ಕೆರೆ ವರೆಗೆ ಪರೀಕ್ಷಾರ್ಥ(ಟ್ರಯಲ್) ನೀರು ಹರಿಸುವುದಾಗಿ ಹೇಳಿದ್ದರು.

    ಆದರೆ ಇದುವರೆಗೂ ಸಿಎಂ ಹಾಗೂ ಡಿಸಿಎಂ ಭೇಟಿ ಮಾಡುವ ನಿಟ್ಟಿನಲ್ಲಿ ಸಚಿವ, ಶಾಸಕರು ಪ್ರಯತ್ನ ನಡೆಸಿಲ್ಲ. ಜಿಲ್ಲೆಯ ಜನ ಪ್ರತಿನಿಧಿಗಳ  ಇಚ್ಚಾಶಕ್ತಿ ಕೊರತೆಯ ದುರ್ಬಲ ಮನಸ್ಥಿತಿಯ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಖಂಡಿಸುತ್ತದೆ. ರಾಜ್ಯ ಸರ್ಕಾರವ ಬೇಡಿಕೊಳ್ಳುವ ಪರಿಸ್ಥಿತಿಯಿಂದ ಹೊರ ಬಂದು ಹಕ್ಕೊತ್ತಾಯ ಮಂಡಿಸುವಂತೆ ಲಿಂಗಾರೆಡ್ಡಿ ಒತ್ತಾಯಿಸಿದರು.


 ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ, ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ, ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನ ಮಾಳಿಗೆ ಧನಂಜಯ, ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಮಲ್ಲಾಪುರ ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ಬಸ್ತಿಹಳ್ಳಿ ಸುರೇಶ್ ಬಾಬು ಸುದ್ದಿಗೋಷ್ಟಿಯಲ್ಲಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ