LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗವನ್ನು ತಕ್ಷಣವೇ ‘ಬರಪೀಡಿತ’ ಎಂದು ಘೋಷಿಸಲು ಆಗ್ರಹ:

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ ಎದುರಾಗಿದ್ದು
, ಜಿಲ್ಲೆಯನ್ನು ತಕ್ಷಣವೇ ಬರಪೀಡಿತಎಂದು ಘೋಷಿಸಬೇಕು ಹಾಗೂ ರೈತರ ಮತ್ತು ಮಹಿಳಾ ರೈತರ ವಿವಿಧ ತುರ್ತು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ರೈತ ಸಂಘದ ಮಹಿಳಾ ರಾಜ್ಯ ಅಧ್ಯಕ್ಷೆ ಶ್ರೀಮತಿ ಶಾಂತಾ ಶಾಂತ್ ಅಶೋಕ್ ನೇತೃತ್ವದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

​ಸಂಸ್ಥಾಪಕರಾದ ಬಾಬಾ ಗೌಡ ಪಾಟೀಲ ಅವರ ಆಶಯಗಳಂತೆ ಕಾರ್ಯನಿರ್ವಹಿಸುತ್ತಿರುವ ರೈತ ಸಂಘವು, ಜಿಲ್ಲೆಯಲ್ಲಿ ಎದುರಾಗಿರುವ ಭೀಕರ ಪರಿಸ್ಥಿತಿಯನ್ನು ಗಮನಕ್ಕೆ ತಂದು ಸರ್ಕಾರಕ್ಕೆ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ ಎಂದು ಅವರು ತಿಳಿಸಿದರು.

​​ತಕ್ಷಣ ಬರಪೀಡಿತ ಘೋಷಣೆ ಹಾಗೂ ಪರಿಹಾರ:
ಜಿಲ್ಲೆಯಲ್ಲಿ ಈ ವರ್ಷ ಶೇಕಡಾ
20ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದೆ. ಭದ್ರಾ ಹಾಗೂ ವಾಣಿವಿಲಾಸ ಜಲಾಶಯಗಳಲ್ಲಿಯೂ ನೀರಿನ ಅಭಾವ ತೀವ್ರವಾಗಿದೆ. ಆದ್ದರಿಂದ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ, ಒಣ ಭೂಮಿಗೆ (ಖುಷ್ಕಿ) ಎಕರೆಗೆ 25,000 ಮತ್ತು ನೀರಾವರಿ ಭೂಮಿಗೆ ಎಕರೆಗೆ 35,000 ಪರಿಹಾರ ನೀಡಬೇಕು.

​ವೈಯಕ್ತಿಕ ಗ್ಯಾರಂಟಿ ಬದಲಿಗೆ ಸಾಮೂಹಿಕ ಅಭಿವೃದ್ಧಿ:
ವೈಯಕ್ತಿಕ ಗ್ಯಾರಂಟಿ ಯೋಜನೆಗಳಿಗಿಂತ ಸಾಮೂಹಿಕ ಅಭಿವೃದ್ಧಿಗೆ ಆದ್ಯತೆ ನೀಡಿ. ಕೆರೆ ತುಂಬಿಸುವ ಯೋಜನೆಗಳು
, ಗೋದಾಮುಗಳು ಹಾಗೂ ಗ್ರಾಮೀಣ ಕೃಷಿ ಮಾರುಕಟ್ಟೆಗಳ ಅಭಿವೃದ್ಧಿಗೆ ನೇರವಾಗಿ ಅನುದಾನ ಬಿಡುಗಡೆ ಮಾಡಬೇಕು.

​ಮಹಿಳಾ ರೈತರಿಗೆ ಸಾಲ ಹಾಗೂ ಯಶಸ್ವಿನಿ ಸೌಲಭ್ಯ:
ಮಹಿಳಾ ಸಹಕಾರ ಸಂಘಗಳು ಮತ್ತು ಮಹಿಳಾ ಸ್ವಸಹಾಯ ಗುಂಪುಗಳಿಗೆ ಟಿಎಪಿಸಿಎಂಎಸ್
ಹಾಗೂ ಸಹಕಾರ ಸಂಘಗಳ ಮೂಲಕ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ ನೀಡಬೇಕು. ಜೊತೆಗೆ ಯಶಸ್ವಿನಿಕಾರ್ಡ್ ವಿತರಣೆಯನ್ನು ಶೀಘ್ರಗೊಳಿಸಬೇಕು.

​ವಿದ್ಯುತ್ ಖಾಸಗೀಕರಣ ವಾಪಸ್:
ವಿದ್ಯುತ್ ಖಾಸಗೀಕರಣ ಕಾಯಿದೆಯನ್ನು ವಾಪಸ್ ಪಡೆಯಬೇಕು ಹಾಗೂ ಕೃಷಿ ಪಂಪ್‌ಸೆಟ್‌ಗಳಿಗೆ ದಿನಕ್ಕೆ
10 ಗಂಟೆ ನಿರಂತರ ಉಚಿತ ವಿದ್ಯುತ್ ಪೂರೈಸಬೇಕು ಎಂದು ಅವರು ಆಗ್ರಹ ಮಾಡಿದರು.

​"ರಸ್ತೆ ಇಲ್ಲದ ಗ್ರಾಮಕ್ಕೆ ಅಭಿವೃದ್ಧಿ ಇಲ್ಲ, ಸಾಲ ಇಲ್ಲದ ರೈತನಿಗೆ ಬದುಕಿಲ್ಲ" ಎನ್ನುವುದು ನಮ್ಮ ನಾಯಕ ಬಾಬಾ ಗೌಡ ಪಾಟೀಲ ಅಭಿಪ್ರಾಯವಾಗಿತ್ತು ಇದು ಅವರು ತಿಳಿಸಿದರು.

​ಈ ಎಲ್ಲಾ ನ್ಯಾಯಯುತ ಬೇಡಿಕೆಗಳನ್ನು ಪ್ರಸಕ್ತ ಬಜೆಟ್‌ನಲ್ಲೇ ಜಾರಿಗೊಳಿಸಿ ಚಿತ್ರದುರ್ಗ ಜಿಲ್ಲೆಯ ಸಂಕಷ್ಟದಲ್ಲಿರುವ ರೈತರನ್ನು ರಕ್ಷಿಸಬೇಕು ಎಂದು ಸಂಘಟನೆಯ ಪದಾಧಿಕಾರಿಗಳು ಮನವಿಯಲ್ಲಿ ವಿನಂತಿಸಿದ್ದಾರೆ.. ಸುದ್ದಿಗೋಷ್ಠಿಯಲ್ಲಿ ಶಂಕರಪ್ಪ ಇತರರು ಇದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು