ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಮಾಜಿ ಸಚಿವ ಹೆಚ್.ಆಂಜನೇಯರವರನ್ನು ಎಂ.ಎಲ್.ಸಿ.ಯನ್ನಾಗಿ ನೇಮಕ ಮಾಡುವಂತೆ ನೂತನ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಹಾಗೂ ಪಕ್ಷದ ವರಿಷ್ಟರುಗಳಲ್ಲಿ ಹೊಳಲ್ಕೆರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಒತ್ತಾಯಿಸಿದ್ದಾರೆ.
ಯುವ ಕಾಂಗ್ರೆಸ್ನಿಂದ ಸಚಿವ ಸ್ಥಾನದವರೆಗೂ ಏರಿದ ಹೆಚ್.ಆಂಜನೇಯ ಹುಟ್ಟು ಹೋರಾಟಗಾರರು. ಸಮಾಜ ಕಲ್ಯಾಣ ಸಚಿವರಾಗಿದ್ದಾಗ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ದಲಿತ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಅನೇಕ ಶಾಲಾ-ಕಾಲೇಜು, ಹಾಸ್ಟೆಲ್, ವಸತಿ ಶಾಲೆಗಳನ್ನು ಮಂಜೂರು ಮಾಡಿದ ಕೀರ್ತಿಗೆ ಪಾತ್ರರಾಗಿದ್ದಾರೆ.
ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ಹೆಚ್.ಆಂಜನೇಯರವರನ್ನು ಎಂ.ಎಲ್.ಸಿ.ಯನ್ನಾಗಿ ಮಾಡುವ ಮೂಲಕ ದಲಿತ ಸಮುದಾಯಕ್ಕೆ ಶಕ್ತಿ ತುಂಬಬೇಕೆಂದು ಚೇತನ್ ಆಗ್ರಹಿಸಿದ್ದಾರೆ.



