LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಿಯು ಇಲಾಖೆ ಪ್ರಭಾರ ಉಪ ನಿರ್ದೇಶಕರಾಗಿ ಈ. ಗುರುಮೂರ್ತಿ ಅಧಿಕಾರ ಸ್ವೀಕಾರ: ಅರ್ಥಶಾಸ್ತ್ರ ಗೆಳೆಯರ ಬಳಗದಿಂದ ಸನ್ಮಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಪ್ರಭಾರ ಉಪ ನಿರ್ದೇಶಕರಾಗಿ ಈ. ಗುರುಮೂರ್ತಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಅರ್ಥಶಾಸ್ತ್ರ ಗೆಳೆಯರ ಬಳಗದ ವತಿಯಿಂದ ನೂತನ ಉಪ ನಿರ್ದೇಶಕರನ್ನು ಆತ್ಮೀಯವಾಗಿ ಸನ್ಮಾನಿಸಿ
, ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅರ್ಥಶಾಸ್ತ್ರ ಬಳಗದ ಹಿರಿಯರು ಹಾಗೂ ಜಿಲ್ಲಾ ಪಿಯು ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್. ಲಕ್ಷ್ಮಣ ಅವರು ಹರ್ಷ ವ್ಯಕ್ತಪಡಿಸಿ, "ನೂತನ ಉಪ ನಿರ್ದೇಶಕರಾದ ಈ. ಗುರುಮೂರ್ತಿ ಅವರು ನನ್ನ ನೆಚ್ಚಿನ ಶಿಷ್ಯ ಹಾಗೂ ನಮ್ಮದೇ ಅರ್ಥಶಾಸ್ತ್ರ ಬಳಗದ ಹೆಮ್ಮೆಯ ಸದಸ್ಯರಾಗಿದ್ದಾರೆ. ನನ್ನ ಶಿಷ್ಯನೇ ಇಂದು ಇಲಾಖೆಯ ಉನ್ನತ ಅಧಿಕಾರ ವಹಿಸಿಕೊಂಡಿರುವುದು ನನಗೆ ಅಪಾರ ಸಂತೋಷ ತಂದಿದೆ. ತಮ್ಮ ಅಧಿಕಾರ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ಪ್ರಾಚಾರ್ಯರು ಹಾಗೂ ಉಪನ್ಯಾಸಕರ ಸಹಕಾರವನ್ನು ಪಡೆದುಕೊಂಡು, ಉತ್ತಮ ಹಾಗೂ ಮಾದರಿ ಆಡಳಿತವನ್ನು ನಡೆಸಲಿ," ಎಂದು ಕಿವಿಮಾತು ಹೇಳಿ ಶುಭ ಹಾರೈಸಿದರು.

'ಅರ್ಥಶಾಸ್ತ್ರ ಪ್ರತಿಭಾ ಪುರಸ್ಕಾರ'ಕ್ಕೆ ಮನವಿ:
ಇದೇ ಸಂದರ್ಭದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ 'ಅರ್ಥಶಾಸ್ತ್ರ ಪ್ರತಿಭಾ ಪುರಸ್ಕಾರ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಅನುಮತಿ ನೀಡಬೇಕೆಂದು ಅರ್ಥಶಾಸ್ತ್ರ ಬಳಗದ ವತಿಯಿಂದ ಮಾನ್ಯ ಉಪ ನಿರ್ದೇಶಕರಲ್ಲಿ ಮನವಿ ಮಾಡಿಕೊಳ್ಳಲಾಯಿತು.

ಸಹಕಾರಕ್ಕೆ ನೂತನ ಉಪ ನಿರ್ದೇಶಕರ ಕರೆ:
ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ಉಪ ನಿರ್ದೇಶಕ ಈ. ಗುರುಮೂರ್ತಿ ಅವರು, "ನಾನು ಮೂಲತಃ ಅರ್ಥಶಾಸ್ತ್ರ ಉಪನ್ಯಾಸಕನಾಗಿದ್ದು, ನಮ್ಮ ವಿಷಯಕ್ಕೆ ಸಂಬಂಧಿಸಿದ ಎಲ್ಲಾ ಶೈಕ್ಷಣಿಕ ಹಾಗೂ ಗುಣಾತ್ಮಕ ಕಾರ್ಯಚಟುವಟಿಕೆಗಳಿಗೆ ನನ್ನ ಸಂಪೂರ್ಣ ಸಹಮತ ಮತ್ತು ಬೆಂಬಲ ಯಾವಾಗಲೂ ಇರಲಿದೆ. ನನ್ನ ಅಧಿಕಾರ ಅವಧಿಯಲ್ಲಿ ಜಿಲ್ಲೆಯ ಪಿಯು ಶಿಕ್ಷಣ ಇಲಾಖೆಯನ್ನು ಉತ್ತಮ ಹಾದಿಯಲ್ಲಿ ಮುನ್ನಡೆಸಲು ಎಲ್ಲಾ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಮುಕ್ತ ಮನಸ್ಸಿನಿಂದ ಸಹಕಾರ ನೀಡಬೇಕು," ಎಂದು ವಿನಂತಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತಿ:
ಈ ಸಂದರ್ಭದಲ್ಲಿ ಅರ್ಥಶಾಸ್ತ್ರ ಬಳಗದ ಹಿರಿಯರಾದ ಟಿ. ಪಿ. ಜ್ಞಾನಮೂರ್ತಿ, ಅರ್ಥಶಾಸ್ತ್ರ ಉಪನ್ಯಾಸಕರಾದ ಹೆಚ್. ಶ್ರೀನಿವಾಸ್, ವಿ. ಚನ್ನಬಸಪ್ಪ, ಎಸ್. ಲಕ್ಷ್ಮಣ ಸೇರಿದಂತೆ ಇಲಾಖೆಯ ಪ್ರಮುಖರು ಹಾಗೂ ಸಹೋದ್ಯೋಗಿಗಳು ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು