Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವೇಗೌಡರು ನಮ್ಮನ್ನು ಪ್ರೀತಿಸಿ ಪ್ರಧಾನಿ ಮೋದಿಯವರನ್ನು ವಿವಾಹವಾದರು

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ನಿವೃತ್ತಿ ಹೊಂದುತ್ತಿರುವ ಸದಸ್ಯರಿಗೆ ರಾಜ್ಯಸಭೆಯಲ್ಲಿ ಬುಧವಾರ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭ ಹಾಸ್ಯಮಯ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ನಿವೃತ್ತಿಯಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರಿಗೆ ಶುಭ ಹಾರೈಸಿದರು.
ಇದೇ ವೇಳೆ
, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಜೊತೆಗಿನ ಅವರ ಸಂಬಂಧದ ಬಗ್ಗೆ ತಿಳಿಸಿ ಹಾಸ್ಯ, ವ್ಯಂಗ್ಯಭರಿತ ಮಾತನ್ನಾಡಿದ್ದು, ಸದನ ನಗೆಗಡಲಿನಲ್ಲಿ ತೇಲುವಂತೆ ಮಾಡಿತು.

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಮತ್ತು ಎನ್ಸಿಪಿ ಸಂಸ್ಥಾಪಕ ಶರದ್ ಪವಾರ್ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ದೇವೇಗೌಡರು ಪ್ರಧಾನಿಯಾಗಿದ್ದರು ಮತ್ತು ಹಲವಾರು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು
?


ನಾನು ದೇವೇಗೌಡ ಅವರನ್ನು 54 ವರ್ಷಗಳಿಂದ ಬಲ್ಲೆ ಮತ್ತು ಅವರೊಂದಿಗೆ ಕೆಲಸ ಮಾಡಿದ್ದೇನೆ. ಆದರೆ ಆ ನಂತರ ಏನಾಯಿತು ಎಂಬುದು ನನಗೆ ತಿಳಿದಿಲ್ಲ. ಅವರು ನಮ್ಮನ್ನು ಪ್ರೀತಿಸಿದರು, ಆದರೆ ಪ್ರಧಾನಿ ನರೇಂದ್ರ ಮೋದಿಯವರನ್ನು ವಿವಾಹವಾದರು ಎಂದು ಮಲ್ಲಿಕಾರ್ಜು ಖರ್ಗೆ ಹೇಳಿದರು.


ಆಗ ಸದನದಾದ್ಯಂತ ನಗು ಮೂಡಿತು. ರಾಜ್ಯಸಭೆಯಲ್ಲಿ ಹಾಜರಿದ್ದ ಪ್ರಧಾನಿ ಮೋದಿಯೂ ನಗುತ್ತಿರುವುದು ಕಂಡುಬಂದಿತು. ರಾಜಕೀಯದಲ್ಲಿರುವವರು, ಸಾರ್ವಜನಿಕ ಜೀವನದಲ್ಲಿ ಇರುವವರು ದೇಶ ಸೇವೆ ಮಾಡುವ ಉತ್ಸಾಹದಿಂದ ಸುಸ್ತಾಗುವುದಿಲ್ಲ ಅಥವಾ ನಿವೃತ್ತರಾಗುವುದಿಲ್ಲ ಎಂದು ಖರ್ಗೆ ಹೇಳಿದರು.

ಪ್ರಧಾನಿ ಮೋದಿ ಏನು ಹೇಳಿದರು?
ಪ್ರಧಾನಿ ನರೇಂದ್ರ ಮೋದಿ ಇದಕ್ಕೂ ಮುನ್ನ ಮಾತನಾಡಿ, ನಿವೃತ್ತಿ ಹೊಂದುತ್ತಿರುವ ರಾಜ್ಯಸಭಾ ಸಂಸದರಿಗೆ ಅವರು ನೀಡಿದ ಕೊಡುಗೆಗೆಳಿಗಾಗಿ ಧನ್ಯವಾದ ಅರ್ಪಿಸಿದರು. ಅವರ ಭವಿಷ್ಯದ ರಾಜಕೀಯ ಪ್ರಯತ್ನಗಳಿಗೆ ಶುಭ ಹಾರೈಸಿದರು. ಮೋದಿ ಸಹ ರಾಜಕೀಯದಲ್ಲಿ ಪೂರ್ಣವಿರಾಮವಿಲ್ಲ ಎಂದು ಒತ್ತಿ ಹೇಳಿದರು.

ಸದನದಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆಗಳು ನಡೆಯುತ್ತವೆ ಮತ್ತು ಪ್ರತಿಯೊಬ್ಬ ಸದಸ್ಯರು ಅವುಗಳಲ್ಲಿ ವಿಶಿಷ್ಟ ಪಾತ್ರವನ್ನು ವಹಿಸುತ್ತಾರೆ. ಇಂತಹ ಸಂದರ್ಭಗಳಲ್ಲಿ, ಪಕ್ಷದ ಗಡಿಯನ್ನು ಮೀರಿ ಗೌರವದ ಸಾಮಾನ್ಯ ಪ್ರಜ್ಞೆ ನಮ್ಮಲ್ಲಿರುತ್ತದೆ. ಅಧಿಕಾರಾವಧಿಯ ನಂತರ ಸದನವನ್ನು ತೊರೆಯುತ್ತಿರುವ ನಾಯಕರಿಗೆ, ರಾಜಕೀಯದಲ್ಲಿ ಪೂರ್ಣವಿರಾಮವಿಲ್ಲ ಎಂದು ನಾನು ಹೇಳಲು ಬಯಸುತ್ತೇನೆ. ಭವಿಷ್ಯವು ನಿಮಗಾಗಿ ಕಾಯುತ್ತಿದೆ. ನಿಮ್ಮ ಅನುಭವ ಮತ್ತು ಕೊಡುಗೆಯನ್ನು ಯಾವಾಗಲೂ ಸ್ಮರಣೀಯವಾಗಿಡಲಾಗುತ್ತದೆ ಎಂದು ಪ್ರಧಾನಿ ಹೇಳಿದರು.

ಹೊಸದಾಗಿ ಆಯ್ಕೆಯಾದ ಸಂಸದರು ತಮ್ಮ ಜೀವನದ ಅರ್ಧಕ್ಕಿಂತ ಹೆಚ್ಚು ಸಮಯವನ್ನು ಸಂಸದೀಯ ಕೆಲಸದಲ್ಲಿ ಕಳೆದಿರುವ ಹೆಚ್‌.ಡಿ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ, ಶರದ್ ಪವಾರ್ ಅವರಂತಹ ಅನುಭವಿಗಳಿಂದ ಕಲಿಯಬೇಕೆಂದು ಮೋದಿ ಸಲಹೆ ನೀಡಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ