Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದುಶ್ಚಟ ತ್ಯಜಿಸಿದರೆ ಮಾದಿಗ ಸಮುದಾಯದ ಅಭಿವೃದ್ಧಿ ಸಾಧ್ಯ

Advertisement
ಚಂದ್ರವಳ್ಳಿ ನ್ಯೂಸ್, ಮಲ್ಲಾಪುರ:
ದುಶ್ಚಟಗಳನ್ನು ತ್ಯಜಿಸಿ ಬದಲಾವಣೆಯ ಕಡೆ ಗಮನ ನೀಡಿದಾಗ ಮಾತ್ರ ಮಾದಿಗ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಮಾಜಿ ಕೇಂದ್ರ ಸಚಿವರಾದ ಎ. ನಾರಾಯಣಸ್ವಾಮಿ ಪ್ರತಿ ಪಾದಿಸಿದರು.


ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಕೊಲ್ಲಾಪುರ ಶ್ರೀಮಹಾಲಕ್ಷ್ಮಿ ದೇವಾಲಯದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು ಸರ್ಕಾರ ನಿಮ್ಮ ಉನ್ನ ತಿಯ ಬಗ್ಗೆ ಯೋಚಿಸುವುದಿಲ್ಲ  ನಿಮ್ಮ ಬೆಳವಣಿಗೆಗೆ ನೀವೇ ಶಿಲ್ಪಿಗಳಾಗಬೇಕು ಕುಡಿತ ಅನಕ್ಷರತೆ ಮಾದಿಗ ಸಮುದಾಯಕ್ಕೆ ಶಾಪವಾಗಿದೆ. ನಾನು ಕೂಡ ದುಶ್ಚಟಕ್ಕೆ  ಒಳಗಾಗಿದ್ದಾರೆ ಹಮಾಲಿ ಕೆಲಸ ಮಾಡಿಕೊಂಡು ಬದುಕಬೇಕಿತ್ತು ಕೆಟ್ಟ ಚಟಗಳಿಂದ ದೂರ ಉಳಿದಿದ್ದಕ್ಕೆ  ರಾಜಕೀಯ ಅಧಿಕಾರ ಪಡೆಯಲು ಸಾಧ್ಯವಾಯಿತು ಎಂದು ಹೇಳಿದರು.

ನಾವು ಸಾಗುತ್ತಿರುವ ದಾರಿ ಸರಿಯೋ, ತಪ್ಪೋ ಎನ್ನುವುದನ್ನು ನಿರ್ಣಯಿಸುವ ವಿವೇಕ ಪ್ರತಿಯೊಬ್ಬ ಮನುಷ್ಯನಿಗೂ ಇರುತ್ತದೆ ಆದರೆ ನಾವು ಕೆಟ್ಟ ವಿಷಯಗಳಿಗೆ ಆದ್ಯತೆ ನೀಡಿ ಕುಟುಂಬವನ್ನು ಹಾಳು ಮಾಡಿಕೊಳ್ಳುತ್ತಿದ್ದೇವೆ ಎಂದು ವಿಷಾದಿಸಿದರು.

ಸಮಾರಂಭದ ಸಾನಿದ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿಯವರು ಶಿಕ್ಷಣ ಪಡೆಯದ ಹೊರತು ವ್ಯಕ್ತಿಯ ಅಭಿವೃದ್ಧಿ ಸಾಧ್ಯವಿಲ್ಲ ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಮನೆಯ ಹಿರಿಯರು ಸರಿ ದಾರಿಯಲ್ಲಿ ಸಾಗಿದರೆ ಅದು ಕಿರಿಯರಿಗೆ ಮಾರ್ಗ ದರ್ಶನವಾಗುತ್ತದೆ ನೀವೇ ತಪ್ಪು ದಾರಿ ತುಳಿದರೆ ಕುಟುಂಬ ನಾಶವಾಗುತ್ತದೆ ಎಂದರು.

ಶಿಕ್ಷಣ ಯಾವುದೇ ಸಮುದಾಯಕ್ಕೆ ಸೀಮಿತವಲ್ಲ ಎಲ್ಲ ಜಾತಿ ವರ್ಗದವರಿಗೂ ಶಿಕ್ಷಣ ಪಡೆಯಲು ಸಾಧ್ಯವಿದೆ ಸಮುದಾಯದ ಯುವಕರು ಕೇವಲ ಹೊರಟ ಸಂಘರ್ಷಕ್ಕೆ ಆದ್ಯತೆ ನೀಡದೆ ದುಡಿಮೆಗೆ ಒತ್ತು ನೀಡಿ ಬಡತನದ ನೆಪದಲ್ಲಿ ಶಿಕ್ಷಣದಿಂದ ವಿಮುಖರಾದರೆ ನಮ್ಮ ಅವನತಿಗೆ ನಾವೇ ಕಾರಣರಾಗುತ್ತೇವೆ ಎಂದು ಶ್ರೀಗಳು ಎಚ್ಚರಿಸಿದರು.

ಗ್ರಾಮಗಳಲ್ಲಿ ಸೌಹಾರ್ದ ವಾತಾವರಣ ನಿರ್ಮಾಣವಾಗಲು ಎಲ್ಲಾ ಸಮುದಾಯಗಳೂ ಒಗ್ಗೂಡಿ ಸಾಗಬೇಕು ದೇವಾಲಯಗಳು ಧಾರ್ಮಿಕ ಶ್ರದ್ದಾ ಕೇಂದ್ರಗಳಾಗಬೇಕು, ಗ್ರಾಮಗಳಲ್ಲಿ ಎಲ್ಲಾ ಜಾತಿ ವರ್ಗಗಳ ಜನರು ಸೌಹಾರ್ದತೆಯಿಂದ ಬಾಳಬೇಕು ಎಂದು ಸ್ವಾಮೀಜಿ ತಿಳಿಸಿದರು.

ದಲಿತರು ಮತಾಂತರದಿಂದ ದೂರವಿರಬೇಕು ಮತಾಂತರವಾದರೆ ನೀವು ಧಾರ್ಮಿಕ ಅಲ್ಪ ಸಂಖ್ಯಾತರಾಗುತ್ತೀರಿ ಸರ್ಕಾರಿ ಸೌಲಭ್ಯದಿಂದ ವಂಚಿತರಾಗುತ್ತೀರಿ ಆದುದರಿಂದ ಜಾತಿ ಗಣತಿಯ ವೇಳೆ ಧರ್ಮದ ಕಾಲಂ ನಲ್ಲಿ ಹಿಂದೂ ಎಂದು ಜಾತಿ ಕಾಲಂನಲ್ಲಿ ಮಾದಿಗ ಎಂದು ಬರೆಸುವಂತೆ ಸಲಹೆ ನೀಡಿದರು.

ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ ಮಾತನಾಡಿ ದೇವಾಲಗಳು ಮನಸ್ಸುಗಳನ್ನು ಬೆಸೆಯುವ ಕೇಂದ್ರಗಳಾಗಿವೆ ಆದರೆ ಮೂಢನಂಬಿಕೆಗೆ ಬಲಿಯಾಗಿ ಹಬ್ಬ ಜಾತ್ರೆ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಬಾರದು ಎಂದು ಗ್ರಾಮಸ್ಥರಿಗೆ ಕಿವಿ ಮಾತು ಹೇಳಿದರು.

ವಿಧಾನ ಪರಿಷತ್ ಸದಸ್ಯ ಕೆ ಎಸ್ ನವೀನ್ ಮಾತನಾಡಿ ದೇವಾಲಯಗಳು ಹಿಂದೂಗಳ ಐಕ್ಯತೆಯ ಕೇಂದ್ರಗಳಾಗಿವೆ. ಗ್ರಾಮಗಳ ಬಹುತೇಕೆ ವಿಷಯಗಳು ನಿರ್ಧಾರವಾಗುವುದು ದೇವಾಲಯಗಳಲ್ಲಿಯೇ ಅದ್ಯಾತ್ಮಿಕ, ಹಾಗೂ ಸಾಂಸ್ಕೃತಿಕ ವಾತಾವರಣ ನಿರ್ಮಿಸುವಲ್ಲಿ ದೇವಾಲಗಳ ಪಾತ್ರ ಅನನ್ಯ ಎಂದು ಹೇಳಿದರು.

ಒಳ ಮೀಸಲಾತಿ ಜಾರಿಗೊಳಿಸುವಲ್ಲಿ ನಿರಂತರ ಶ್ರಮ ವಹಿಸಿದ ಶ್ರೀ ಬಸವ ಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿ, ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಬಳ್ಳಾರಿ ಹೆಚ್ ಹನುಮಂತಪ್ಪ, ಬಿ ಪಿ ಪ್ರಕಾಶಮೂರ್ತಿ, ಹುಲ್ಲೂರು ಕುಮಾರಸ್ವಾಮಿ, ಹಾಗೂ ಖ್ಯಾತ ವೈದ್ಯರಾದ ಡಾ. ಈ. ಸತೀಶ್ ಇವರನ್ನು ಇದೇ ವೇಳೆ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ಶ್ರೀಮತಿ ಸೌಭಾಗ್ಯ ಸೌಭಾಗ್ಯ ಬಸವರಾಜನ್, ಬಿಜೆಪಿ ಜಿಲ್ಲಾಧ್ಯಕ್ಷೆ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ನರಸಿಂಹರಾಜು, ಶ್ರೀ ಮಾದಾರ ಚನ್ನಯ್ಯ ಸೇವಾ ಸಮಿತಿಯ  ಹೂಡಿ ಮಂಜುನಾಥ್, ಪರಶು ರಾಮ್ ಹೊನ್ನಳ್ಳಿ, ಯೋಗೀಶ್ ಸೋರೆಕುಂಟೆ, ಸಂದೀಪ್ ಗುಂಡಾರ್ಪಿ, ಮಾದಾರಚನ್ನಯ್ಯ ನೌಕರರ ಸೇವಾಸಮಿತಿಯ ಸದಸ್ಯರು ಮುಖಂಡರಾದ ಮಾರಘಟ್ಟ ಜಯಪ್ಪ, ಬೊಮ್ಮೇನಹಳ್ಳಿ ಮಹಾಂತೇಶ್, ನಾಗರಾಜ್, ಅನಂತ್ ಲಕ್ಷ್ಮಿಸಾಗರ ದೇವರಾಜ್, ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಸಿಇಓ ಎಸ್. ರಾಘವೇಂದ್ರ, ವ್ಯವಸ್ಥಾಪಕ ಓ ಮಲ್ಲಿಕಾರ್ಜುನ್ ಜಾನುಕೊಂಡ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಸೇರಿದಂತೆ ಮಲ್ಲಾಪುರ ಗ್ರಾಮದ ಮುಖಂಡರು ಇದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ