Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಒಕ್ಕೂಟದ ಪದಾದಿಕಾರಿಗಳ ಸಮಾವೇಶ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ತಾಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶ ನಡೆಯಿತು.


ನಗರದ ಕೋರ್ಟ್ ರಸ್ತೆಯಲ್ಲಿರುವ ಎ ಬಿ ಎಂ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾದ ಕಾರ್ಯಕ್ರಮವನ್ನು  ಉದ್ಘಾಟಿಸಿ ಅವರು  ಮಾತನಾಡಿದರು.  ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿರ್ದೇಶಕ ಉಮಾರಬ್ಬ  ಸಂಘ ರಚನೆ ಮಾಡಿ ಸದಸ್ಯರು ಉದ್ಯೋಗ ಸೃಷ್ಠಿ ಮಾಡಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಲ ಪಡೆದು ಹಣವನ್ನು ಒಳ್ಳೆಯ ಉದ್ಯೋಗಕ್ಕೆ ಬಳಕೆ ಮಾಡಿ ಅದರಲ್ಲಿ ಬಂದ ಲಾಭದ ಹಣದಲ್ಲಿ ಸಂಘಕ್ಕೆ

ಪ್ರತಿವಾರ ಕಂತಿನ ಲೆಕ್ಕಾಚಾರದ ರೀತಿಯಲ್ಲಿ ಕಟ್ಟುವುದರಿಂದ ಉತ್ತಮ ಬೆಳವಣಿಗೆ ಕಾಣಬಹುದು ಎಂದರು ಹಾಗು ಬಡ್ಡಿ ಲೆಕ್ಕಾಚಾರ  ಸಂಘದ ಮುಖೇನ ವ್ಯವಹಾರ ಮಾಡಿದಾಗ ಕಡಿಮೆ ದಾಖಲಾತಿ ಕಡಿಮೆ ಬಡ್ಡಿದರದಲ್ಲಿ ಸದಸ್ಯರಿಗೆ ಆಗುವ ಲಾಭಗಳು, ಸಮುದಾಯ ಅಭಿವೃದ್ಧಿ ವತಿಯಿಂದ ಗ್ರಾಮಗಳಿಗೆ ಸಿಗುವ ಅನುದಾನಗಳು, ಉನ್ನತ ಶಿಕ್ಷಣಕ್ಕೆ ಶಿಷ್ಯವೇತನ, ನಿರ್ಗತಿಕರಿಗೆ ಮಾಸಸನ ನೀಡುವ ಬಗ್ಗೆ ಮಾಹಿತಿ ನೀಡಿದರು ಹಾಗು.   ಒಕ್ಕೂಟದ ಪದಾಧಿಕಾರಿಗಳ ಜವಾಬ್ದಾರಿ ,ನಾಯಕತ್ವ ಗುಣ, ಸಹಕಾರ ಮನೋಭಾವನೆ ಬಗ್ಗೆ  ತರಬೇತಿ ನೀಡಿದರು.

ನಂತರ  ರವಿಕಿರಣ್ (ಪ್ರಾದ್ಯಾಪಕರು, ಸುದ್ದಿ ಸಂಪಾದಕರು DD ಚಂದನ) ಇವರು ಮಾತನಾಡಿ ಕ್ಷೇತ್ರದಿಂದ ಬರುವ ಅನುದಾನವನ್ನು ಒಕ್ಕೂಟದ ಮೂಲಕ ಸದಸ್ಯರಿಗೆ ಒದಗಿಸಲು ಒಕ್ಕೂಟದ ಪದಾಧಿಕಾರಿಗಳ ಪಾತ್ರ ಮುಖ್ಯ ಎಂದು ತಿಳಿಸಿದರು. 

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಮಾಡುತ್ತಿದ್ದು ಹಳ್ಳಿ ಹಳ್ಳಿಗಳಿಗೂ ಸೇವೆ ನೀಡುತ್ತಿದ್ದು ವೀರೇಂದ್ರ ಹೆಗ್ಗಡೆಯವರ ಪಾತ್ರ ಶ್ಲಾಘನೀಯ ಎಂದು ಹಾರೈಸಿದರು. 

 ಒಕ್ಕೂಟದ ಪದಾಧಿಕಾರಿಗಳ ಜವಾಬ್ದಾರಿ ,ನಾಯಕತ್ವ ಗುಣ, ಸಹಕಾರ ಮನೋಭಾವನೆ ಬಗ್ಗೆ ಜಿಲ್ಲಾ ನಿರ್ದೇಶಕರಾದ ಉಮರಬ್ಬ ತರಬೇತಿ ನೀಡಿದರು. ಸಿ ಎಸ್ ಸಿ ಕೇಂದ್ರದ ಸಿರಿ ಮಳಿಗೆಗಳು ತೆರೆಯಲಾಗಿತ್ತು.

ಕಾರ್ಯಕ್ರಮದಲ್ಲಿ ಕನ್ನಡ ಛಾಯಾಗ್ರಾಹಕ ಸಂಘದ ಅಧ್ಯಕ್ಷರು ಹೆಚ್ ಎಸ್. ನಾಗೇಶ್, ಬ್ಯಾಂಕ್ ಆಫ್ ಬರೋಡ ಸಹಾಯಕ  ಪ್ರಬಂಧಕ ಮಧುಸೂದನ್, ತಾಲೂಕು ಯೋಜನಾಧಿಕಾರಿ ಸುಧಾ ಬಾಸ್ಕರ್  ಮೇಲ್ವಿಚಾರಕರು, ಕೃಷಿ ಮೇಲ್ವಿಚಾರಕರು, ತಾಲೂಕಿನ 9 ವಲಯದ ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ,ಸಿ ಎಸ್ ಸಿ ಸೇವಾದಾರರು, ಕಛೇರಿ ಸಿಬ್ಬಂದಿಗಳು ಹಾಗು ಮಹಿಳಾ ಸಂಘದ ಪದಾಧಿಕಾರಿಗಳು  ಹಾಜರಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ