Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳದ ನತದೃಷ್ಟ ಹೆಣ್ಣು ಸೌಜನ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸೌಜನ್ಯ.......
ಮತ್ತೆ ಎದ್ದು ಬಂದ ಧರ್ಮಸ್ಥಳದ ನತದೃಷ್ಟ ಹೆಣ್ಣು ಮಗು ಸೌಜನ್ಯ.........ಸೌಜನ್ಯ ಸೃಷ್ಟಿಸಿರುವ ತ್ರಿಶಂಕು ಸ್ಥಿತಿ....... " ಯಾವ ಕಾಲದ ಶಾಸ್ತ್ರವೇನು ಹೇಳಿದರೇನು ? ಎದೆಯ ದನಿಗೂ ಮಿಗಿಲು‌ ಶಾಸ್ತ್ರವಿಹುದೇನು " ಎಂಬ ರಾಷ್ಟ್ರಕವಿ ಕುವೆಂಪು ಅವರ ಮಾತುಗಳನ್ನು ನೆನೆಯುತ್ತಾ....
ಸೌಜನ್ಯ ಎಂಬ ಬಾಲಕಿಯ ಕೊಲೆ ಮತ್ತು ಅತ್ಯಾಚಾರ ಇತ್ತೀಚಿನ ವರ್ಷಗಳ ಅತ್ಯಂತ ವಿಶೇಷ ಪ್ರಕರಣ. ಬಹುಶಃ ನಿಜವಾದ ಅಪರಾಧಿ ಪತ್ತೆಯಾದರೆ ಅತ್ಯಂತ ಘೋರ ಅಪರಾಧಿ ಎಂದು ಪರಿಗಣಿಸಿ ಗಲ್ಲು ಶಿಕ್ಷೆ ಆಗುವಷ್ಟು ತೀವ್ರವಾದ ಹೇಯ ಕೃತ್ಯ. ದುರಾದೃಷ್ಟವಶಾತ್ ಪೋಲೀಸರು ಸಲ್ಲಿಸಿದ್ದ ಆರೋಪ ಪಟ್ಟಿಯ ಆರೋಪಿ ಸಹ ಹತ್ತು ವರ್ಷಗಳ ದೀರ್ಘ ವಿಚಾರಣೆಯ ನಂತರ ನಿರಪರಾಧಿ ಎಂದು ಬಿಡುಗಡೆ ಗೊಳಿಸಲಾಗಿದೆ.


ಆ ಸಂತೋಷ್ ರಾವ್ ನಿಜವಾದ ಅಪರಾಧಿಯಾಗಿದ್ದು ಸಾಕ್ಷಿ ಆಧಾರಗಳ ಕೊರತೆಯ ಕಾರಣದಿಂದಾಗಿ ಬಿಡುಗಡೆಯಾದನೇ ಅಥವಾ ಇವನಲ್ಲದೆ ಮತ್ತೊಬ್ಬ ಅಥವಾ ಮತ್ತಷ್ಟು ಜನ ಇದ್ದಾರೆಯೇ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆ.

ಈಗ ಮತ್ತೊಮ್ಮೆ ವಿಶೇಷ ತನಿಖೆಗೆ ಒತ್ತಾಯಿಸುತ್ತಿರುವ ಪ್ರಮುಖರ ಅನುಮಾನವೇನೆಂದರೆ ಅವರಿಗೆ ಮಾಹಿತಿ ಹಕ್ಕು ಕಾಯಿದೆಯಡಿ ದೊರೆತಿರುವ ದಾಖಲೆಗಳ ಪ್ರಕಾರ ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಹತ್ತು ಹದಿನೈದು ವರ್ಷಗಳಲ್ಲಿ ಸುಮಾರು 500 ರಷ್ಟು ಅಪರಿಚಿತ ದೇಹಗಳು ಮತ್ತು ಕಾಣೆಯಾದ ಮಹಿಳೆಯರ ಬಗ್ಗೆ ಪ್ರಕರಣಗಳು ದಾಖಲಾಗಿವೆ. ಅದರ ಹಿಂದೆ ಒಂದು ವ್ಯವಸ್ಥಿತ ಜಾಲ ಇರಬಹುದಾ ಎಂದು ಅಂದಾಜು ಮಾಡಲಾಗುತ್ತಿದೆ.

ಸಹಜವಾಗಿಯೇ ಆ ಸಂಪೂರ್ಣ ಪ್ರದೇಶ ಅನಧಿಕೃತವಾಗಿ ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆಯವರ ಕುಟುಂಬದ ನಿಯಂತ್ರಣದಲ್ಲಿದೆ. ಅಲ್ಲಿನ ಎಲ್ಲಾ ವ್ಯವಹಾರಗಳಲ್ಲಿ ಅವರ ಕೈವಾಡ ಇದ್ದೇ ಇರುತ್ತದೆ. ಅಷ್ಟೇ ಅಲ್ಲ ಅವರು ರಾಜಕೀಯವಾಗಿಯೂ ಸಹ ರಾಜ್ಯ ಮತ್ತು ಕೇಂದ್ರದ ಮಟ್ಟದಲ್ಲಿ ಪ್ರಭಾವ ಶಾಲಿಗಳು. ಆದ್ದರಿಂದ ಸೌಜನ್ಯ ಪ್ರಕರಣಗಳಲ್ಲಿ ತನಿಖೆಯ ಹಾದಿ ತಪ್ಪಿಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.

ರಾಜ್ಯದ ಅತ್ಯಂತ ಬುದ್ದಿವಂತರ ಜಿಲ್ಲೆ ದಕ್ಷಿಣ ಕನ್ನಡದ ಎಲ್ಲಾ ವರ್ಗದ ಕೆಲವು ಪರಿಚಿತರು ಪತ್ರಕರ್ತರು ಮುಂತಾದ ಕೆಲವರನ್ನು ಗೆಳೆತನದ ಸಲುಗೆಯಲ್ಲಿ ಮಾತನಾಡಿಸಿದಾಗ ಧರ್ಮಸ್ಥಳದ ಕಾರ್ಯಚಟುವಟಿಕೆಗಳ ಬಗ್ಗೆ ಉತ್ತಮ ಅಭಿಪ್ರಾಯ ಇದ್ದರೂ ಅವರ ಕುಟುಂಬದ ನಡವಳಿಕೆಗಳ ಬಗ್ಗೆ ಅಂತಹ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಲಿಲ್ಲ. ವಿಧವಿಧವಾಗಿ ಪ್ರಶ್ನಿಸಿದಾಗಲು ಸೌಜನ್ಯ ಅತ್ಯಾಚಾರ ಮತ್ತು ಕೊಲೆಯ ಹಿಂದೆ ಪ್ರಭಾವಿಗಳು ಇರುವ ‌ಸಾಧ್ಯತೆ ಇದೆ ಎಂದೇ ಹೇಳಿದರು. ಭೂ ವ್ಯವಹಾರ ಮತ್ತು ಆರ್ಥಿಕ ಚಟುವಟಿಕೆಗಳನ್ನು ಮೀರಿ ಒಂದಷ್ಟು ದುರ್ನಡತೆಗಳ ಬಗ್ಗೆ ಸಹ ಜನ ಖಾಸಗಿಯಾಗಿ ಮಾತನಾಡಿಕೊಳ್ಳುತ್ತಾರೆ.

ವಿಶ್ವ ಮಹಿಳಾ ದಿನದ ಸಂದರ್ಭದಲ್ಲಿ ಯೂಟ್ಯೂಬರ್ ಸಮೀರ್ ಎಂಬಾತ ತನ್ನ ವಿಚಾರ ಮಂಡನೆಯ, ವಕೀಲಿಕೆಯ ಸಾಮರ್ಥ್ಯದಿಂದ ಇಡೀ ರಾಜ್ಯಾದ್ಯಂತ ಮತ್ತೆ ಈ ವಿಷಯ ಪ್ರಸ್ತಾಪವಾಗುವಂತೆ ಮಾಡಿದ್ದಾರೆ. ಇದು ಪೊಲೀಸ್ ಮತ್ತು ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ. ಸಾರ್ವಜನಿಕ ಚರ್ಚೆಯಲ್ಲಿ ಈ ವಿಷಯ ಮುನ್ನೆಲೆಗೆ ಬಂದಿದೆ.....

ಬಹುಶಃ ಈ ವಿಷಯ 12/13 ವರ್ಷಗಳ ನಂತರವೂ ಇಷ್ಟೊಂದು ಕಾವು ಪಡೆಯಲು ಕಾರಣ ಸೌಜನ್ಯ ಎಂಬ ಹೆಣ್ಣುಮಗಳು ಧರ್ಮಸ್ಥಳದ ಸಮೀಪ ಅತ್ಯಂತ ಬರ್ಬರವಾಗಿ ಅತ್ಯಾಚಾರಕ್ಕೊಳಗಾಗಿ  ಕೊಲೆಯಾಗಿದ್ದು....

ಎರಡನೆಯದಾಗಿ, ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಅಲ್ಲಿನ ಅವರ ಅನುಯಾಯಿಗಳು ಅಲ್ಲಿಗೆ ಭೇಟಿ ನೀಡುತ್ತಿದ್ದ ಭಕ್ತರ ನಂಬಿಕೆ ಉಳಿಸಿಕೊಳ್ಳದೆ ತಮ್ಮ ವರ್ತನೆಯಲ್ಲಿ ಸಾಕಷ್ಟು ದುರಹಂಕಾರ ಪ್ರದರ್ಶಿಸುತ್ತಿದ್ದುದು, ಅದು ದೇವಸ್ಥಾನದ ಪ್ರವೇಶದಿಂದ ಹಿಡಿದು ಊಟ ಬಡಿಸುವ ಮತ್ತು ವಸತಿ ಸೌಕರ್ಯ ಕೊಡುವ ಸಂದರ್ಭದಲ್ಲಿ ಅಲ್ಲಿನ ಕಾರ್ಯಕರ್ತರ ಪಡೆ ನಡೆದುಕೊಳ್ಳುತ್ತಿದ್ದ ರೀತಿ ಸಾಕಷ್ಟು ಜನರಿಗೆ ಕಿರಿಕಿರಿ ಉಂಟು ಮಾಡುತ್ತಿತ್ತು. ಸೌಜನ್ಯ ಎಂಬ ಪದದ ಅರ್ಥವೇ ಗೊತ್ತಿಲ್ಲದಂತೆ ನಡೆದುಕೊಳ್ಳುತ್ತಿದ್ದರು ಎಂದು ಬಹುತೇಕ ಜನರು ತಮ್ಮ ಅನುಭವ ಹಂಚಿಕೊಳ್ಳುತ್ತಾರೆ....

ಮಂಜುನಾಥ ಸ್ವಾಮಿ ಮತ್ತು ಧರ್ಮಸ್ಥಳದ ಮೇಲೆ ತುಂಬಾ ಭಕ್ತಿ ಗೌರವ ಇರುವವರು ಸಹ ಅಲ್ಲಿನ ಧರ್ಮಾಧಿಕಾರಿ ಮತ್ತು ಅವರ ಸಹಚರರ ಬಗ್ಗೆ ಅಸಹನೆ ಹೊಂದಿರುವುದು ಕಂಡುಬರುತ್ತದೆ.....

ಮೂರನೆಯದಾಗಿ, ಅವರು ನಡೆಸುತ್ತಿರುವ ಸ್ತ್ರೀ ಶಕ್ತಿಯ ಸ್ವಸಹಾಯ ಹಣಕಾಸು ವ್ಯವಹಾರದಿಂದ ಒಂದಷ್ಟು ನೊಂದಿರುವ ಮತ್ತು ದೌರ್ಜನ್ಯಕ್ಕೆ ಒಳಗಾದ ಸಾಮಾನ್ಯ ಜನ ಅವರ ಬಗ್ಗೆ ಕೋಪಗೊಂಡಿದ್ದಾರೆ. ಅದು ಮತ್ತೊಂದು ಕಾರಣವಾದರೆ ಅಲ್ಲಿನ ಸ್ಥಳೀಯರೇ ಹೆಚ್ಚಾಗಿ ಅವರನ್ನು ಬೆಂಬಲಿಸುತ್ತಿಲ್ಲ. ಏಕೋ ಏನೋ ಅವರು ಸಹ ಅಲ್ಲಿನ ಆಡಳಿತ ವ್ಯವಸ್ಥೆಯ ಬಗ್ಗೆ ತೀರಾ ಅಸಮಾಧಾನ ಹೊಂದಿದ್ದಾರೆ....
ಹಾಗೆಯೇ ಇಲ್ಲಿ ಪಕ್ಷಾತೀತವಾಗಿ
, ಧರ್ಮಾತೀತವಾಗಿ ಸೌಜನ್ಯ ಪರವಾಗಿ ಎಲ್ಲರೂ ಧ್ವನಿ ಎತ್ತುತ್ತಿರುವುದು ಮೂಲ ಕಾರಣವಾಗಿ ಎಸ್ಐಟಿ, ಸಿಬಿಐ, ನ್ಯಾಯಾಂಗ ವ್ಯವಸ್ಥೆ ಎಲ್ಲವೂ ಈ ಪ್ರಕರಣವನ್ನು ಇತ್ಯರ್ಥಪಡಿಸಿರುವಾಗಲು ಸಾಮಾನ್ಯ ಜನರಿಗೆ ನಂಬಿಕೆಯೇ ಹುಟ್ಟುತ್ತಿಲ್ಲ....

ಇದೊಂದು ವಿಚಿತ್ರ ಪರಿಸ್ಥಿತಿ. ಇದೀಗ ತಮ್ಮ ರಾಜಕೀಯ ಜೀವನದ ಅಂತಿಮ ಹಂತದಲ್ಲಿರುವ ಸನ್ಮಾನ್ಯ  ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು ಈ ವಿಷಯದಲ್ಲಿ ಇನ್ನೊಂದು ತನಿಖೆಗೆ ಅವಕಾಶ ಮಾಡಿಕೊಡಬೇಕಾಗಿದೆ. ಇನ್ನೊಂದೇ ಒಂದು ತನಿಖೆ ಈ ವಿಷಯಕ್ಕೆ ಒಂದು ಮುಕ್ತಾಯ ಮಾಡಬಹುದು....

ಆದರೆ ತನಿಖೆಗೆ ಆಯ್ದುಕೊಳ್ಳುವ ತಂಡ ಮಾತ್ರ ಬಹಳ ದಕ್ಷ, ಅನುಭವ, ಸಾಮರ್ಥ್ಯ ಮತ್ತು ಪ್ರಾಮಾಣಿಕತೆ ಹೊಂದಿರಬೇಕು. ಕರ್ನಾಟಕದ ಯಾರಾದರೂ ಸಿಬಿಐ ನಲ್ಲಿ ಕೆಲಸ ಮಾಡಿರುವ ಅಥವಾ " ರಾ " (RAW) ದಲ್ಲಿ ಕೆಲಸ ಮಾಡಿರುವ ಅಥವಾ ಇಲ್ಲಿನ ಸಿಸಿಬಿ/ಸಿಐಡಿ ಯಲ್ಲಿ ಕೆಲಸ ಮಾಡಿರುವ ಅಥವಾ ಮಂಗಳೂರು ವಲಯದಲ್ಲಿ ಕಮಿಷನರ್ ಆಗಿ ದಕ್ಷತೆ ಮೆರೆದಿರುವ ಯಾರಾದರೂ ಒಬ್ಬ ಪ್ರಾಮಾಣಿಕ ನಿವೃತ್ತ ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ ಒಂದು ವಿಶೇಷ ತಂಡ ರಚಿಸಿ, ಅದಕ್ಕೆ ಸಂಪೂರ್ಣ ಸ್ವಾತಂತ್ರ್ಯ ಕಲ್ಪಿಸಬೇಕು ಮತ್ತು ಯಾವುದೇ ಸಮಯ ನಿಗದಿ ಮಾಡಬಾರದು.....

ಏಕೆಂದರೆ, ಅಪರಾಧ ಶಾಸ್ತ್ರದಲ್ಲಿ ಪರಿಣಿತರಾದವರು ಸಮಯಕ್ಕೆ ಕಾದು ಅಥವಾ ವೇಷ ಮರೆಸಿಕೊಂಡು ಅಪಾರ ಶ್ರಮದಿಂದ ಸಾಕಷ್ಟು ಸಮಯವನ್ನು ಕಳೆದು, ಹೊಂಚು ಹಾಕಿ ಈ ವಿಷಯವನ್ನು ಪತ್ತೆ ಮಾಡಬೇಕಾಗುತ್ತದೆ. ಈಗಾಗಲೇ ಬಹುತೇಕ ದಾಖಲೆಗಳು ನಾಶವಾಗಿರುವುದು, ಪೋಲಿಸ್ ತನಿಕೆ ಒಂದಷ್ಟು ತಪ್ಪುಗಳನ್ನು ಮಾಡಿರುವುದು ಮತ್ತು ಅಪರಾಧದಲ್ಲಿ ಭಾಗಿಯಾಗಿರುವವರು ಸಾಕಷ್ಟು ಜಾಗೃತಿ ವಹಿಸಿರುವುದರಿಂದ ಬಹುದೊಡ್ಡ ಸವಾಲು ಎದುರಾಗುತ್ತದೆ. ಇದನ್ನೆಲ್ಲ ನಿಭಾಯಿಸಿ ಸತ್ಯ ಹೊರಬರಲು ಸಮಯ ಬೇಕಾಗುತ್ತದೆ...

ಒಂದು ವೇಳೆ ಸತ್ಯ ಯಾರ ಪರವಾಗಿದ್ದರೂ ಕರ್ನಾಟಕದ ಜನ ಅದನ್ನು ಒಪ್ಪಿಕೊಳ್ಳಲೇಬೇಕು. ಒಂದು ವೇಳೆ ನಿಜಕ್ಕೂ ಅಪರಾಧಿಗಳು ಪತ್ತೆಯೇ ಆಗದಿದ್ದರೆ ಅಥವಾ ಈಗ ಎಲ್ಲರೂ ಆರೋಪಿಸುತ್ತಿರುವ ವ್ಯಕ್ತಿಗಳು ಅಪರಾಧಿಗಳು ಆಗದೇ ಇದ್ದರೆ ನಾವು ಅದನ್ನು ಒಪ್ಪಿಕೊಂಡು ಧರ್ಮಸ್ಥಳದ ಧರ್ಮಾಧಿಕಾರಿಗಳ ಬಳಿ ಕ್ಷಮೆ ಕೇಳಬೇಕಾಗುತ್ತದೆ. ಏಕೆಂದರೆ ನಮ್ಮ ಸಂವಿಧಾನದ ಪ್ರಕಾರ ನೂರು ಅಪರಾಧಿಗಳು ತಪ್ಪಿಸಿಕೊಂಡರು ಪರವಾಗಿಲ್ಲಾ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು. ಈ ವಿಷಯದಲ್ಲಿ ನಮ್ಮೆಲ್ಲ ಭಾವನೆಗಳನ್ನು ನಾವು ನಿಯಂತ್ರಿಸಿಕೊಳ್ಳಬೇಕು.....

ಹಾಗೆಯೇ ಕಳೆದ 25 ವರ್ಷಗಳಲ್ಲಿ ಧರ್ಮಸ್ಥಳ, ಉಜಿರೆ, ಬೆಳ್ತಂಗಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿರುವ ಕೊಲೆ, ಅತ್ಯಾಚಾರಕಾಣೆಯಾಗುವಿಕೆಯ ಬಗ್ಗೆಯೂ ತನಿಖಾ ತಂಡ ಕಣ್ಣು ಹಾಯಿಸಲಿ. ಆಗ ಒಂದಷ್ಟು ಮಾಹಿತಿ ಹೊರಬರಬಹುದು...

ಏನೇ ಆಗಲಿ ಸತ್ಯ ಆದಷ್ಟು ಬೇಗ ಹೊರಬರಲಿ. ಅದಕ್ಕಾಗಿ ಈ ವಿಷಯಕ್ಕೆ ಸಂಬಂಧಪಟ್ಟಂತೆ ಮಾತ್ರ ಮಾನ್ಯ ಮುಖ್ಯಮಂತ್ರಿಗಳು ಕಾನೂನಿನ ಅಧ್ಯಯನ ಮಾಡಿ, ಸಾಧ್ಯತೆಯನ್ನು ಪರಿಶೀಲಿಸಿ, ಒಂದು ತನಿಖಾ ತಂಡ ರಚಿಸಲಿ ಎಂದು ಸಾರ್ವಜನಿಕವಾಗಿ ಒತ್ತಾಯಿಸುವುದೊಂದೇ ಈಗ ಉಳಿದಿರುವ ಮಾರ್ಗ. ಇಲ್ಲದಿದ್ದರೆ ಈ ಗಾಳಿ ಸುದ್ದಿಯ ಆರೋಪ ಪ್ರತ್ಯಾರೋಪಗಳು ಜನರಲ್ಲಿ ನಿರಂತರವಾಗಿ ಪ್ರತಿಧ್ವನಿಸುತ್ತಲೇ ಇರುತ್ತದೆ. ಇದರಿಂದ ಧರ್ಮಸ್ಥಳ ಮತ್ತು ಅಲ್ಲಿನ ಧರ್ಮಾಧಿಕಾರಿಯ ಹೆಸರಿಗೂ ಕಳಂಕ ನಿರಂತರವಾಗಿರುತ್ತದೆ....

ಅದರಿಂದ ಮುಕ್ತವಾಗಲು ಅವರಿಗೂ ಒಂದು ಅವಕಾಶ ಸಿಗಲಿ ಅಥವಾ ತಪ್ಪೆಸಗಿದ್ದರೆ ಅವರಿಗೆ ಶಿಕ್ಷೆಯಾಗಲಿ. ಇದನ್ನು ನಿರ್ಧರಿಸಬೇಕಾಗಿದ್ದು ಈ ಕ್ಷಣದಲ್ಲಿ  ಗಾಳಿ ಮಾತುಗಳಲ್ಲ. ನಮ್ಮ ವಕೀಲಿಕೆಯೂ ಅಲ್ಲ ಅಥವಾ ಯೂಟ್ಯೂಬ್ ಗಳ ಮಾತಿನ ತರ್ಕಗಳಲ್ಲ.....

ಇದರ ಜೊತೆಗೆ ಸಾಮಾಜಿಕ ಜಾಲತಾಣಗಳು ಈ ಸಮಾಜದ ಮುಖ್ಯವಾಹಿನಿಯ ಮಾಧ್ಯಮಗಳನ್ನು, ಅವರ ಮುಖವಾಡಗಳನ್ನು ಕಳಚಿ ಸಾರ್ವಜನಿಕ ಅಭಿಪ್ರಾಯ ರೂಪಿಸುವ ಮಾಧ್ಯಮಗಳಾಗಿ ಪ್ರಭಾವ ಬೀರುತ್ತಿರುವುದು ಒಂದು ಕ್ರಾಂತಿಕಾರಕ ಬೆಳವಣಿಗೆಯಾಗಿದೆ. ಅದನ್ನು ಈ ಸಮಾಜ ಮತ್ತು ಸರ್ಕಾರಗಳು ಗುರುತಿಸಬೇಕಾಗಿದೆ. ಮಹಿಳಾ ದಿನಾಚರಣೆಯ ಈ ಸಂದರ್ಭದಲ್ಲಿ ಸೌಜನ್ಯ ಮತ್ತು ಆ ರೀತಿಯ ನತದೃಷ್ಟ ಹೆಣ್ಣುಮಕ್ಕಳು ಇನ್ನು ಮುಂದೆಯಾದರೂ ಅದೃಷ್ಟ ದೇವತೆಗಳಾಗಿ ಬದಲಾಗಲಿ ಎಂದು ಆಶಿಸುತ್ತಾ.....
ಲೇಖನ:ವಿವೇಕಾನಂದ. ಎಚ್. ಕೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ