LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳ ಆಕ್ರೋಶಕ್ಕೆ ಬೆದರಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಎಂ.ಬಿ. ಪಾಟೀಲ್ ವಾಗ್ದಾಳಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ವಿಜಯಪುರ:
"ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಗೊಂದಲಗಳಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ಅನುಭವಿಸಿದ ಮಾನಸಿಕ ಯಾತನೆ ಮತ್ತು ಯುವ ಸಮೂಹ ನಡೆಸಿದ ಸುದೀರ್ಘ ಹೋರಾಟಕ್ಕೆ ಕೊನೆಗೂ ಕೇಂದ್ರ ಸರ್ಕಾರ ತಲೆಬಾಗಿದೆ. ವಿದ್ಯಾರ್ಥಿಗಳ ತೀವ್ರ ಆಕ್ರೋಶಕ್ಕೆ ಬೆದರಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ," ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಕಿಡಿಕಾರಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರುಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

47 ದಿನಗಳ ಕಾಲ ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ:
ನೀಟ್ ಪರೀಕ್ಷೆಯ ಎಡವಟ್ಟುಗಳನ್ನು ಪ್ರಸ್ತಾಪಿಸಿದ ಎಂ.ಬಿ. ಪಾಟೀಲ್, "ಸುಮಾರು 47 ದಿನಗಳ ಕಾಲ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡಿದೆ. ಪರಿಣಾಮವಾಗಿ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಎರಡನೇ ಬಾರಿ ನಡೆಸಲಾದ ನೀಟ್ ಪರೀಕ್ಷೆಗೆ ಸುಮಾರು ಒಂದೂವರೆ ಲಕ್ಷ ವಿದ್ಯಾರ್ಥಿಗಳು ಹಾಜರಾಗದೇ ಇರುವುದೇ ಈ ಭ್ರಷ್ಟ ವ್ಯವಸ್ಥೆಗೆ ಸಾಕ್ಷಿ. ಇಷ್ಟೆಲ್ಲಾ ಆದರೂ ಕುಂಭಕರ್ಣ ನಿದ್ದೆಯಲ್ಲಿದ್ದ ಕೇಂದ್ರ ಸರ್ಕಾರ ಕೊನೆಗೂ ರಾಜೀನಾಮೆ ಪಡೆದುಕೊಂಡಿದೆ," ಎಂದರು.

ಅಚ್ಚೇ ದಿನ್’ ಭರವಸೆ ಹುಸಿಯಾಗಿದೆ:
2014ರಲ್ಲಿ 'ಅಚ್ಚೇ ದಿನ್' (ಒಳ್ಳೆಯ ದಿನಗಳು) ಎಂಬ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರಶಿಕ್ಷಣಉದ್ಯೋಗ ಹಾಗೂ ಸಾರ್ವಜನಿಕ ಜೀವನಕ್ಕೆ ಸಂಬಂಧಿಸಿದಂತೆ ಸರಣಿ ಜನವಿರೋಧಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.

ಎಥನಾಲ್ ಮಿಶ್ರಿತ ಇಂಧನ ನೀತಿಗೂ ವಿರೋಧ:
ಇದೇ ವೇಳೆ ಎಥನಾಲ್ ಮಿಶ್ರಿತ ಇಂಧನ ಬಳಕೆಯ ಕುರಿತು ಪ್ರಸ್ತಾಪಿಸಿದ ಅವರು, "ಅವಿಜ್ಞಾನಿಕ ನಿರ್ಧಾರಗಳನ್ನು ಜಾರಿಗೊಳಿಸುವ ಮೊದಲು ಸಮಗ್ರ ವೈಜ್ಞಾನಿಕ ಅಧ್ಯಯನವಾಹನ ತಯಾರಕರ ಅಭಿಪ್ರಾಯ ಹಾಗೂ ದೀರ್ಘಾವಧಿಯ ಪರಿಣಾಮಗಳ ಕುರಿತು ವ್ಯಾಪಕ ಪರಿಶೀಲನೆ ನಡೆಸಬೇಕಿತ್ತು. ಈ ವಿಷಯ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಚರ್ಚೆ ಹಾಗೂ ಹೋರಾಟಕ್ಕೆ ಹಾದಿಮಾಡಿಕೊಡಲಿದೆ," ಎಂದು ಎಚ್ಚರಿಸಿದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭೋವಿ ಸಮುದಾಯದ ಪ್ರಮುಖ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಇಮ್ಮಡಿ ಸ್ವಾಮೀಜಿ ಮನವಿಚಿತ್ರದುರ್ಗದಲ್ಲಿ ಜುಲೈ 29ಕ್ಕೆ ಗುರುಪೂರ್ಣಿಮೆ ಪ್ರಯುಕ್ತ 'ಗುರುವಂದನೆ'ಜೋಗಿ ಸಮುದಾಯ ಭವನ ನಿರ್ಮಾಣಕ್ಕೆ ₹2 ಕೋಟಿ ಅನುದಾನ ಹಾಗೂ ಹಕ್ಕುಪತ್ರ ವಿತರಣೆಗೆ ಮನವಿ2028ರ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ರಾಜಕೀಯ ಸಂನ್ಯಾಸದ ಸುಳಿವು ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯವಿದ್ಯಾರ್ಥಿ ಹೋರಾಟದ ನೆಪದಲ್ಲಿ ಬೆಂಕಿ ಹಚ್ಚಲು ಯತ್ನಿಸಿದ 'ಮುಲ್ಲಾ'ನ ಕೃತ್ಯ ಖಂಡಿಸಿದ್ದೇನೆಯೇ ಹೊರತು ಮುಸ್ಲಿಂ ಸಮುದಾಯವನ್ನಲ್ಲ: ಸಿ.ಟಿ. ರವಿ ಸ್ಪಷ್ಟನೆ ಕಾರ್ಯಕರ್ತರೊಂದಿಗೆ 'ಮನ್ ಕೀ ಬಾತ್' ವೀಕ್ಷಿಸಿದ ಬಿ.ವೈ. ವಿಜಯೇಂದ್ರ ದೋಷರಹಿತ ಮತದಾರರ ಪಟ್ಟಿಯೇ ಸದೃಢ ಪ್ರಜಾಪ್ರಭುತ್ವದ ಅಡಿಪಾಯ: ಆರ್. ಅಶೋಕ್ ಮನೆ ಮನೆ ಅಭಿಯಾನಕೇಂದ್ರ ಸಚಿವರು ರಾಜೀನಾಮೆ ನೀಡಿದ್ದಾರೆ; ದುರಂತಗಳಿಗೆ ಯಾರು ಹೊಣೆ? - ಆರ್. ಅಶೋಕ್ ಪ್ರಶ್ನೆಪ್ರಶ್ನೆ ಪತ್ರಿಕೆ ಸೋರಿಕೆಗೆ ಜಿಲ್ಲಾಧಿಕಾರಿಗಳ ಹೊಣೆ: ಕಾಂಗ್ರೆಸ್ ವಿರುದ್ಧ ‘ದ್ವಂದ್ವ ನೀತಿ’ ಆರೋಪ ಹೊರಿಸಿದ ಆರ್. ಅಶೋಕ್ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಾಕ್ಷಿ: ಹೆಚ್.ಡಿ. ಕುಮಾರಸ್ವಾಮಿ