Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕ್ರೀಡೆಗಳಿಂದ ಶಿಸ್ತು ಹಾಗೂ ಆರೋಗ್ಯ ಸುಧಾರಣೆ- ಪುಟ್ಟಸ್ವಾಮಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕ್ರೀಡೆ ಶಿಕ್ಷಣದ ಅವಿಭಾಜ್ಯ ಅಂಗ. ಕ್ರೀಡಾ ಶಿಕ್ಷಣದಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡುವುದರ ಜೊತೆಗೆ ಆರೋಗ್ಯವು ವೃದ್ಧಿಸುತ್ತದೆ. ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ ನಡೆ ಹಾಗೂ ಗುಣಗಳನ್ನು ರೂಢಿಸಿಕೊಳ್ಳಬಹುದು ಎಂದು ಪಿಯು ಉಪನಿರ್ದೇಶಕ ಪುಟ್ಟಸ್ವಾಮಿ ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ವಿಭಾಗ ಹಾಗೂ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಬುಧವಾರ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆಯಲ್ಲಿ ಶಿಸ್ತು ಪಾಲಿಸುವುದು ಮುಖ್ಯ. ಈ ಮೂಲಕ ಕ್ರೀಡೆಯಲ್ಲಿ ಮೈಲಿಗಲ್ಲನ್ನು ಸಾಧಿಸಲು ಸಾಧ್ಯ. ಕ್ರೀಡಾ ಕೂಟದಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆ, ಸಾಮಾರ್ಥ್ಯಗಳನ್ನು ಪ್ರದರ್ಶಿಸುವ ಮೂಲಕ ಮುಂದೆ ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಚಿತ್ರದುರ್ಗ ಜಿಲ್ಲೆಯನ್ನು ಪ್ರತಿನಿಧಿಸುವಂತಾಗಬೇಕು ಎಂದು ಕ್ರೀಡಾಪಟುಗಳಿಗೆ ಪುಟ್ಟಸ್ವಾಮಿ ಕಿವಿ ಮಾತು ಹೇಳಿದರು.

ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಸ್.ದೇವೇಂದ್ರಪ್ಪ ಮಾತನಾಡಿ, ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು, ದೇಹವನ್ನು ಬಲಿಷ್ಠವಾಗಿಸುವ ಏಕಮಾತ್ರ ಮಾರ್ಗವಾಗಿದೆ. ಕ್ರೀಡೆಯು ದೇಹವನ್ನು ಸದೃಢವಾಗಿಸುವುದರ ಜೊತೆಗೆ ಮಾನಸಿಕವಾಗಿ ನಮ್ಮ ಗುರಿಯನ್ನು ಸಾಧಿಸುವ ಚಿಂತನೆ ನೀಡುತ್ತದೆ ಎಂದರು.

ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಹೆಚ್.ಬಿ.ನರಸಿಂಹಮೂರ್ತಿ ಸ್ವಾಗತಿಸಿದರು. ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಿರಯ ಉಪನ್ಯಾಸಕ ಡಾ.ಬಿ.ಕೃಷ್ಣಪ್ಪ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ದೈಹಿಕ ಶಿಕ್ಷಕ ಬೋಧಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮಹಮ್ಮದ್ ರಿಜ್ವಾನ್, ಇಂದ್ರಣ್ಣ, ಬಸವರಾಜಪ್ಪ ಹಾಗೂ ಸಿದ್ದರಾಮಣ್ಣ ಅವರಿಗೆ ಸನ್ಮಾನಿಸಲಾಯಿತು.

ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಎರಡು ದಿನಗಳ ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ನೀಡಿದ್ದು, ಗುಂಪು ಆಟಗಳಾದ ಫುಟ್‌ಬಾಲ್, ವಾಲಿಬಾಲ್, ಥ್ರೋಬಾಲ್, ಕಬ್ಬಡಿ, ಕೋಕೋ, ಬಾಸ್ಕೆಟ್ ಬಾಲ್ ಆಟಗಳು ನಡೆದವು. ಸೆ.12ರಂದು ಗುರುವಾರ ಬೆಳಿಗ್ಗೆ 6ಕ್ಕೆ ಬಾಲಕ, ಬಾಲಕಿಯರ ಗುಡ್ಡಗಾಡು ಓಟ ಹಾಗೂ ಬೆಳಿಗ್ಗೆ 9ಕ್ಕೆ ಆಥ್ಲೇಟಿಕ್ಸ್ ಕ್ರೀಡೆಗಳ ನಡೆಯಲಿವೆ.



ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಆರ್.ಮಂಜುನಾಥ್, ಎನ್.ನರಸಿಂಹಮೂರ್ತಿ, ಬಿ.ಆರ್.ಶಿವಕುಮಾರ್, ಮಹೇಶ್ ಬಾಬು, ಉಪನ್ಯಾಸಕ ಸಂಘದ ಅಧ್ಯಕ್ಷ ಬಿ.ಆರ್.ಮಲ್ಲೇಶ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ನೆಲವಿಗಿ, ಕ್ರೀಡಾ ಸಂಚಾಲಕ ಎ.ಎಸ್.ರಂಗಪ್ಪ ಸೇರಿದಂತೆ ಜಿಲ್ಲೆಯ 6 ತಾಲ್ಲೂಕಿನ ವಿವಿಧ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ