LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂಪುಟ ವಿಸ್ತರಣೆ ಭಿನ್ನಮತ ತೀವ್ರ: ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಸಚಿವ ಸ್ಥಾನ ವಂಚಿತ ಶಾಸಕರು ಹಾಗೂ ಅವರ ಬೆಂಬಲಿಗರು ಮಂಗಳವಾರ ಬೆಂಕಿ ಹಚ್ಚಿ, ರಸ್ತೆ ತಡೆ ನಡೆಸಿ, ಕೆಪಿಸಿಸಿ ಕಚೇರಿಯ ಮುಂಭಾಗದಲ್ಲೇ ಬೃಹತ್‌ಪ್ರತಿಭಟನೆ ನಡೆಸಿದರು. ಇತ್ತ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ ಎಂದು ಮಹಿಳಾ ಶಾಸಕಿಯರೂ ಬಹಿರಂಗವಾಗಿ ಬೇಡಿಕೆ ಇಟ್ಟಿದ್ದಾರೆ.

ಕಾರಣ ತಿಳಿಸಬೇಕಿತ್ತು - ದಿನೇಶ್ ಗುಂಡೂರಾವ್ ಬೇಸರ: ನನಗೆ ಸಚಿವ ಸ್ಥಾನ ತಪ್ಪಲು ಕಾರಣವೇನು ಎಂಬುದನ್ನು ನಾಯಕರು ತಿಳಿಸಬೇಕಿತ್ತು ಎಂದು ಹಿರಿಯ ನಾಯಕ ದಿನೇಶ್ ಗುಂಡೂರಾವ್ ಅಸಮಾಧಾನ ಹೊರಹಾಕಿದ್ದಾರೆ. "ಮೊದಲ ಬಾರಿಗೆ ನಮ್ಮ ಸಮುದಾಯಕ್ಕೆ ಅವಕಾಶ ಸಿಕ್ಕಿಲ್ಲ, ಕಾರ್ಯಕರ್ತರಿಗೆ ತೀವ್ರ ನೋವಾಗಿದೆ. ಆದರೂ ನಾನು ಯಾವುದೇ ಅತೃಪ್ತರ ಸಭೆಗೆ ಹೋಗುವುದಿಲ್ಲ," ಎಂದು ಸ್ಪಷ್ಟಪಡಿಸಿದ್ದಾರೆ.

ಕೃಷ್ಣಪ್ಪ-ಪ್ರಿಯಾ ಕೃಷ್ಣ ಬೆಂಬಲಿಗರ ಕಪ್ಪು ಪಟ್ಟಿ ಪ್ರತಿಭಟನೆ: ಶಾಸಕರಾದ ಎಂ. ಕೃಷ್ಣಪ್ಪ ಹಾಗೂ ಪ್ರಿಯಾ ಕೃಷ್ಣ ಬೆಂಬಲಿಗರು ಕೆಪಿಸಿಸಿ ಕಚೇರಿ ಮುಂದೆ ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಧರಣಿ ನಡೆಸಿದರು. ಖಾಲಿ ಇರುವ ಒಂದು ಸಚಿವ ಸ್ಥಾನವನ್ನು ಕೃಷ್ಣಪ್ಪ ಅಥವಾ ಪ್ರಿಯಾ ಕೃಷ್ಣ ಅವರಿಗೆ ನೀಡಬೇಕು. ಇಲ್ಲವಾದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಚ್ಚರಿಸಿದರು. ಇತ್ತ ಶಾಸಕ ಕೃಷ್ಣಪ್ಪ ಅವರನ್ನು ಮನವೊಲಿಸಲು ನೂತನ ಸಚಿವರಾದ ಚಲುವರಾಯಸ್ವಾಮಿ ಹಾಗೂ ಹೆಚ್.ಸಿ. ಬಾಲಕೃಷ್ಣ ಯತ್ನಿಸಿದ್ದಾರೆ.

ಮಹಿಳಾ ಶಾಸಕಿಯರ ಬಹಿರಂಗ ಬೇಡಿಕೆ:
ಉಮಾಶ್ರೀ: ಉಪಸಭಾಪತಿ ಸ್ಥಾನ ಸಿಕ್ಕಿದ್ದರೂ ಸಚಿವ ಸ್ಥಾನಕ್ಕೆ ಅರ್ಹತೆ ಇದ್ದು, ಪಕ್ಷ ಖಾಲಿ ಉಳಿಸಿಕೊಂಡಿರುವ ಸ್ಥಾನದಲ್ಲಿ ಅವಕಾಶ ನೀಡುವ ನಿರೀಕ್ಷೆಯಿದೆ ಎಂದಿದ್ದಾರೆ.

ಅನ್ನಪೂರ್ಣ ತುಕಾರಾಮ್: ಮಹಿಳಾ ಕೋಟಾದಡಿಯಲ್ಲಿ ತಮಗೂ ಸಚಿವ ಸ್ಥಾನ ನೀಡಬೇಕೆಂದು ಸಿಎಂ ಅವರನ್ನು ಕೋರಿದ್ದಾರೆ.

ನಯನಾ ಮೋಟಮ್ಮ: ಚಿಕ್ಕಮಗಳೂರು ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಮಹಿಳಾ ಮೀಸಲಾತಿ ಬಗ್ಗೆ ಮಾತನಾಡುವ ಪಕ್ಷವು ಒಬ್ಬ ಮಹಿಳೆಗೆ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಹುಲ್ ಗಾಂಧಿ ಬಳಿ ಮಾತನಾಡುವೆ - ಬಿ.ಕೆ. ಹರಿಪ್ರಸಾದ್: ಕೆಪಿಸಿಸಿ ಕಚೇರಿ ಮುಂದೆ ಭೇಟಿಯಾದ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, "ನಮ್ಮಲ್ಲಿ 136 ಶಾಸಕರಿದ್ದು ಎಲ್ಲರಿಗೂ ಒಂದೇ ಬಾರಿಗೆ ಸ್ಥಾನ ಸಾಧ್ಯವಿಲ್ಲ. ನಿಮ್ಮ ಮನವಿಯನ್ನು ಇಂದೇ ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಅವರ ಗಮನಕ್ಕೆ ತರುತ್ತೇನೆ" ಎಂದು ಭರವಸೆ ನೀಡಿದರು.

ಪ್ರತಿಭಟನಾಕಾರರ ವಿರುದ್ಧ ಪೊಲೀಸ್ ಕೇಸ್: ಮಾಗಡಿ ರಸ್ತೆ, ನಾಗರಭಾವಿ ಹಾಗೂ ಚಂದ್ರಾಲೇಔಟ್‌ನಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿದ ಕೃಷ್ಣಪ್ಪ ಬೆಂಬಲಿಗರ ವಿರುದ್ಧ ಮಾಗಡಿ ರಸ್ತೆ, ವಿಜಯನಗರ ಮತ್ತು ಬ್ಯಾಟರಾಯನಪುರ ಠಾಣೆಗಳಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲೂ ಅಸಮಾಧಾನದ ಕಿಚ್ಚು: ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಆಕ್ರೋಶಗೊಂಡ ಬೆಂಬಲಿಗರು ಚಿಕ್ಕಬಳ್ಳಾಪುರದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ರಾಜ್ ಬಗ್ಗೆ ಅಪ ಪ್ರಚಾರ ಸಹಿಸುವುದಿಲ್ಲ-ಕನ್ನಡ ಪರ ಸಂಘಟನೆಗಳ ಆಕ್ರೋಶಪಟ್ಟಣ ಪಂಚಾಯ್ತಿ ಹಗರಣಗಳ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಮಾನವನಾಗಿ ಬಾಳುವುದಕ್ಕಿಂತ ಮಹಾ ಮಾನವನಾಗಿ ಬದುಕುವುದು ಲೇಸು- ದಿವ್ಯ ಜ್ಞಾನಾನಂದಗಿರಿಶ್ರೀಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿಯಾದ ಪರೀಕ್ಷಾ ಅಕ್ರಮಗಳ ತಡೆ ಕಾಯ್ದೆಯಲ್ಲದಕೆರೆ ಗ್ರಾ.ಪಂ.ಗೆ ಮುತ್ತಿಗೆ; ಕುಡಿಯುವ ನೀರಿಗೆ ಆಗ್ರಹಿಸಿ ಪಂಚಾಯಿತಿ ಆವರಣದಲ್ಲೇ ಅಡುಗೆ ಮಾಡಿ ಗ್ರಾಮಸ್ಥರ ಆಕ್ರೋಶ!ಕರಿಯಾಲ ಗ್ರಾಪಂನಲ್ಲಿ ವಿ.ಬಿ. ಗ್ರಾಮ್ ಜಿ ಯೋಜನೆ ಜಾಗೃತಿ: ಕಾರ್ಮಿಕರಿಗೆ ಸಮಾನ ಕೂಲಿ ಹಾಗೂ ಹಕ್ಕುಗಳ ಕುರಿತು ಅಧಿಕಾರಿಗಳಿಂದ ಮಾಹಿತಿನೂತನ ಸಚಿವರ ಆಯ್ಕೆಗೆ ಬಿಜೆಪಿ-ಜೆಡಿಎಸ್ ತೀವ್ರ ಆಕ್ಷೇಪ: ಜಂಟಿ ವಾಗ್ದಾಳಿಜಾಗತಿಕ ತಂತ್ರಜ್ಞಾನದ ಮುಂದಿನ ಕ್ರಾಂತಿ ಕರ್ನಾಟಕದಿಂದಲೇ ರೂಪಗೊಳ್ಳಲಿ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಅತಿವೃಷ್ಠಿ, ಬರ ಪರಿಸ್ಥಿತಿ ಪರಿಶೀಲನೆಗೆ ಸೂಚನೆ: ಸಚಿವರಿಗೆ ಉಸ್ತುವಾರಿ ಜಿಲ್ಲೆಗಳ ಜವಾಬ್ದಾರಿ ಹಂಚಿಕೆ ​ಕಾಂಪೌಂಡ್ ಸೆಮಿಕಂಡಕ್ಟರ್ ಫ್ಯಾಬ್ ಸ್ಥಾಪನೆಗೆ ಹಿರಾನಂದಾನಿ ಗ್ರೂಪ್‌ನ ‘ಟಾರ್ಕ್ ಸೆಮಿಕಂಡಕ್ಟರ್ಸ್’ ಆಸಕ್ತಿ ಎಂ.ಬಿ. ಪಾಟೀಲ್