LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಮೃತಾಪುರ ಶಾಲಾ ಮಕ್ಕಳಿಗೆ ಬಾದಾಮಿ ಹಾಲು, ಬಿಸ್ಕೆಟ್ ವಿತರಣೆ: ಉದಾರ ಸೇವೆಗೆ ಶ್ಲಾಘನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
 ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳ ಆರೋಗ್ಯ ಹಾಗೂ ಪೌಷ್ಟಿಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ಪುಣೆಯ ಉದ್ಯಮಿ ವಿಶ್ವನಾಥ ಶೇಲಾರ್ ಅವರು ಕೈಗೊಂಡಿರುವ ವಿಶೇಷ ಸೇವಾ ಕೈಂಕರ್ಯ ನಿಜಕ್ಕೂ ಶ್ಲಾಘನೀಯ ಎಂದು ಶಾಲೆಯ ಮುಖ್ಯ ಶಿಕ್ಷಕ ಟಿ.ಪಿ. ಉಮೇಶ್ ತಿಳಿಸಿದ್ದಾರೆ.

ಸರ್ಕಾರವು ಈಗಾಗಲೇ ಶಾಲೆಗಳಲ್ಲಿ ಬೆಳಗಿನ ಹಾಲು ಹಾಗೂ ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆ ಮಾಡಿದೆ. ಇದರ ಜೊತೆಗೆ, ಶಾಲೆಯ ಮಕ್ಕಳಿಗೆ ಪ್ರತಿದಿನ ಬೆಳಿಗ್ಗೆ ಹಾಲಿನೊಂದಿಗೆ ಬಾದಾಮಿ ಮಿಕ್ಸ್ ಹಾಗೂ ಬಿಸ್ಕೆಟ್ ವಿತರಿಸಲು ಉದ್ಯಮಿ ವಿಶ್ವನಾಥ ಶೇಲಾರ್ ಅವರು ನೆರವು ನೀಡುತ್ತಿದ್ದಾರೆ. ಈ ಪೌಷ್ಟಿಕ ಆಹಾರವು ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದ್ದು, ಶಾಲಾ ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರಿಂದ ಉತ್ತಮ ಮೆಚ್ಚುಗೆ ವ್ಯಕ್ತವಾಗಿದೆ.

ಪುಣೆಯಲ್ಲಿ ಸ್ವಂತ ಉದ್ಯಮ ನಡೆಸುತ್ತಾ ನೂರಾರು ಜನರಿಗೆ ಆಸರೆಯಾಗಿರುವ ವಿಶ್ವನಾಥ ಶೇಲಾರ್ ಅವರು, ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಂದ ಪ್ರೇರಿತರಾಗಿ ಈ ಸಹಾಯಕ್ಕೆ ಮುಂದಾಗಿದ್ದಾರೆ. ಅವರ ಈ ಸಮಾಜಮುಖಿ ಚಿಂತನೆ ಹಾಗೂ ಉದಾರ ಕೊಡುಗೆ ಇತರರಿಗೂ ಮಾದರಿಯಾಗಿದೆ ಎಂದು ಮುಖ್ಯ ಶಿಕ್ಷಕರು ಹರ್ಷ ವ್ಯಕ್ತಪಡಿಸಿದರು.

ದಾನಿಗಳ ಈ ಕಳಕಳಿಯ ಸೇವೆಗೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಟಿ. ಗೋವಿಂದಪ್ಪ, ಸದಸ್ಯರಾದ ಮಂಜುನಾಥ್, ರಂಗಸ್ವಾಮಿ, ಕಾಂತರಾಜು, ಬಸವರಾಜು, ತಿಮ್ಮಮ್ಮ ಹಾಗೂ ಶಾರದಮ್ಮ ಅವರು ವಿಶೇಷ ಕೃತಜ್ಞತೆ ಸಲ್ಲಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್