LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಕಿಯರ ವೃತ್ತಿಪರ ಕಾಲೇಜು ವಿದ್ಯಾರ್ಥಿನಿಯರಿಗೆ ಬುದ್ದನ ಕಂಚಿನ ವಿಗ್ರಹಗಳ ವಿತರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಚಿತ್ರದುರ್ಗ :
ಅಹಿಂಸಾ ವಾದಿ ಬುದ್ದನ ತತ್ವಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡರೆ ಸಮಾನತೆ ಎನ್ನುವುದು ತನ್ನಷ್ಟಕ್ಕೆ ತಾನೆ ಸಿಗುತ್ತದೆಂದು ಆಂಗ್ಲ ಭಾಷಾ  ಉಪನ್ಯಾಸಕ ಪ್ರೊ.ಡಿ.ಹೆಚ್.ನಟರಾಜ ತಿಳಿಸಿದರು.

ರಾಜ್ಯದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ರವರ ೭೫ ನೇ ಜನ್ಮದಿನದ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವೃತ್ತಿಪರ ಕಾಲೇಜು ವಿದ್ಯಾರ್ಥಿನಿಲಯದಲ್ಲಿ ಬುದ್ದನ ಕಂಚಿನ ವಿಗ್ರಹಗಳ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಬುದ್ದನ ಸಂದೇಶ ಕುರಿತು ಉಪನ್ಯಾಸ ನೀಡಿದರು.

ಹುಟ್ಟುಹಬ್ಬವನ್ನು ಎಲ್ಲರೂ ವೈಭವೋಪೇತವಾಗಿ ಆಚರಿಸಿಕೊಳ್ಳುವ ಇಂದಿನ ಕಾಲಘಟ್ಟದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ರವರು ರಾಜ್ಯಾದ್ಯಂತ ೭೫ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಬುದ್ದನ ಹಿತ್ತಾಳೆ ವಿಗ್ರಹ ವಿತರಿಸುತ್ತಿರುವುದು ಹೆಮ್ಮೆಯ ಸಂಗತಿ. ಸಚಿವರಾದಾಗಿನಿಂದಲೂ ನಾಡಿನ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ. ಎಲ್ಲೆಡೆ ಕ್ರೌರ್ಯ, ಮತ್ಸರ, ಅಸೂಯೆ, ದ್ವೇಷವನ್ನು ಕಾಣುತ್ತಿರುವ ಈ ಸಂದರ್ಭದಲ್ಲಿ ಬುದ್ದನ ತತ್ವ, ಸಿದ್ದಾಂತ, ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದು ಹೇಳಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರು ಶಿಕ್ಷಣ, ಸಂಘಟನೆ, ಹೋರಾಟಕ್ಕೆ ಒತ್ತು ಕೊಟ್ಟವರು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾತನೆಯನ್ನು ನೀಡಿದ್ದಾರೆ. ಬುದ್ದ ಹಾಗೂ ಅಂಬೇಡ್ಕರ್‌ರವರ ಆಶಯಗಳು ಪ್ರಸ್ತುತ ಸಮಾಜಕ್ಕೆ ಮುಖ್ಯ. ಚಿಕ್ಕಂದಿನಿಂದಲೂ ಶೋಷಣೆ, ಅಸ್ಪೃಶ್ಯತೆ, ಅವಮಾನ ಅನುಭವಿಸಿದ ಅಂಬೇಡ್ಕರ್‌ರವರು ಹಿಂದೂ ಧರ್ಮದಲ್ಲಿ ಹುಟ್ಟಿ. ಹಿಂದೂ ಧರ್ಮದಲ್ಲಿಯೇ ಸಾಯಲಾರೆ ಎಂದು ಭೌದ್ದ ಧರ್ಮಕ್ಕೆ ಸೇರ್ಪಡೆಗೊಂಡರು ಎಂದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಿ.ಹೆಚ್.ಮೋಹನ್ ಮಾತನಾಡಿ ಅಹಿಂಸೆಯ ಸಂದೇಶವನ್ನು ಸಮಾಜಕ್ಕೆ ಸಾರಿರುವ ಬುದ್ದನ ಆದರ್ಶ, ತತ್ವ, ಸಿದ್ದಾಂತಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡಾಗ ಅಶಾಂತಿ ಎನ್ನುವುದೇ ಇರುವುದಿಲ್ಲ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಆಶಯದಂತೆ ಶಿಕ್ಷಣವಂತರಾದಾಗ ನಿಜವಾಗಿಯೂ ಅಂಬೇಡ್ಕರ್‌ರವರ ಮೌಲ್ಯಗಳಿಗೆ ನಿಜವಾದ ಅರ್ಥ ಸಿಗುತ್ತದೆ ಎಂದು ನುಡಿದರು.

ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಮಾತನಾಡಿ ಹಾಸ್ಟೆಲ್ ವಿದ್ಯಾರ್ಥಿಗಳು ಬುದ್ದ ಹಾಗೂ ಅಂಬೇಡ್ಕರ್‌ರವರ ವಿಚಾರಗಳನ್ನು ತಿಳಿದುಕೊಳ್ಳಬೇಕು. ಗೌತಮ ಬುದ್ದನ ಅಹಿಂಸಾ ಮಾರ್ಗ ಇಂದಿನ ಸಮಾಜಕ್ಕೆ ಬೇಕಾಗಿದೆ. ಅದೇ ರೀತಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಸಂವಿಧಾನದ ಮೌಲ್ಯಗಳು ನಿಮ್ಮ ಜೀವನದಲ್ಲಿ ಅಳವಡಿಕೆಯಾಗಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್, ಸಹಾಯಕ ನಿರ್ದೇಶಕ ಓ.ಪರಮೇಶ್ವರಪ್ಪ, ಬಿ.ಎಸ್.ಎನ್.ಎಲ್. ನಿವೃತ್ತ ವಿಭಾಗೀಯ ಇಂಜಿನಿಯರ್ ಬಿ.ಎ.ಪರಮೇಶ್ವರಪ್ಪ, ಬುದ್ದ ಯುವ ಪಡೆ ಅಧ್ಯಕ್ಷ ಡಿ.ಗೌತಮ್, ನಿವೃತ್ತ ಶಿಕ್ಷಕ ವೈ.ತಿಪ್ಪೇಸ್ವಾಮಿ, ವಕೀಲ ಸಂತೋಷ್, ವಿಶ್ವೇಶ್ವರಯ್ಯ, ನಿಂಗರಾಜು ಬಿವಿಕೆಎಸ್, ಕರಡಿ ಮಂಜುನಾಥ್, ಮಂಜುಳಮ್ಮ, ಕೆ.ದೇವರಾಜು, ಹೆಚ್.ಸಿ.ನಿರಂಜನಮೂರ್ತಿ, ಮೂರು ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿನಿಯರು, ಕಚೇರಿ ಸಿಬ್ಬಂದಿ, ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ನಿಲಯ ಪಾಲಕರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲಕಿಯರ ವೃತ್ತಿಪರ ಕಾಲೇಜು ವಿದ್ಯಾರ್ಥಿನಿಯರಿಗೆ ಬುದ್ದನ ಕಂಚಿನ ವಿಗ್ರಹಗಳ ವಿತರಣೆನೂತನ ಸಚಿವ ಟಿ.ರಘುಮೂರ್ತಿವರಿಗೆ ಹೂವಿನ ಮಳೆ ಸುರಿಸಿ ಸ್ವಾಗತಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆನಾಪಿ ಕುಸಿತ: ವಿದ್ಯುತ್‌ ಇಲ್ಲದೆ, ಸೊಳ್ಳೆಗಳ ಕಾಟಕ್ಕೆ ಕತ್ತಲಲ್ಲಿ ಬಾಣಂತಿಯರ ಪರದಾಟ!ಹೂಗಳಿಂದ ಅರಳಿದೆ ಗಂಗರ ಸಾಮ್ರಾಜ್ಯದ ಇತಿಹಾಸ: ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂಸಿಎಂ ಶಿವಕುಮಾರ್‌ ಭೇಟಿಯಾದ ಸರ್ಕಾರಿ ಮಹಿಳಾ ನೌಕರರ ನಿಯೋಗ: ಸ್ವಚ್ಛ ಇಂಧನ ಕ್ರಾಂತಿಗೆ ಉಕ್ಕು ಬೆನ್ನೆಲುಬು: ಅಂತಾರಾಷ್ಟ್ರೀಯ ಇಂಧನ ಸಮ್ಮೇಳನದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಪಾದನೆ ಸರ್ಕಾರದ ವೈಫಲ್ಯಗಳ ವಿರುದ್ಧ ಎನ್‌ಡಿಎ ಕಾದಾಟ: ಕುಮಾರಸ್ವಾಮಿ-ಬೊಮ್ಮಾಯಿ, ಅಶೋಕ್ ಸಮಾಲೋಚನೆಪ್ರಮಾಣ ವಚನ ಮುಗಿದು 3 ದಿನವಾದರೂ ಖಾತೆ ಹಂಚಿಕೆಯಿಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್‌. ಅಶೋಕ್ ವಾಗ್ದಾಳಿಕೆಪಿಎಸ್‌ಸಿ ಭ್ರಷ್ಟಾಚಾರದ ಕೂಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ ಆಕ್ರೋಶ ಸಚಿವ ಸ್ಥಾನ ‘ಪೇಮೆಂಟ್ ಸೀಟ್’: ಸಿ.ಟಿ. ರವಿ ಗಂಭೀರ ಆರೋಪ