Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಟ್ಟಡ ಕಾರ್ಮಿಕರಿಗೆ ದಿನಸಿ ಕಿಟ್ ವಿತರಣೆ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಶ್ರೀಶಾರದಾಶ್ರಮದ ದೇವಸ್ಥಾನವನ್ನು ಕಟ್ಟಿದ ಕಾರ್ಮಿಕರು ಮತ್ತು ಇತರೆ ಕಾರ್ಮಿಕರು ಸೇರಿದಂತೆ ಹದಿನೈದು ಕಾರ್ಮಿಕ ಕುಟುಂಬಗಳಿಗೆ ಶ್ರೀಶಾರದಾಶ್ರಮದಿಂದ ಆಹಾರ ಧಾನ್ಯಗಳ ಕಿಟ್ ಗಳನ್ನು ಆಶ್ರಮದ ಸ್ವಯಂಸೇವಕರು ಎಲ್ಲಾ ಕಾರ್ಮಿಕರಿಗೆ ಪೂಜೆ ಮತ್ತು ಆರತಿ ನೆರವೇರಿಸಿ ವಿತರಿಸಿದರು.


ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಕಿಟ್ ಗಳನ್ನು ವಿತರಿಸಿ  ಆಶೀರ್ವಚನ ನೀಡಿದ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಅವರು ಆಶ್ರಮದಿಂದ ಪ್ರತಿ ತಿಂಗಳು ಸ್ವಾಮಿ ವಿವೇಕಾನಂದರ ಜೀವ ಶಿವ ಸೇವಾ ಕಾರ್ಯಕ್ರಮದ ಅಂಗವಾಗಿ ಬಡ-ಅಲೆಮಾರಿ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಲಾಗುತ್ತಿದೆ.

ಈ ಬಾರಿ ಶ್ರೀಶಾರದಾಶ್ರಮದ ದೇವಸ್ಥಾನವನ್ನು ಕಟ್ಟಿದ ಕಾರ್ಮಿಕರು ಮತ್ತು ಇತರೆ ಕಾರ್ಮಿಕರಿಗೆ ರಾಗಿ,ಗೋಧಿ, ಬೇಳೆ,ಬೆಲ್ಲ, ಎಣ್ಣೆ,ಸೋಪು ಸೇರಿದಂತೆ ದಿನಬಳಕೆಯ ವಸ್ತುಗಳು ಒಳಗೊಂಡ  ಕಿಟ್ ಗಳನ್ನು ಆಶ್ರಮದ ಭಕ್ತರ ಉದಾರ ಆರ್ಥಿಕ ನೆರವಿನಿಂದ ನೀಡಲಾಗುತ್ತಿದೆ.

ಕಾರ್ಮಿಕರು ಈ ವಸ್ತುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನ ನಡೆಸುವಂತೆ ಕರೆ ನೀಡಿದರು.
ಕಾರ್ಯಕ್ರಮದ ಪ್ರಯುಕ್ತ ಪ್ರಾರ್ಥನೆ ಮತ್ತು ಭಜನೆಯನ್ನು ಯತೀಶ್ ಎಂ ಸಿದ್ದಾಪುರ ನಡೆಸಿಕೊಟ್ಟರೆ, ಧ್ಯಾನಾಭ್ಯಾಸ, ದಿವ್ಯತ್ರಯರಿಗೆ ಮಂಗಳಾರತಿ ಮತ್ತು ಸಂನ್ಯಾಸಿ ಗೀತೆಯ ಗಾಯನ ನಡೆಯಿತು.


ದಿನಸಿ ಕಿಟ್ ವಿತರಣಾ ಸಮಾರಂಭದಲ್ಲಿ ಸದ್ಭಕ್ತರಾದ ಎಚ್ ಲಕ್ಷ್ಮೀದೇವಮ್ಮ , ನೇತಾಜಿ ಪ್ರಸನ್ನ, ರಮೇಶ್,ಎಂ ಗೀತಾ ನಾಗರಾಜ್, ಡಾ.ಸಿ‌.ಟಿ.ಬಸವರಾಜಪ್ಪ, ಡಾ.ಲಾವಣ್ಯ,‌ಪಿ.ಎಸ್.ಮಾಣಿಕ್ಯ, ವನಜಾಕ್ಷಿ,ಬೊಮ್ಮಕ್ಕ,ಪೂಜಾ, ನಾಗರತ್ನಮ್ಮ, ರಾಘವೇಂದ್ರ, ಮಂಜುಳಾ, ದ್ರಾಕ್ಷಾಯಣಿ, ಡಿ‌.ಕಾವೇರಿ, ಸಿ.ಎಸ್.ಭಾರತಿ, ಕವಿತಾ, ಯತೀಶ್ ಎಂ ಸಿದ್ದಾಪುರ, ಡಾ.ಭೂಮಿಕ ಸೇರಿದಂತೆ ಕಾರ್ಮಿಕರು, ಸದ್ಭಕ್ತರು ಹಾಗೂ ಬಾಪೂಜಿ ಆರ್ಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ