Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳು ಕೈಗೊಳ್ಳುವ ಕಲಿಕಾ ಅಭ್ಯಾಸ ಪುಸ್ತಕ ವಿತರಣೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯೆಟ್) ಹಾಗೂ ಕರ್ನಾಟಕ ಮಾದರಿ ಶಾಲೆಗಳ ಮಾರ್ಗೋಪಾಯ ಕಾರ್ಯಕ್ರಮದ (
KMSPP) ಭಾಗವಾಗಿರುವ ಶಿಕ್ಷಣ ಫೌಂಡೇಶನ್‌ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಐಯುಡಿಪಿ ಲೇಔಟ್‌ನಲ್ಲಿ ಫೌಂಡೇಶನಲ್ ಲಿಟರಸಿ ಅಂಡ್ ನ್ಯೂಮರಸಿ (FLN) ಅಭ್ಯಾಸ ಪುಸ್ತಕಗಳ ವಿತರಣಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.


ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಯೋಜನೆಗಳ ಸಮನ್ವಯಾಧಿಕಾರಿ (DYPC) ಹನುಮಂತಪ್ಪ, "ಶಿಕ್ಷಣ ಇಲಾಖೆಯು FLN ಕಾರ್ಯಕ್ರಮದ ಕುರಿತು ಆಳವಾಗಿ ಕೆಲಸ ಮಾಡುತ್ತಿದೆ. ಈ ಅಭ್ಯಾಸ ಪುಸ್ತಕಗಳು ಇಲಾಖೆಯ ಪ್ರಯತ್ನಗಳಿಗೆ ಪೂರಕವಾಗಿದ್ದು, ಮಕ್ಕಳು ಇವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಹಾಗೆಯೇ, ಶಿಕ್ಷಕರು ಸಹ ಮಕ್ಕಳು ಪುಸ್ತಕಗಳನ್ನು ಸರಿಯಾಗಿ ಬರೆದಿದ್ದಾರೆಯೇ ಎಂಬುದನ್ನು ವೀಕ್ಷಣೆ ಮಾಡಬೇಕು," ಎಂದು ತಿಳಿಸಿದರು.


ಡಯೆಟ್‌ನ ಹಿರಿಯ ಉಪನ್ಯಾಸಕಿ ಹಾಗೂ ಎಪಿಎಲ್‌ಎನ್‌ನೋಡಲ್ ಅಧಿಕಾರಿ ಜ್ಞಾನೇಶ್ವರಿ ಮೇಡಂ ಅವರು ಮಾತನಾಡಿ, ಈ ಅಭ್ಯಾಸ ಪುಸ್ತಕಗಳು ಚಟುವಟಿಕೆ ಆಧಾರಿತವಾಗಿದ್ದು, ಮಕ್ಕಳು ಶಾಲೆ ಹಾಗೂ ಮನೆಯಲ್ಲೂ ಅಭ್ಯಾಸ ಮಾಡಬೇಕು. ಇದರ ಬಗ್ಗೆ ಪೋಷಕರಿಗೂ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.


ಡಯೆಟ್ ಚಿತ್ರದುರ್ಗದ ಎಫ್‌ಎಲ್‌ಎನ್‌ನೋಡಲ್ ಅಧಿಕಾರಿ ರೇವಣ್ಣ ಮಾತನಾಡಿ, ಜಿಲ್ಲೆಯ KMSPP ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸುತ್ತಿರುವ 70 ಶಾಲೆಗಳಿಗೆ ಎರಡು ದಿನಗಳಲ್ಲಿ ಅಭ್ಯಾಸ ಪುಸ್ತಕಗಳು ತಲುಪಲಿವೆ. ಇಲಾಖೆಯ ಕಲಿಕಾ ಫಲಿತಾಂಶ ಆಧರಿಸಿರುವುದರಿಂದ, ಶಿಕ್ಷಕರು, ಪೋಷಕರು ಮತ್ತು ಮಕ್ಕಳು ಇದನ್ನು ಉತ್ತಮವಾಗಿ ಬಳಕೆ ಮಾಡುವಂತೆ ಪ್ರೇರೇಪಿಸಬೇಕು ಹಾಗೂ ಮೌಲ್ಯಮಾಪನ ಮಾಡಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಮಾತನಾಡಿ,ರ್ಕಾರಿ ಶಾಲೆಗಳಲ್ಲಿ KMSPP ಕಾರ್ಯಕ್ರಮದಲ್ಲಿ ಹಲವಾರು ಸಂಸ್ಥೆಗಳು ಸೇರಿ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿವೆ. FLN ಕಾರ್ಯಕ್ರಮದ ಅಭ್ಯಾಸ ಪುಸ್ತಕಗಳು ಮತ್ತು ಫಾಲೋಅಪ್ ಕ್ರಮಗಳು ಕಲಿಕೆಗೆ ಉತ್ತಮ ವಾತಾವರಣ ಒದಗಿಸುತ್ತಿವೆ ಎಂದು ತಿಳಿಸಿದರು.

ಶಿಕ್ಷಣ ಫೌಂಡೇಶನ್‌ನ ವ್ಯವಸ್ಥಾಪಕ ನಾರಾಯಣ್ ಕಿಲೋಸ್ಕರ್, ಮಕ್ಕಳು ಪ್ರತಿದಿನ ಒಂದು ಪುಟದಷ್ಟು ನಿರಂತರವಾಗಿ ಅಭ್ಯಾಸ ಮಾಡಬೇಕು ಎಂದು ಕರೆ ನೀಡಿದರು.


ಶಿಕ್ಷಣ ಫೌಂಡೇಶನ್‌ನ ಜಿಲ್ಲಾ ಸಂಯೋಜಕ ಕುಮಾರ್, ಈ ಅಭ್ಯಾಸ ಪುಸ್ತಕಗಳನ್ನು ನಕಲು ಮಾಡುವ ಬದಲು ಸ್ವಂತವಾಗಿ ಬರೆಯಬೇಕು. ಗೊತ್ತಿಲ್ಲದ ಅಂಶಗಳನ್ನು ಸ್ನೇಹಿತರು ಅಥವಾ ಶಿಕ್ಷಕರಿಂದ ತಿಳಿದುಕೊಂಡು ಬರೆಯಬೇಕು ಎಂದು ಮಕ್ಕಳಿಗೆ ಪ್ರೇರೇಪಿಸಿದರು.


ಈ ಕಾರ್ಯಕ್ರಮದಲ್ಲಿ ಒಂದರಿಂದ ಮೂರನೇ ತರಗತಿಯ ಮಕ್ಕಳಿಗೆ ಕನ್ನಡ, ಇಂಗ್ಲಿಷ್, ಮತ್ತು ಗಣಿತವನ್ನು ಒಳಗೊಂಡಿರುವ ಒಂದು ಅಭ್ಯಾಸ ಪುಸ್ತಕ ಹಾಗೂ ನಾಲ್ಕರಿಂದ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಕನ್ನಡ, ಇಂಗ್ಲಿಷ್ ಮತ್ತು ಗಣಿತ ಪುಸ್ತಕಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ಫಯಾಜ್, ಶಾಲಾ ಸಹ ಶಿಕ್ಷಕರು, ಶಿಕ್ಷಣ ಫೌಂಡೇಶನ್‌ನ ತಾಲೂಕು ನೋಡಲ್ ಪ್ರಭಾಕರ್ ಪಿ.ವಿ ಮತ್ತು ಗುಂಡಮ್ಮ ಕೆ ಉಪಸ್ಥಿತರಿದ್ದರು. ಸಹಶಿಕ್ಷಕ ಡಾ.ತಿಪ್ಪೇಸ್ವಾಮಿ.ಸ್ವಾಗತಿಸಿ ವಂದಿಸಿದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ