ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕಿನ ಧರ್ಮಪುರ ಹೋಬಳಿಯ ಬೆನಕನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಇನ್ನರ್ ವೀಲ್ ಕ್ಲಬ್ ವತಿಯಿಂದ ಸಮಾಜಮುಖಿ ಕಾರ್ಯಕ್ರಮವನ್ನು ಆಯೋಜಿಸಿ, ಶಾಲಾ ಮಕ್ಕಳಿಗೆ ಊಟದ ತಟ್ಟೆಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕ್ಲಬ್ ಅಧ್ಯಕ್ಷೆ ವೀಣಾ ಸುರೇಶ್, ಸಂಪಾದಕಿ ಪ್ರೇಮಾ ಜಿ.ವಿ., ಸೌಮ್ಯ ಪ್ರಶಾಂತ್ ಹಾಗೂ ಯಮುನಾ ಅವರು ಮಕ್ಕಳ ಶಿಕ್ಷಣ, ಉತ್ತಮ ಸಂಸ್ಕಾರ ಹಾಗೂ ವ್ಯಕ್ತಿತ್ವ ವಿಕಾಸದ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು. ಗ್ರಾಮೀಣ ಭಾಗದ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ತಲುಪಿಸುವುದರ ಜೊತೆಗೆ, ಅವರಲ್ಲಿ ಶಿಕ್ಷಣದ ಮಹತ್ವ ಮತ್ತು ಉತ್ತಮ ಜೀವನ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕ್ಲಬ್ನ ಅಧ್ಯಕ್ಷೆ ವೀಣಾ ಸುರೇಶ್, ಕಾರ್ಯದರ್ಶಿ ನಿರ್ಮಲಾ ಮಹಾಂತೇಶ್, ಸಂಪಾದಕಿ ಪ್ರೇಮಾ ಜಿ.ವಿ., ಇಂಪಾ ರಿತೇಶ್, ಪದ್ಮಜಾ, ಸ್ವರ್ಣಲತಾ ರೆಡ್ಡಿ, ರೇಷ್ಮಾ ಗುಜ್ಜರ್, ಎಸ್.ವಿ. ಲತಾ ವೆಂಕಟೇಶ್, ಲತಾ ಅನಿಲ್, ಸೌಮ್ಯ ಪ್ರಶಾಂತ್ ಹಾಗೂ ಯಮುನಾ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.



