ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಹೊಳಲ್ಕೆರೆ ತಾಲ್ಲೂಕು ಕೆರೆಯಾಗಲಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಲ್.ಕೆ.ಜಿ. ಮತ್ತು ಯು.ಕೆ.ಜಿ ಮಕ್ಕಳಿಗೆ ಯುವ ಕರ್ನಾಟಕ ವೇದಿಕೆ ಜಿಲ್ಲಾ ಘಟಕದಿಂದ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.
ಯುವ ಕರ್ನಾಟಕ ವೇದಿಕೆ ಜಿಲ್ಲಾಧ್ಯಕ್ಷ ರವಿಕುಮಾರ್ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ವಿತರಿಸಿ ಮಾತನಾಡುತ್ತ ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಎಲ್ಲಾ ರೀತಿಯ ಸೌಲತ್ತುಗಳನ್ನು ನೀಡುತ್ತಿದೆ. ಇದರ ಜೊತೆ ದಾನಿಗಳು ನೀಡುವ ನೆರವನ್ನು ಪಡೆದು ಶಿಕ್ಷಣವಂತರಾಗುವ ಮೂಲಕ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಹೇಳಿದರು.
ವೇದಿಕೆ ಕಾರ್ಯದರ್ಶಿ ಓಬಣ್ಣ, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ನಾಗರಾಜ್, ನಗರಾಧ್ಯಕ್ಷ ರೇಣುಕೇಶ್, ಗ್ರಾಮದ ಪ್ರಮುಖರು ಹಾಗೂ ಶಿಕ್ಷಕರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.



