ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ತೋಟದ ಉತ್ಪನ್ನಗಳ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣ ಸಂಘದ (ಜಿಲ್ಲಾ ಹಾಪ್ಕಾಕಮ್ಸ್) 41ನೇ ವಾರ್ಷಿಕ ಮಹಾಸಭೆಯನ್ನು ಇದೇ ಸೆಪ್ಟೆಂಬರ್ 06ರಂದು ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗ ನಗರದ ತುರುವನೂರು ರಸ್ತೆಯ ಜಿಲ್ಲಾ ಹಾಪ್ಕಾದಮ್ಸ್ ಸಂಘದ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ತೋಟದ ಉತ್ಪನ್ನಗಳ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣ ಸಂಘದ ಅಧ್ಯಕ್ಷ ಟಿ.ಎಸ್.ಶಂಕರಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಜಿಲ್ಲಾ ಹಾಪ್ಕಾಸಮ್ಸ್ ವ್ಯವಸ್ಥಾಪಕ ನಿರ್ದೇಶಕ ಟಿ.ಆರ್.ಯಶವಂತ ಕುಮಾರ್ ತಿಳಿಸಿದ್ದಾರೆ.




