ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ನೌಕರರ ಸಂಘ ವತಿಯಿಂದ ನಗರದ ವಸಂತನಗರದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಬೃಹತ್ ಸಮಾವೇಶವನ್ನು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು. ಇದೇ ವೇಳೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ವಿಶೇಷ ಅಭಿನಂದನಾ ಸಮಾರಂಭ ನೆರವೇರಿತು.
ಕಾರ್ಯಕ್ರಮದಲ್ಲಿ ರಾಜಗುರು ದ್ವಾರಕನಾಥ್, ಅರ್ಚಕರ ಸಂಘದ ರಾಜ್ಯಾಧ್ಯಕ್ಷರಾದ ಆಗಮ ವಿದ್ವಾನ್ ಶ್ರೀವತ್ಸ, ಮೈಸೂರಿನ ಪ್ರಸಿದ್ಧ ಚಾಮುಂಡೇಶ್ವರಿ ದೇಗುಲದ ಪ್ರಧಾನ ಅರ್ಚಕರಾದ ಶಶಿಶೇಖರ ದೀಕ್ಷಿತ್ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಪ್ರಮುಖ ಅರ್ಚಕರು, ಆಗಮಿಕರು ಹಾಗೂ ನೌಕರರು ಉಪಸ್ಥಿತರಿದ್ದರು.



