ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ಇದು ಡಿಕೆ ಶಿವಕುಮಾರ್ ಅವರ ಅಪ್ಪಂದಲ್ಲ ಭೂಮಿ, ನಮ್ಮ ಅಪ್ಪನದು ಭೂಮಿ" ಎಂದು ಭೈರಮಂಗಲದ ರೈತರೊಬ್ಬರು ಉಪಮುಖ್ಯಮಂತ್ರಿ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಭೈರಮಂಗಲದಲ್ಲಿ ಜಮೀನು ವಶಪಡಿಸಿಕೊಳ್ಳುವ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿರುವ ರೈತರ ಹೋರಾಟದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಜೆಡಿಎಸ್, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ನೇರ ಸವಾಲು ಹಾಕಿದೆ.
ಜೆಡಿಎಸ್ ನೇರ ಪ್ರಶ್ನೆ:
ಟ್ವಿಟರ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವೀಕೆ ವಾಗ್ದಾಳಿ ನಡೆಸಿರುವ ಜೆಡಿಎಸ್, "ಮಿಸ್ಟರ್ ಡಿ.ಕೆ. ಶಿವಕುಮಾರ್ ಅವರೇ, ಭೈರಮಂಗಲಕ್ಕೆ ಬಂದು ರೈತರ ಪ್ರಶ್ನೆಗಳಿಗೆ ಉತ್ತರಿಸುವ ಎದೆಗಾರಿಕೆ ನಿಮಗಿದೆಯೇ?" ಎಂದು ಪ್ರಶ್ನಿಸಿದೆ.
ರೈತರ ಆಕ್ರೋಶಕ್ಕೆ ಕಾರಣ:
ಭೈರಮಂಗಲ ಭಾಗದಲ್ಲಿ ಕೈಗಾರಿಕಾ ಉದ್ದೇಶ ಅಥವಾ ಇನ್ಯಾವುದೇ ಯೋಜನೆಗಾಗಿ ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ ಎನ್ನಲಾಗಿದ್ದು, ಇದಕ್ಕೆ ಸ್ಥಳೀಯ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. "ತಮ್ಮ ಜೀವನಾಧಾರವಾಗಿರುವ ಭೂಮಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ" ಎಂದು ರೈತರು ಪಟ್ಟು ಹಿಡಿದಿದ್ದು, ಅಧಿಕಾರಿಗಳು ಹಾಗೂ ಸರ್ಕಾರದ ಧೋರಣೆ ವಿರುದ್ಧ ಆಕ್ರೋಶದ ಮಾತುಗಳನ್ನಾಡಿದ್ದಾರೆ.
ರೈತರ ಈ ಹೋರಾಟಕ್ಕೆ ಈಗ ಜೆಡಿಎಸ್ ಸಂಪೂರ್ಣ ಬೆಂಬಲ ಘೋಷಿಸಿದ್ದು, ಭೂಮಿ ಕಳೆದುಕೊಳ್ಳುತ್ತಿರುವ ರೈತರ ಪರವಾಗಿ ನಿಂತು ಸರ್ಕಾರದ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟ ರೂಪಿಸಲು ಸಜ್ಜಾಗಿದೆ.



