Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಹುಲ್ ಗಾಂಧಿ ಅವರೇ ನೀವಾದರೂ ಉತ್ತರಿಸುತ್ತೀರಾ?

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಮಾನ್ಯರಾಹುಲ್ ಗಾಂಧಿ ಅವರೇ, ಕ್ರೆಡಿಟ್‌ಗಾಗಿ ಹಪಾಹಪಿಸುವ ನಿಮ್ಮ ಪಕ್ಷದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರು ಈಗ ನಿಮ್ಮನ್ನು ಭೇಟಿ ಮಾಡಲು ಬರುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಸರ್ಕಾರಿ ಪ್ರಾಯೋಜಿತ ಕಾಲ್ತುಳಿತದ ಕುರಿತು ನಾವು ಅವರಿಗೆ ಪ್ರಶ್ನೆಗಳನ್ನು ಕೇಳಿದ್ದೇವೆ ಆದರೆ ಅವರಲ್ಲಿ ಉತ್ತರವೇ ಇಲ್ಲ. ಅದಕ್ಕೆ ನೀವಾದರೂ ಉತ್ತರಿಸುತ್ತೀರಾ? ಎಂದು ಬಿಜೆಪಿ ಪ್ರಶ್ನಿಸಿದೆ.

  1. ಕರ್ನಾಟಕದಲ್ಲಿ 11 ಯುವಜನರ ಅಮೂಲ್ಯ ಜೀವವನ್ನು ಬಲಿತೆಗೆದುಕೊಂಡ, ನಿಮ್ಮ ಕಾಂಗ್ರೆಸ್ ಸರ್ಕಾರ ತಪ್ಪಿಸಬಹುದಾಗಿದ್ದ ಭೀಕರ ದುರಂತಕ್ಕೆ ಯಾರನ್ನು ಹೊಣೆಗಾರರನ್ನಾಗಿ ಮಾಡುತ್ತೀರಿ?

  2. ವಿಧಾನಸೌಧದಲ್ಲಿ ಇಂತಹ ಕಾರ್ಯಕ್ರಮವನ್ನು ಆಯೋಜಿಸುವ ನಿರ್ಧಾರವನ್ನು ಕಾಂಗ್ರೆಸ್ ಸರ್ಕಾರದಲ್ಲಿ ಯಾರು ತೆಗೆದುಕೊಂಡರು?


  3. ಪೊಲೀಸ್ ಇಲಾಖೆ ಈ ಕಾರ್ಯಕ್ರಮಕ್ಕೆ ಅಧಿಕೃತ ಅನುಮತಿ ನಿರಾಕರಿಸಿದ್ದರೂ ಕೂಡ ಉನ್ನತ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದು ಏಕೆ? ಈ ಅವ್ಯವಸ್ಥೆಗೆ ನಿಜವಾಗಿ ಹೊಣೆಗಾರರಾದವರು ಯಾವ ಕ್ರಮವೂ ಎದುರಿಸದೇ ರಾಜಾರೋಷವಾಗಿ ಓಡಾಡಿಕೊಂಡಿರುವುದೇಕೆ?


  4. ಯಾವುದೇ ಸಮರ್ಪಕ ಸುರಕ್ಷತೆ, ಜನಸಂಚಾರ ನಿಯಂತ್ರಣ ಅಥವಾ ವೈದ್ಯಕೀಯ ವ್ಯವಸ್ಥೆಯ ಸಿದ್ಧತೆ ಇಲ್ಲದಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಲಕ್ಷಾಂತರ ಜನರನ್ನು ಸಾರ್ವಜನಿಕವಾಗಿ ಆಹ್ವಾನಿಸಲು ಮುಂದಾಗಿದ್ದೇಕೆ?


  5. ಕೊನೆಯದಾಗಿ, 11 ಅಮಾಯಕರು ತಮ್ಮ ಪ್ರಾಣ ಕಳೆದುಕೊಂಡ ನಂತರವೂ, ನಿಮ್ಮ ನಾಯಕರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೂ ಸೇರಿ ಹೋಟೆಲಿಗೆ ಹೋಗಿ ಮಸಾಲೆದೋಸೆ, ಬಾದಾಮ್ ಹಲ್ವಾ ತಿನ್ನಲು ಹೇಗೆ ಮನಸ್ಸು ಬಂತು?


  6. ನಾವು ನಿಮ್ಮಿಂದ ಉತ್ತರವನ್ನು ನಿರೀಕ್ಷಿಸಬಹುದೇ ಅಥವಾ ನೀವು ಪ್ರತಿ ಬಾರಿಯಂತೆ ಈ ಬಾರಿ ಕೂಡ ಜವಾಬ್ದಾರಿಯಿಂದ ನುಣುಚಿಕೊಂಡು ಓಡಿಹೋಗುತ್ತೀರಾ? ಹೆದರಬೇಡಿ ಉತ್ತರಿಸಿ ಎಂದು ಬಿಜೆಪಿ ತಾಕೀತು ಮಾಡಿದೆ.


 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ