Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ ಯಾರೆಲ್ಲಾ ಮತದಾನಕ್ಕೆ ಅರ್ಹರು ಎಂಬುದನ್ನು ಎಸ್‌ಐಆರ್‌ನಿರ್ಧರಿಸಲಿದೆ. ಈಗಾಗಲೇ ಶೇ.90 ರಷ್ಟು ಮತದಾರರ ಮ್ಯಾಪಿಂಗ್‌ಕಾರ್ಯ ಪೂರ್ಣಗೊಂಡಿದೆ. 276 ಮಂದಿ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಪರಿಷ್ಕರಣೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆ (ಎನುಮೆರೇಷನ್‌ಫಾರ್ಮ್‌) ವಿತರಣೆ ಹಾಗೂ ಸಂಗ್ರಹಣೆ ಮಾಡಲಿದ್ದಾರೆ ಎಂದು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ
, ಚುನಾವಣಾಧಿಕಾರಿಯಾದ ಟಿ.ಆರ್ ಮಂಜುನಾಥ ತಿಳಿಸಿದರು.

ಎಸ್‌ಐಆರ್‌ಕುರಿತು ಬುಧವಾರ ನಗರದ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಎಸ್ಐಆರ್ ಬಗ್ಗೆ ಜನರಲ್ಲಿ ಯಾವುದೇ ಗೊಂದಲ ಭಯಪಡುವ ಅವಶ್ಯಕತೆ ಇಲ್ಲ. ಮೃತರ ಹೆಸರು ತೆಗೆಯುವುದು ಸೇರಿದಂತೆ ಯಾರೊಬ್ಬರು ಮತದಾನದ ಹಕ್ಕನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳಲಾಗುವುದು. ಸಿಬ್ಬಂದಿಗೆ ಜೂನ್‌20 ರಿಂದ 29 ರವರೆಗೆ ಎಸ್ ಐ ಆರ್ ಗೆ ಸಿದ್ಧತೆ, ಬಿ ಎಲ್ ಒ ಗಳ ತರಬೇತಿ ಹಾಗೂ ಮುದ್ರಣ ಕಾರ್ಯ, ಜೂನ್‌30 ರಿಂದ ಜುಲೈ 29 ರವರೆಗೆ ಬಿಎಲ್‌ಒಗಳಿಂದ ಮನೆ ಮನೆ ಭೇಟಿ, ಜುಲೈ 29 ರೊಳಗೆ ಮತಗಟ್ಟೆಗಳ ತಾರ್ಕಿಕ ಮರು ಹೊಂದಾಣಿಕೆ ಕಾರ್ಯ ನಡೆಯಲಿದೆ‌ಎಂದು ತಿಳಿಸಿದರು.

ಎಸ್‌ಐಆರ್‌ಪ್ರಕ್ರಿಯೆ, ನಮೂನೆಗಳು ಹಾಗೂ ವೇಳಾಪಟ್ಟಿಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಗಳ ಅಧಿಕೃತ ಜಾಲತಾಣಗಳು, ಮುಖ್ಯ ಚುನಾವಣಾಧಿಕಾರಿ ಹಾಗೂ ಕೇಂದ್ರ ಚುನಾವಣಾ ಆಯೋಗದ ಅಧಿಕೃತ ಜಾಲತಾಣಗಳಲ್ಲಿ ಹೆಚ್ಚಿನ ಮಾಹಿತಿ ಪ್ರಕಟಿಸಲಾಗುವುದು. ಮತದಾರರ ಅನುಕೂಲಕ್ಕಾಗಿ ಗ್ರಾಮ ಪಂಚಾಯಿತಿ ಹಾಗೂ ನಗರ ವಾರ್ಡ್‌ಮಟ್ಟದಲ್ಲಿ ಮತದಾರರ ಸಹಾಯ ಕೇಂದ್ರ ಸ್ಥಾಪಿಸಲಾಗುತ್ತದೆ. ಅರ್ಹ ಮತದಾರರು ಕೈ ಬಿಟ್ಟು ಹೋಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು‌ಎಂದು ವಿವರಿಸಿದರು.

ಎನುಮೆರೇಷನ್‌ಫಾರ್ಮ್‌
ಎಸ್‌ಐಆರ್‌ಪ್ರಕ್ರಿಯೆಯಲ್ಲಿ ಗಣತಿ ನಮೂನೆಗಳನ್ನು (ಎನುಮೆರೇಷನ್‌ಫಾರ್ಮ್‌) ಪ್ರತಿ ಮತದಾರರಿಗೂ ದ್ವಿಪತ್ರಿಯಲ್ಲಿ ಬಿಎಲ್‌ಒಗಳು ಮನೆ ಮನೆಗೆ ತಲುಪಿಸುತ್ತಾರೆ. ಬಿಎಲ್‌ಒ ಹಸ್ತಾಕ್ಷರ ಇರುವ ಒಂದು ಪ್ರತಿಯನ್ನು ಮತದಾರರು ತಮ್ಮ ಬಳಿ ಇಟ್ಟುಕೊಂಡು
, ಮತ್ತೊಂದು ಪ್ರತಿಯಲ್ಲಿ ಅಗತ್ಯ ಮಾಹಿತಿ ಭರ್ತಿ ಮಾಡಿ ಬಿಎಲ್‌ಒಗಳಿಗೆ ಹಿಂದಿರುಗಿಸಬೇಕು. ಮತದಾರರ ಪಟ್ಟಿಯಲ್ಲಿರುವಂತೆ ಭಾವಚಿತ್ರ, ಹೆಸರು, ಮತಗಟ್ಟೆ ಸಂಖ್ಯೆ, ವಿಧಾನಸಭಾ ಕ್ಷೇತ್ರದ ಹೆಸರು ಈ ಅರ್ಜಿಯಲ್ಲಿ ಮುದ್ರಣವಾಗಿರುತ್ತದೆ. ಪ್ರತಿ ಮತದಾರರಿಗೂ ನೀಡುವ ಅರ್ಜಿಯಲ್ಲಿ ಕ್ಯೂಆರ್‌ಕೋಡ್‌ವಿಭಿನ್ನವಾಗಿರುತ್ತದೆ. ಬಿಎಲ್‌ಒ ಆ್ಯಪ್‌ಮೂಲಕ ಕ್ಯೂಆರ್‌ಕೋಡ್‌ಸ್ಕ್ಯಾ‌ನ್‌ಮಾಡಿದರೆ ಮತದಾರರ ಮಾಹಿತಿ ಲಭ್ಯವಾಗುತ್ತದೆ. ಒಂದು ವೇಳೆ ಮತದಾರರ ಭಾವಚಿತ್ರ ಹಳೆಯದಾಗಿದ್ದರೆ ಎನುಮೆರೇಷನ್‌ಅರ್ಜಿಯೊಂದಿಗೆ ಹೊಸ ಭಾವಚಿತ್ರ ನೀಡಬಹುದು. ಇಲ್ಲದಿದ್ದರೆ ಬಿಎಲ್‌ಒಗಳೇ ಆ್ಯಪ್‌ಮೂಲಕ ಭಾವಚಿತ್ರ ಪಡೆದುಕೊಳ್ಳುತ್ತಾರೆ. 2002ರ ಮತದಾರರ ಪಟ್ಟಿಯಲ್ಲಿತಮ್ಮ ಹೆಸರು ಇದ್ದರೆ ಅದರ ವಿವರವನ್ನು ನೀಡಬೇಕು. ಇಲ್ಲದಿದ್ದರೆ ತಮ್ಮ ಸಂಬಂಧಿಯ (ತಂದೆ, ತಾತ ಇತ್ಯಾದಿ) ಮಾಹಿತಿ ಒದಗಿಸಬೇಕು ಎಂದರು.

 ಅರ್ಜಿಯಲ್ಲಿ ಮತದಾರರು ಸಹಿ ಅಥವಾ ಎಡಗೈ ಹೆಬ್ಬೆರಳಿನ ಗುರುತು ಹಾಕಬಹುದು. ಒಂದು ವೇಳೆ ಮತದಾರರು ಆ ಸಂದರ್ಭದಲ್ಲಿ ಲಭ್ಯವಿಲ್ಲದಿದ್ದರೆ ಕುಟುಂಬದಲ್ಲಿನ ವಯಸ್ಕ ಸದಸ್ಯರು ಸಹಿ ಮಾಡಿ ಬಿಎಲ್‌ಒಗಳಿಗೆ ಅರ್ಜಿ ಹಸ್ತಾಂತರಿಸಬಹುದು. ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಅಕ್ಟೋಬರ್ 7 ರಂದು ಪ್ರಕಟ ಮಾಡಲಾಗುವುದು ಎಂದು ತಿಳಿಸಿದರು.

ಒಟ್ಟು ಮತದಾರರ ವಿವರಗಳು (2/6/2026ರಂತೆ ಮತದಾರರ ಪಟ್ಟಿಯ ವಿವರ) ಒಟ್ಟು ಮತಗಟ್ಟೆ - 276
ಗಂಡು – 109627, ಹೆಣ್ಣು – 113828, ಇತರೆ -   2, ಒಟ್ಟು - 2,23,457

ಒಟ್ಟು ಮತಗಟ್ಟೆಗಳು & ಬಿ.ಎಲ್.ಒ ವಿವರಗಳು
ಹೋಬಳಿ ಮತಗಟ್ಟೆಗಳು                 ಬಿಎಲ್ಒಗಳು
ಸಾಸಲು -  34                               34
ದೊಡ್ಡಬೆಳವಂಗಲ-46                    46
ಕಸಬಾ -77                                   77
ಮಧುರೆ -37                                  39
ನಗರಸಭೆ -79                                 79
ಒಟ್ಟು 276 ಮತಗಟ್ಟೆಗಳು 276 ಬಿ.ಎಲ್.ಒ.ಗಳು
ಈ ವೇಳೆ ಸಹಾಯಕ ಚುನಾವಣಾಧಿಕಾರಿ
, ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳ, ಜಿಲ್ಲಾ ಬಿಎಲ್ಓಗಳ ತರಬೇತಿದಾರ ಶ್ರೀನಿವಾಸ, ಚುನಾವಣಾ ಶಿರಸ್ತೇದಾರ ಶಿವಮೂರ್ತಿ, ರವಿಕುಮಾರ್ ಮತ್ತಿತ್ತರರು ಇದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮದ್ದೂ ಒಂದು ಯುಗವಿತ್ತು; ಆರು ವರ್ಷದ ನಂತರ ನಾವು ಸ್ವತಃ ಶಾಲೆಗೆ ಹೋಗುತ್ತಿದ್ದೆವು ಬಸ್ಸಿನಲ್ಲಿ ಬಿಡಿಸುವ ಪದ್ಧತಿ ಇರಲಿಲ್ಲ.ಟೆಕ್ಸಾಸ್‌ನಲ್ಲಿ ಭಾರತದ ರಾಷ್ಟ್ರಧ್ವಜಕ್ಕೆ ಅಪಚಾರ: ವಿಶ್ವದಾದ್ಯಂತ ಭಾರತೀಯರ ತೀವ್ರ ಆಕ್ರೋಶಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿ.ಕೆ. ಶಿವಕುಮಾರ್: ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್!ಕಾರ್ಮಿಕರ ಪರ ಹೈಕೋರ್ಟ್ ಮಹತ್ವದ ತೀರ್ಪು: ವಜಾಗೊಂಡಿದ್ದ 84 ಮಂದಿಗೆ ತಲಾ 3 ಲಕ್ಷ ಪರಿಹಾರ ನೀಡಲು ಆದೇಶ!ಆಡಳಿತ ಸುಧಾರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್: ಎರಡು ಹೊಸ ಸಚಿವಾಲಯಗಳ ರಚನೆ, ರೌಡಿ ನಿಗ್ರಹಕ್ಕೆ ವಿಶೇಷ ಸ್ಕ್ವಾಡ್!"ಪಕ್ಷ ಕಟ್ಟುವವರು ನನ್ನೊಂದಿಗೆ ಬನ್ನಿ, ಅಧಿಕಾರ ಬೇಕಾದವರು ಡಿಕೆಶಿ ಜೊತೆ ಹೋಗಿ!": ಬಿ.ಕೆ. ಹರಿಪ್ರಸಾದ್ ಬ್ಯಾಟಿಂಗ್ಸೌರಶಕ್ತಿ ಉತ್ಪಾದನೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿ ವಿಶ್ವದಲ್ಲೇ ೨ನೇ ಸ್ಥಾನಕ್ಕೆ ಜಿಗಿದ ಭಾರತ!ಮತದಾರರ ಪಟ್ಟಿ ಪರಿಷ್ಕರಣೆ, ತಕ್ಷಣದ ಹೆಲ್ಪ್ ಡೆಸ್ಕ್ ಸ್ಥಾಪನೆ; ಸಿಎಂ ಡಿ.ಕೆ.ಶಿ ಕಟ್ಟುನಿಟ್ಟಿನ ಆದೇಶಇಲಾಖೆಗಳಲ್ಲಿ ಬಾಕಿ ಉಳಿದಿರುವ ಕೆಲಸಗಳನ್ನು ಮುಂದಿನ 25 ದಿನಗಳೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು- ಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ಅವರಿಗೆ ಸಿದ್ದಗಂಗಾ ಮಠದ ಸ್ವಾಮೀಜಿ ಆಶೀರ್ವಾದ: ಸಮಾಜಮುಖಿ ಕಾರ್ಯಗಳಿಗೆ ಶ್ಲಾಘನೆ