ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಚೊಚ್ಚಲ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದ್ದು, ಅಧಿವೇಶನದಲ್ಲಿ ಸಂಪೂರ್ಣ ಒಗ್ಗಟ್ಟು ಪ್ರದರ್ಶಿಸಿ ಪ್ರತಿಪಕ್ಷಗಳ ಆರೋಪಗಳನ್ನು ಬಲವಾಗಿ ಎದುರಿಸುವಂತೆ ಶಾಸಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಖಾಸಗಿ ಹೋಟೆಲ್ನಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಅಧಿವೇಶನದ ಕಾರ್ಯತಂತ್ರಗಳ ಕುರಿತು ದೀರ್ಘ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಸಿಎಂ ನೀಡಿದ ಪ್ರಮುಖ ನಿರ್ದೇಶನಗಳು ಹಾಗೂ ಮುಖ್ಯಾಂಶಗಳು: ನಾಗೇಂದ್ರ ಪರ ಒಗ್ಗಟ್ಟು ಹಾಗೂ ಕೌಂಟರ್ ಅಟ್ಯಾಕ್: ಸಚಿವ ಬಿ. ನಾಗೇಂದ್ರ ವಿಚಾರದಲ್ಲಿ ವಿಪಕ್ಷಗಳ ಹೋರಾಟಕ್ಕೆ ಮಣಿಯದೆ ಎಲ್ಲರೂ ಅವರ ಪರವಾಗಿ ಧ್ವನಿ ಎತ್ತಬೇಕು. ಬಿಜೆಪಿ ಸರ್ಕಾರದ ಅವಧಿಯ ಹಗರಣಗಳನ್ನು ಕೆದಕಿ ಕೌಂಟರ್ ನೀಡುವ ಮೂಲಕ ಪ್ರತಿಪಕ್ಷಗಳ ಕೈಮೇಲಾಗದಂತೆ ನೋಡಿಕೊಳ್ಳಬೇಕು ಎಂದು ಶಾಸಕರಿಗೆ ಸೂಚಿಸಿದರು.
ಸಭೆಯಲ್ಲಿ ಸಿಎಂ ನೀಡಿದ ಪ್ರಮುಖ ನಿರ್ದೇಶನಗಳು ಹಾಗೂ ಮುಖ್ಯಾಂಶಗಳು: ನಾಗೇಂದ್ರ ಪರ ಒಗ್ಗಟ್ಟು ಹಾಗೂ ಕೌಂಟರ್ ಅಟ್ಯಾಕ್: ಸಚಿವ ಬಿ. ನಾಗೇಂದ್ರ ವಿಚಾರದಲ್ಲಿ ವಿಪಕ್ಷಗಳ ಹೋರಾಟಕ್ಕೆ ಮಣಿಯದೆ ಎಲ್ಲರೂ ಅವರ ಪರವಾಗಿ ಧ್ವನಿ ಎತ್ತಬೇಕು. ಬಿಜೆಪಿ ಸರ್ಕಾರದ ಅವಧಿಯ ಹಗರಣಗಳನ್ನು ಕೆದಕಿ ಕೌಂಟರ್ ನೀಡುವ ಮೂಲಕ ಪ್ರತಿಪಕ್ಷಗಳ ಕೈಮೇಲಾಗದಂತೆ ನೋಡಿಕೊಳ್ಳಬೇಕು ಎಂದು ಶಾಸಕರಿಗೆ ಸೂಚಿಸಿದರು.
ಶಾಸಕರ ಭೇಟಿ ಹಾಗೂ ಅನುದಾನ: ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡುವ ಭರವಸೆ ನೀಡಿದ ಸಿಎಂ, ಶಾಸಕರ ಕುಂದುಕೊರತೆ ಆಲಿಸಲು ಪ್ರತಿ ತಿಂಗಳು ಎರಡು ದಿನಗಳನ್ನು ಮೀಸಲಿಡುವುದಾಗಿ ತಿಳಿಸಿದರು. ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ, ಬರ ಪರಿಸ್ಥಿತಿ, ಕುಡಿಯುವ ನೀರು ಹಾಗೂ ಬೆಳೆ ವಿಮೆ ಕಡೆಗೆ ಹೆಚ್ಚಿನ ಗಮನ ಹರಿಸಲು ಸಲಹೆ ನೀಡಿದರು.
ಅಸಮಾಧಾನಿತರಲ್ಲಿ ಕ್ಷಮೆಯಾಚನೆ: ಸಂಪುಟ ವಿಸ್ತರಣೆ ವೇಳೆ ಎಲ್ಲ ಅರ್ಹ ಹಿರಿಯ ಶಾಸಕರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಾಗದ್ದಕ್ಕೆ ಸಿಎಂ ವಿನಮ್ರವಾಗಿ ಕ್ಷಮೆ ಕೋರಿದರು. "ಹಿಂದೆ ನನಗೂ ಮಂತ್ರಿ ಪದವಿ ಸಿಗದಿದ್ದಾಗ ನಿಷ್ಠೆಯಿಂದ ಕೆಲಸ ಮಾಡಿದ್ದೆ, ಈಗ ಹೈಕಮಾಂಡ್ ಸಿಎಂ ಮಾಡಿದೆ. ಸಚಿವ ಸ್ಥಾನ ಸಿಗದಿರುವ ಬೇಸರ ನನಗೂ ಇದೆ" ಎಂದರು.
ವಿಪಕ್ಷಗಳ ನಡೆಗೆ ತಿರುಗೇಟು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ 5ನೇ ಅಭ್ಯರ್ಥಿಯ ಗೆಲುವನ್ನು ಅರಗಿಸಿಕೊಳ್ಳಲಾಗದೆ ಬಿಜೆಪಿ-ಜೆಡಿಎಸ್ ಸದನದಲ್ಲಿ ಗಲಾಟೆ ಮಾಡುತ್ತಿವೆ. ಕುಮಾರಸ್ವಾಮಿ ಹಾಗೂ ಶೋಭಾ ಕರಂದ್ಲಾಜೆ ಮೇಲೆಯೂ ಪ್ರಕರಣಗಳಿದ್ದು, ಬಿಡದಿ ಟೌನ್ಶಿಪ್ ಯೋಜನೆಯನ್ನು ಅವರೇ ಆರಂಭಿಸಿ ಈಗ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಎಂ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಹಾಗೂ ಪ್ರಮುಖ ನಾಯಕರ ಗೈರುಹಾಜರಿ:
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿದ್ದರೂ ಸಭೆಗೆ ಗೈರಾಗಿದ್ದು ಹಲವು ಚರ್ಚೆಗಳಿಗೆ ಕಾರಣವಾಗಿದೆ. ಇವರ ಜೊತೆಗೆ ಸಚಿವ ಸ್ಥಾನ ವಂಚಿತರಾದ ಹಿರಿಯ ಶಾಸಕರಾದ ಹೆಚ್.ಸಿ. ಮಹದೇವಪ್ಪ, ಶಿವಾನಂದ ಪಾಟೀಲ್, ಎಂ. ಕೃಷ್ಣಪ್ಪ, ಪ್ರಿಯಕೃಷ್ಣ, ಎಂ.ಸಿ. ಸುಧಾಕರ್, ಎಸ್.ಎನ್. ನಾರಾಯಣಸ್ವಾಮಿ ಹಾಗೂ ಕೊತ್ತನೂರು ಮಂಜುನಾಥ್ ಸಹ ಸಭೆಯಿಂದ ದೂರ ಉಳಿದಿದ್ದರು.



