Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಣ್ಣಪುಟ್ಟ ವಿಚಾರಗಳಿಗೆ ಜಗಳವಾಡಿ ವಿಚ್ಛೇದನ ಪಡೆಯುವುದು ಬೇಡ, ಮುಂದಿನ ಭವಿಷ್ಯ ನೋಡಿ-ನ್ಯಾ.ಜಯಂತ್ ಕುಮಾರ್

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಗಂಡ-ಹೆಂಡತಿ ಪರಸ್ಪರ ಪ್ರೀತಿ, ವಿಶ್ವಾಸ, ನಂಬಿಕೆಯಿಂದ ಜೀವನ ನಡೆಸಬೇಕು,ಚಿಕ್ಕ ಚಿಕ್ಕ ವಿಚಾರಗಳಿಗೆ ಮನಸ್ಸುಗಳನ್ನು ಕೆಡಿಸಿಕೊಂಡು ವಿಚ್ಛೇದನಕ್ಕೆ ಅರ್ಜಿ ಹಾಕಬಾರದು,ಇಂದಿನ ದಿನಗಳಲ್ಲಿ ಚಿಕ್ಕ ವಿಚಾರಗಳನ್ನೇ ದೊಡ್ಡದಾಗಿ ಮಾಡಿಕೊಂಡು ಕೌಟುಂಬಿಕ ನ್ಯಾಯಾಲಯಗಳಿಗೆ ವಿಚ್ಛೇದನ,ಜೀವನಾಂಶ ಇತ್ಯಾದಿಗಳಿಗೆ ಗಂಡ-ಹೆಂಡತಿ ಬರುತ್ತಿರುವುದು ದುರಂತವೇ ಸರಿ, ಹಿರಿಯರ ಮಾರ್ಗದರ್ಶನದಲ್ಲಿ ಜೀವನ ನಡೆಸಬೇಕು,ತಂದೆ-ತಾಯಿ ಕಷ್ಟ ಪಟ್ಟು ದುಡಿದು ನಿಮ್ಮನ್ನು ಓದಿಸಿ, ಬುದ್ಧಿ ಕಲಿಸಿ,ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ ನಿಮಗೆ ಮದುವೆ ಮಾಡಿರುವುದು ನೀವು ವಿಚ್ಛೇದನ ಪಡೆಯುವುದಕ್ಕಲ್ಲ,ಮಕ್ಕಳ ಮುಖ ನೋಡಿಕೊಂಡು,ತಂದೆ-ತಾಯಿಗಳ ಮುಖ ನೋಡಿಕೊಂಡು ಪರಸ್ಪರರು ನಂಬಿಕೆಯಿಂದ ಜೀವನ ನಡೆಸಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಜಯಂತ್ ಕುಮಾರ್ ರವರು ದಂಪತಿಗಳಿಗೆ ಬುದ್ಧಿ ಹೇಳಿದರು.

        ಅವರು ಇಂದು ನಡೆದ ಲೋಕ್ ಅದಾಲತ್ ನಲ್ಲಿ ಜಿಲ್ಲಾ ಕೌಟುಂಬಿಕ ನ್ಯಾಯಾಲಯಗಳಿಗೆ ವಿಚ್ಛೇದನ ಮತ್ತು ಜೀವನಾಂಶಕ್ಕೆ ಬಂದಿದ್ದ ೧೧ ದಂಪತಿಗಳನ್ನು ಪುನಃ ಒಂದು ಮಾಡಿ ಬುದ್ಧಿ ಹೇಳಿ ಸಿಹಿ ನೀಡಿ ಮನೆಗೆ ಕಳಿಸಿದರು.

        ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನ್ಯಾಯಾಧೀಶರು ಸಿರಾ-೨, ಮಧುಗಿರಿ-೧, ಪಾವಗಡ-೨, ತುರುವೇಕೆರೆ-೧, ಗುಬ್ಬಿ-೧, ತಿಪಟೂರು-೨, ಚಿಕ್ಕನಾಯಕನಹಳ್ಳಿ-೧, ತುಮಕೂರಲ್ಲಿ ೧೦ ಜೋಡಿಗಳು ಪುನರ್ ಮಿಲನವಾಗಿದ್ದಾರೆ ಜಿಲ್ಲೆಯ ೨ ಕೌಟುಂಬಿಕ ನ್ಯಾಯಾಲಯದಲ್ಲಿ ೧೦ ಜೋಡಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ರವರ ಮುಂದೆ ೧ ಜೋಡಿ ಒಟ್ಟು-೨೧ ದಂಪತಿಗಳು ಪುನರ್ ಮಿಲನವಾಗಿ ಸಂತೋಷವಾಗಿ ಒಂಟಿಯಾಗಿ ಬಂದು ನ್ಯಾಯಾಲಯದಿಂದ ಜೋಡಿಯಾಗಿ ಹೋದ ಸಂತೋಷ ಇಂದು ನಮ್ಮೆಲ್ಲರಿಗೆ ಉಂಟಾಗಿದೆ ಎಂದರು.

ಯಾವುದೇ ಗಂಡ-ಹೆಂಡತಿ ಇರಬಹುದು ಮಕ್ಕಳ ಹಿತದೃಷ್ಟಿಯಿಂದ, ತಂದೆ-ತಾಯಿಗಳ ಹಿತದೃಷ್ಟಿಯಿಂದ ಸಮಾಜದ ಹಿತದೃಷ್ಟಿಯಿಂದ ಒಂದಾಗಿರಬೇಕು, ವಯಸ್ಸು ಪುನಃ ಬರುವುದಿಲ್ಲ, ಸಮಯ ಕಳೆದುಹೋಗುತ್ತದೆ ಇಂದಿನ ಚಿಕ್ಕ ತಪ್ಪಿಗೆ ಮುಂದೆ ಭಾರೀ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಹೇಳಿದರು.

        ಈ ಸಂದರ್ಭದಲ್ಲಿ ೭ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಟಿ.ಪಿ.ರಾಮಲಿಂಗೇಗೌಡ, ಪ್ರಧಾನ ಕೌಟುಂಬಿಕ ನ್ಯಾಯಾಧೀಶರಾದ ಮುನಿರಾಜ, ೧ನೇ ಅಧಿಕ ಪ್ರಧಾನ ಕೌಟುಂಬಿಕ ನ್ಯಾಯಾಧೀಶರಾದ ಜಯಪ್ರಕಾಶ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸ ಮತ್ತು ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ