LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕಾರಿಗಳಿಗೆ ಪೊರಕೆಯಿಂದ ಹೊಡೆಯಬೇಡಿ, ಬೇಕಿದ್ದರೆ ನನಗೆ ಹೊಡೆಯಿರಿ: ಸಿಎಂ ಶಿವಕುಮಾರ್ ಭಾವುಕ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ಯಾರೂ ಕೂಡ ಅಧಿಕಾರಿಗಳ ಮೇಲೆ ಕೈ ಮಾಡಬೇಡಿ. ತಾಯಂದಿರು ಅಧಿಕಾರಿಗಳಿಗೆ ಪೊರಕೆಯಿಂದ ಹೊಡೆಯುವ ಅವಶ್ಯಕತೆ ಇಲ್ಲ, ಬೇಕಾದರೆ ನನಗೆ ಹೊಡೆಯಲಿ. ನಾನು ಹೊಡಿಸಿಕೊಳ್ಳುವುದಕ್ಕೆ ಸಿದ್ಧನಿದ್ದೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಭಾವುಕರಾಗಿ ಹೇಳಿದ್ದಾರೆ.

ಬಿಡದಿ ಟೌನ್‌ಶಿಪ್ ನಿರ್ಮಾಣದ ಹಿನ್ನೆಲೆಯಲ್ಲಿ ಜಮೀನು ಸರ್ವೆ ಮಾಡಲು ಹೋಗಿದ್ದ ಅಧಿಕಾರಿಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಷಯವಾಗಿ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು.

ಮನಸ್ಸಿಗೆ ನೋವು ತಂದ ಘಟನೆ:
"ಬಿಡದಿಯಲ್ಲಿ ಅಧಿಕಾರಿಗಳ ಮೇಲೆ ನಡೆದ ಘಟನೆಯಿಂದ ನನ್ನ ಮನಸ್ಸಿಗೆ ತೀವ್ರ ನೋವಾಗಿದೆ. ಅಲ್ಲಿನ ಜನರಿಗೆ ನಾನು ಕೈ ಮುಗಿದು ಕೇಳಿಕೊಳ್ಳುತ್ತೇನೆ, ಅಧಿಕಾರಿಗಳು ಕೇವಲ ಸರ್ಕಾರದ ಕರ್ತವ್ಯದ ಮೇರೆಗೆ ಅಲ್ಲಿಗೆ ಹೋಗಿರುತ್ತಾರೆ. ಅವರ ಮೇಲೆ ಕೋಪ ತೋರಿಸುವ ಅಗತ್ಯವಿಲ್ಲ. ನಿಮಗೆ ಅಸಮಾಧಾನವಿದ್ದರೆ ನನ್ನ ಮೇಲೆ ಆಕ್ರೋಶ ಹೊರಹಾಕಿ, ಬೇಕಿದ್ದರೆ ನನಗೆ ಹೊಡೆಯಿರಿ" ಎಂದು ಮುಖ್ಯಮಂತ್ರಿಗಳು ಹೇಳಿದರು.

ಬಲವಂತದ ಭೂಸ್ವಾಧೀನ ಇಲ್ಲ:
ಇದೇ ವೇಳೆ ರೈತರ ಆತಂಕ ನಿವಾರಿಸಲು ಯತ್ನಿಸಿದ ಸಿಎಂ
, "ರೈತರಿಂದ ಬಲವಂತವಾಗಿ ಜಮೀನು ಕಿತ್ತುಕೊಳ್ಳುವ ಯಾವುದೇ ಉದ್ದೇಶ ನಮ್ಮ ಸರ್ಕಾರಕ್ಕಿಲ್ಲ. ಬಲವಂತದ ಭೂಸ್ವಾಧೀನಕ್ಕೆ ನಾವು ಕೈ ಹಾಕುವುದಿಲ್ಲ. ಕೇವಲ ಸರ್ವೆ ಕಾರ್ಯ ನಡೆಸಲು ಹೋದ ಅಧಿಕಾರಿಗಳ ಮೇಲೆ ಈ ರೀತಿ ಹಲ್ಲೆ ನಡೆಸಿರುವುದು ಸರಿಯಲ್ಲ" ಎಂದು ಸ್ಪಷ್ಟಪಡಿಸಿದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು