ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದಾವಣಗೆರೆಯ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಇಂದು ತಮ್ಮ ನಿವಾಸದಲ್ಲಿ ಪಕ್ಷದ ಹಿರಿಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿ, ಅವರ ಶುಭಾಶಯಗಳನ್ನು ಸ್ವೀಕರಿಸಿದರು.
ಚುನಾವಣಾ ಕಣದಲ್ಲಿ ಸಕ್ರಿಯವಾಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಶುಭ ಕೋರಲು ಜಿಲ್ಲೆಯ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸಿದ್ದರು. ಪಕ್ಷದ ಮಹಿಳಾ ಘಟಕದ ಸದಸ್ಯರು ಹಾಗೂ ಹಿರಿಯ ಮುಖಂಡರು ಈ ಸಂದರ್ಭದಲ್ಲಿ ಹೂಗುಚ್ಛ ನೀಡಿ ಗೌರವಿಸಿದರು.
ಸದಾ ಚಿರರುಣಿ:
ಅಭಿಮಾನಿಗಳ ಪ್ರೀತಿ ಮತ್ತು ಕಾರ್ಯಕರ್ತರ ಉತ್ಸಾಹವನ್ನು ಕಂಡು ಹರ್ಷ ವ್ಯಕ್ತಪಡಿಸಿದ ಡಾ. ಪ್ರಭಾ ಮಲ್ಲಿಕಾರ್ಜುನ್, "ನಮ್ಮ ನಿವಾಸಕ್ಕೆ ಭೇಟಿ ನೀಡಿದ ಹಿರಿಯರು, ಪಕ್ಷದ ಮುಖಂಡರು, ಕಾರ್ಯಕರ್ತರು, ಮಹಿಳಾ ಘಟಕದ ಸದಸ್ಯರು ಹಾಗೂ ಅಭಿಮಾನಿಗಳ ಹಾರೈಕೆ ನನ್ನಲ್ಲಿ ಮತ್ತಷ್ಟು ಉತ್ಸಾಹ ತುಂಬಿದೆ. ನಿಮ್ಮೆಲ್ಲರ ಈ ಅಪಾರ ಅಭಿಮಾನಕ್ಕೆ ನಾನು ಸದಾ ಚಿರರುಣಿಯಾಗಿದ್ದೇನೆ," ಎಂದು ಕೃತಜ್ಞತೆ ಸಲ್ಲಿಸಿದರು.
ಕ್ಷೇತ್ರದ ಅಭಿವೃದ್ಧಿ ಹಾಗೂ ಚುನಾವಣಾ ಕಾರ್ಯತಂತ್ರಗಳ ಕುರಿತು ಇದೇ ಸಂದರ್ಭದಲ್ಲಿ ಮುಖಂಡರೊಂದಿಗೆ ಅವರು ಚರ್ಚಿಸಿದರು.


