Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನವಜಾತ ಶಿಶು ಆರೈಕೆ : ಚಿತ್ರದುರ್ಗ ಜಿಲ್ಲೆಯ ಮಾದರಿ ಅಧ್ಯಯನ- ಡಾ.ಅಶೂ ಗ್ರೋವರ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನವಜಾತ ಶಿಶುಗಳ ಜನನದ ನಂತರದ ಕಠಿಣ ಸಂದರ್ಭಗಳಿಂದ ಹಿಡಿದು, ಆರಂಭದ ಸಾವಿರ ದಿನಗಳು ಮಗುವಿನ ಭೌತಿಕ ಹಾಗೂ ಬೌದ್ಧಿಕ ಬೆಳವಣಿಗೆಯನ್ನು ವೃದ್ಧಿಸಲು ಉತ್ತಮ ಸಮಯವಾಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಸ್ಪರ್ಶ್-ದಿ ಫಸ್ಟ್-1000 ಡೇಸ್ ಆಫ್ ಲೈಫ್ಎನ್ನುವ ಸಂಶೋಧನಾ ಯೋಜನೆಗೆ ಐದು ತಿಂಗಳ ಹಿಂದೆಯೇ ಚಾಲನೆ ನೀಡಲಾಗಿದ್ದು, ಜಿಲ್ಲೆಯ ಮಾದರಿ ಅಧ್ಯಯನ ನಡೆಸಲಾಗುತ್ತಿದೆ ಎಂದು ನವದೆಹಲಿಯ ಐಸಿಎಂಆರ್ ಹೆರಿಗೆ ವಿಭಾಗದ ಮುಖ್ಯಸ್ಥೆ ಡಾ.ಅಶೂ ಗ್ರೋವರ್ ಹೇಳಿದರು.


ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆರೋಗ್ಯ ಮತ್ತು ಕುಟುಂಬ ಇಲಾಖೆ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐ.ಸಿ.ಎಂ.ಆರ್), ಕರ್ನಾಟಕ ಆರೋಗ್ಯ ಸಂವರ್ಧನ ಟ್ರಸ್ಟ್ (ಕೆ.ಹೆಚ್.ಪಿ.ಟಿ), ಹಾಗೂ ಸೆಂಟ್ ಜಾನ್ಸ್ ಸಂಶೋಧನಾ ಸಂಸ್ಥೆ (ಎಸ್.ಜೆ.ಆರ್.ಐ) ವತಿಯಿಂದ ಆಯೋಜಿಸಲಾದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.


ಐಸಿಎಂಆರ್ ಸಂಶೋಧನಾ ಕೇಂದ್ರದಿಂದ ಸ್ಪರ್ಶ್-ದಿ ಫಸ್ಟ್-1000 ಡೇಸ್ ಆಫ್ ಲೈಫ್ಯೋಜನೆ ಅನುಷ್ಠಾನದ ಬಗ್ಗೆ ಕೂಲಂಕೂಷವಾಗಿ ಅಧ್ಯಯನ ನಡೆಸಲಾಗುತ್ತಿದೆ. ಮಗುವಿನ ಜನನದಿಂದ ಸಾವಿರ ದಿನಗಳವರೆಗೆ ಉತ್ತಮ ಆರೋಗ್ಯ ವೃದ್ಧಿಪಡಿಸಲು ಹಲವು ರೀತಿಯ ಕಾರ್ಯತಂತ್ರಗಳನ್ನು ರೂಪಿಸಲಾಗಿದೆ. ದೇಶದಾದ್ಯಂತ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಯೋಜನೆಯ ಅನುಷ್ಠಾನಕ್ಕೆ ತರಲು ರಾಜ್ಯ ಮಟ್ಟದ ಹಾಗೂ ಸ್ಥಳೀಯ ಆರೋಗ್ಯ ಸಂಸ್ಥೆಗಳ ಜೊತೆ ಕೈ ಜೋಡಿಸಲಾಗಿದೆ.

ಆಯುಷ್ಮಾನ್ ಭಾರತ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳು ಉತ್ತಮ ಸೌಲಭ್ಯಗಳನ್ನು ಜನರಿಗೆ ನೀಡುತ್ತಿವೆ. ನವದೆಹಲಿ ಅಥವಾ ಬೆಂಗಳೂರಿನಲ್ಲಿ ಕುಳಿತು ಯೋಜನೆಯನ್ನು ರೂಪಿಸಿ, ಸುಮ್ಮನೆ ಕುಳಿತರೆ ಯಶಸ್ವಿ ಅನುಷ್ಠಾನ ಮಾಡಲು ಸಾಧ್ಯವಿಲ್ಲ.

ಜಿಲ್ಲಾ ಆಸ್ಪತ್ರೆಗಳು ವಾಸ್ತವಿಕವಾಗಿ ಎದುರಿಸುತ್ತಿರುವ ತೊಂದರೆ ಹಾಗೂ ಸವಾಲುಗಳ ಕುರಿತು ಮಾಹಿತಿ ನೀಡಬೇಕು. ಇದರಿಂದ ಅಗತ್ಯ ಯಂತ್ರೋಪಕರಣ, ಔಷಧೋಪಚಾರ ಹಾಗೂ ಸವಲತ್ತುಗಳನ್ನು ಉನ್ನತೀಕರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಯಗಾರ ಆಯೋಜಿಸಲಾಗಿದೆ. ಸಹಜ ಹೆರಿಗೆ, ಅವಧಿಗೆ ಮುನ್ನ ಹೆರಿಗೆ, ಕಡಿಮೆ ತೂಕ ಮಕ್ಕಳ ಜನನವಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕಾರ್ಯವಿಧಾನಗಳ ಬಗ್ಗೆ ಮಾರ್ಗಸೂಚಿಗಳನ್ನು ರಚಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಮಾದರಿ ಅಧ್ಯಯನಲ್ಲಿ ಕಂಡುಬರುವ ಅಂಶಗಳನ್ನು ಪರಿಗಣಿಸಿ ಹೆಚ್ಚು ಪರಿಣಾಮ ಬೀರುವ ಕಾರ್ಯತಂತ್ರಗಳನ್ನು ಐಸಿಎಂಆರ್ ರೂಪಿಸಲಿದೆ. ಇದು ದೇಶದ ಬೇರೆ ಜಿಲ್ಲೆ ಹಾಗೂ ಭಾಗಗಳ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡಬಹುದು ಎಂದು ಡಾ.ಅಶೂ ಗ್ರೋವರ್ ಹೇಳಿದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್ ಮಾತನಾಡಿ, ‘ಸ್ಪರ್ಶ್-ದಿ ಫಸ್ಟ್-1000 ಡೇಸ್ ಆಫ್ ಲೈಫ್ಯೋಜನೆಯನ್ನು ಜಿಲ್ಲೆಯಲ್ಲಿ ಜಾರಿ ಮಾಡಿ ಐದು ತಿಂಗಳಾಗಿದೆ. ಈ ಅವಧಿಯಲ್ಲಾದ ಉತ್ತಮ ಕಾರ್ಯಗಳು ಹಾಗೂ ಎದುರಿಸಿದ ಅಡಚಣೆಗಳು ಬಗ್ಗೆ ಅವಲೋಕನ ನಡೆಸಲು ಕಾರ್ಯಗಾರ ನೆರವಾಗಲಿದೆ. ಇದರಿಂದ ಮುಂದಿನ ದಿನಗಳಿಗೆ ಹೇಗೆ ಕಾರ್ಯತಂತ್ರಗಳನ್ನು ರೂಪಿಸಬಹುದು ಎಂಬುದು ತಿಳಿದು ಬರಲಿದೆ ಎಂದರು.


ಯೋಜನೆಯಡಿ ಕಡಿಮೆ ತೂಕದೊಂದಿಗೆ ಜನಿಸಿದ ಮಗುವಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಿ ಆರೋಗ್ಯ ಸುಧಾರಿಸುವಂತೆ ಮಾಡಲಾಗಿದೆ. ಈ ಕುರಿತು ಮಗುವಿನ ತಾಯಿ ಪ್ರಶಾಂತನಗರದ ಚಂದನ ತನ್ನ ಅನಿಸಿಕೆಗಳನ್ನು ತಿಳಿಸಿದರು.


ಕಾರ್ಯಾಗಾರದಲ್ಲಿ ನವಜಾತ ಹಾಗೂ 2 ವರ್ಷದ ಒಳಗಿನ ಮಕ್ಕಳ ಚಿಕಿತ್ಸಾ ವಿಧಾನ ಕುರಿತು ವೈದ್ಯರಿಗೆ ತರಬೇತಿ ನೀಡಲಾಯಿತು. ಐಸಿಎಂಆರ್‍ನ ಡಾ.ಆಮ್ಲಿನ್ ಶುಕ್ಲಾ, ಕೆ.ಹೆಚ್.ಟಿ.ಪಿ ಯೋಜನಾ ಮುಖ್ಯಸ್ಥೆ ಡಾ.ಪ್ರಾರ್ಥನಾ, ಹಿರಿಯ ವ್ಯವಸ್ಥಾಪಕಿ ಡಾ.ಆಯಿಷಾ, ಜಿಲ್ಲಾ ಆರ್‍ಸಿಹೆಚ್‍ಓ ಡಾ.ಅಭಿನವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವಿಜಯ್‍ಕುಮಾರ್, ಸೆಂಟ್ ಜಾನ್ಸ್ ಸಂಶೋಧನಾ ಸಂಸ್ಥೆಯ ಡಾ.ಪ್ರೇಮ್ ಮೌನಿ, ಡಾ.ಸುಮನ್ ರಾವ್, ಜಿಲ್ಲಾ ಸಂಯೋಜಕಿ ಬಿ.ವೀಣಾ, ತಾಲ್ಲೂಕು ಸಂಯೋಜಕಿ ಮೇಘಾ ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ