Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಲಿ ಫೆಸ್ಟ್ ಉತ್ಸವಕ್ಕೆ ಚಾಲನೆ ನೀಡಿದ ಡಾ. ಬಸವಕುಮಾರ ಸ್ವಾಮೀಜಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬೌದ್ಧಿಕ ಹಾಗೂ ಮಾನಸಿಕ ಬೆಳವಣಿಗೆಗೆ ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳು ಪ್ರೇರಕವಾಗಿರುತ್ತವೆ. ಶಾಲಾ-ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದವರು ಕಲೆ
, ಕ್ರೀಡೆ , ಸಾಂಸ್ಕೃತಿಕ ಸೇರಿದಂತೆ ಮತ್ತಿತರ ಚಟುವಟಿಕೆಗಳಲ್ಲಿ  ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವುದು ಅತಿ ಮುಖ್ಯ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್ ಜೆ ಎಂ ವಿದ್ಯಾಪೀಠ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಬಸವಕುಮಾರ ಸ್ವಾಮೀಜಿ ಕರೆ ನೀಡಿದರು.

ನಗರದ ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ಪಾಲಿಟೆಕ್ನಿಕ್ ವತಿಯಿಂದ ಪಾಲಿಫೆಸ್ಟ್ ಉತ್ಸವ- 2024ರ ಅಂಗವಾಗಿ ಇಲ್ಲಿನ ಶ್ರೀ ಜಗದ್ಗುರು ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ತಾಂತ್ರಿಕ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಗಾಗಿ ಸೋಮವಾರ ಏರ್ಪಡಿಸಿರುವ ಎರಡು ದಿನಗಳ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಉತ್ಸವಕ್ಕೆ ಸ್ವತಃ ಫೀಲ್ಡ್ ಗೆ ಇಳಿದು ಬ್ಯಾಟ್ ಹಿಡಿದು, ಬಂದ ಬಾಲನ್ನು ಎತ್ತಿ ಕ್ರೀಡಾಂಗಣದ ಮುಂಚೂಣಿಗೆ ತಳ್ಳುವ ಮುಖಾಂತರ ಉದ್ಘಾಟಿಸಿ ಕ್ರೀಡಾಸಕ್ತರನ್ನು ಸ್ವಾಮೀಜಿ ಹುರಿದುಂಬಿಸಿದರು.

ಹಾಗೆಯೇ ಬೋಲಿಂಗ್ ಕೂಡ ಮಾಡಿ ಹುರುಪು ನೀಡಿದ ಅವರು ಹಲವರಲ್ಲಿ ಹಲವಾರು ವಿಧದ ಅಭಿರುಚಿ ಹವ್ಯಾಸಗಳಿರುತ್ತವೆ. ಅವುಗಳನ್ನು ವಿದ್ಯಾರ್ಥಿಗಳಲ್ಲಿ ಹೊರತೆಗೆಯುವ ಪ್ರಯತ್ನ ಶಿಕ್ಷಣ ಸಂಸ್ಥೆಗಳಿಂದ ಆದಾಗ ಅಲ್ಲಿ ಅನೇಕ ಪ್ರತಿಭೆಗಳು ಹೊರ ಹೊಮ್ಮುಲು ಸಾಧ್ಯವಾಗುತ್ತದೆ.

ಅದಕ್ಕೆ ಪೂರಕ ವಾತಾವರಣ ಅಗತ್ಯ. ಓದಿನ ಜೊತೆಗೆ  ಜೊತೆಗೆ ಇತರ ಎಲ್ಲ ರೀತಿಯ ಪಠ್ಯೇತರ ಚಟುವಟಿಕೆಗಳು ಘನ ವ್ಯಕ್ತಿತ್ವವನ್ನು ರೂಪಿಸಲಿಕ್ಕೆ ಸಹಕಾರಿಯಾಗುತ್ತವೆ ಎಂದು ಕಿವಿಮಾತು ಹೇಳಿದರು.

ಎಸ್ ಜೆಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯ ಭರತ್, ಫಾರ್ಮಸಿಯ ಪ್ರಾಚಾರ್ಯ ನಾಗರಾಜ್, ದೈಹಿಕ ನಿರ್ದೇಶಕ ಕುಮಾರಸ್ವಾಮಿ, ಪಾಲಿಟೆಕ್ನಿಕ್ ನ ವಿವಿಧ ವಿಭಾಗಗಳ ಮುಖ್ಯಸ್ಥರುಗಳಾದ ಪಿ.ಬಿ ರಾಜೇಶ್, ನಳಿನಾಕ್ಷಿ, ಎಸ್ ಮೋಹನ್ ಕುಮಾರ್, ಪಿ.ಎ.ರಘು ಹಾಗೂ ಪಾಲಿಟೆಕ್ನಿಕ್ ಬೋಧಕರು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಾಚಾರ್ಯ ಎಸ್ .ವಿ .ರವಿಶಂಕರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ