Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪದವಿ ಜೊತೆ ಕೌಶಲ್ಯ ಶಿಕ್ಷಣ ಅಗತ್ಯ- ಡಾ.ಬಸವಕುಮಾರ ಸ್ವಾಮೀಜಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಪದವಿ ಜೊತೆ ಕೌಶಲ್ಯ ಶಿಕ್ಷಣವಿದ್ದಾಗ ಮಾತ್ರ ಉತ್ತಮ ಬದುಕು ಕಟ್ಟಿಕೊಳ್ಳಬಹುದು ಎಂದು ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಾತ್ಮಕ ಕಮಿಟಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಹೇಳಿದರು.


ವಾಣಿಗೋತ್ರ ಕಾಂಪ್ಲೆಕ್ಸ್‌ನಲ್ಲಿ ಭಾನುವಾರ ಬ್ರೈಟ್ ಮೈಂಡ್ಸ್ ಅಕಾಡೆಮಿ ಇನ್ಸ್‌ಟಿಟ್ಯುಟ್ ಆಫ್ ಟೆಕ್ನಾಲಜಿ ಅಂಡ್ ಎಜುಕೇಷನ್ ಕೇಂದ್ರ ಉದ್ಗಾಟಿಸಿ ಮಾತನಾಡಿದರು.

ಕೌಶಲ್ಯವಿಲ್ಲದಿದ್ದರೆ ಅಂಕ ಗಳಿಸಿ ಪ್ರಯೋಜನವಿಲ್ಲ. ಪದವಿಯ ಜೊತೆ ಇಂತಹ ಕೋರ್ಸ್‌ಗಳನ್ನು ಮಾಡಿ ಸರ್ಟಿಫಿಕೇಟ್‌ಗಳನ್ನಿಟ್ಟುಕೊಂಡರೆ ಬೆಂಗಳೂರಿನ ಮೆಟ್ರೋದಂತ ಕಡೆ ಕೆಲಸಗಳಿಗೆ ಅವಕಾಶವಿರುತ್ತದೆ. ಅಧ್ಯಯನಕ್ಕಿಂತ ಕೌಶಲ್ಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕಿದೆ ಎಂದು ತಿಳಿಸಿದರು.

ಯಾವುದೇ ಒಂದು ಸಂಸ್ಥೆ ಆರಂಭಿಸಲಿ ಲಾಭಕ್ಕಿಂತ ಉಪಯುಕ್ತ ಕೆಲಸಕ್ಕೆ ಪ್ರಾಶಸ್ತ್ಯ ಕೊಡಬೇಕು. ಇಂಜಿನಿಯರಿಂಗ್ ಇನ್ನಿತರೆ ಉನ್ನತ ಶಿಕ್ಷಣ ಪಡೆದವರೆಲ್ಲಾ ಬೆಂಗಳೂರು, ಮಂಗಳೂರು ಸೇರಿದಂತೆ ದೊಡ್ಡ ದೊಡ್ಡ ನಗರಗಳಿಗೆ ಉದ್ಯೋಗ ಅರಸಿ ಹೋಗುತ್ತಾರೆ. ಹಾಗಾಗಿ ಮಧ್ಯಕರ್ನಾಟಕದ ಬಯಲುಸೀಮೆ ಚಿತ್ರದುರ್ಗದಲ್ಲಿ ಇಂತಹ ಕೌಶಲ್ಯಯುಕ್ತ ತರಬೇತಿಯ ಅವಶ್ಯಕತೆಯಿದೆ ಎಂದರು.

ಅನೇಕ ಪದವೀಧರರಿಗೆ ಕೌಶಲ್ಯವಿರುವುದಿಲ್ಲ. ಇದ್ದರೂ ಕೆಲವರಿಗೆ ಹೇಗೆ ಬಳಸಿಕೊಳ್ಳಬೇಕೆಂಬ ಜ್ಞಾನವಿರುವುದಿಲ್ಲ. ವೃತ್ತಿಗಿಂತ ಕರ್ತವ್ಯಕ್ಕೆ ಪ್ರಾಧಾನ್ಯತೆ ಕೊಡಬೇಕು. ಇಲ್ಲಿ ತರಬೇತಿ ಪಡೆಯುವ ಮಕ್ಕಳ ಭವಿಷ್ಯ ಬ್ರೈಟಾಗಿರಲಿ ಎಂದು ಹಾರೈಸಿದರು.

ಮರ್ಚೆಂಟ್ ಸೌಹಾರ್ಧ ಸಹಕಾರ ಬ್ಯಾಂಕ್ ಅಧ್ಯಕ್ಷ ಎಸ್.ಆರ್.ಲಕ್ಷ್ಮಿಕಾಂತರೆಡ್ಡಿ, ಬ್ರಾಹ್ಮಣ ಸಂಘದ ಜಿಲ್ಲಾಧ್ಯಕ್ಷ ಪಿ.ಎಸ್.ಮಂಜುನಾಥ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ನಗರಸಭೆ ಸದಸ್ಯ ಸೈಯದ್ ನಸ್ರುಲ್ಲಾ, ಹಿರಿಯ ನ್ಯಾಯವಾದಿ ಹಾಗೂ ಮಾನವ ಹಕ್ಕುಗಳ ಆಯೋಗದ ಸದಸ್ಯ ನೂರುಲ್ ಅಮೀದ್ ಇವರುಗಳು ವೇದಿಕೆಯಲ್ಲಿದ್ದರು.

ಬ್ರೈಟ್ ಮೈಂಡ್ಸ್ ಅಕಾಡೆಮಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಎಜುಕೇಷನ್ ಕೇಂದ್ರ ಸಂಸ್ಥಾಪಕರುಗಳಾದ ರಾಘವೇಂದ್ರ ಎನ್. ಜಾಕೀರ್ ಉಸ್ಮಾನಿ, ಶಂಕರ್, ಅಮೂಲ್ಯ ಎಸ್. ಇವರುಗಳು ಈ ಸಂದರ್ಭದಲ್ಲಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ