Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮಂಗಳವಾರ ನಗರದಲ್ಲಿ ಸ್ತಬ್ದಚಿತ್ರಗಳು ಹಾಗೂ ಕಲಾತಂಡಗಳೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆ ಮಾಡಲಾಯಿತು.


ನಗರದ ಐತಿಹಾಸಿಕ ಕೋಟೆ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪುಷ್ಪ ನಮನ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ಆನೆಬಾಗಿಲು, ಮಹಾತ್ಮ ಗಾಂಧಿ, ಕಿತ್ತೂರು ರಾಣಿ ಚನ್ನಮ್ಮ, ಮಹಾವೀರ, ಅಂಬೇಡ್ಕರ್, ಮದರಕರಿ ನಾಯಕ ವೃತ್ತಗಳ ಮಾರ್ಗವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಭವನ ತಲುಪಿತು.

ಮೆರವಣಿಗೆಯಲ್ಲಿ ನಾಸಿಕ್ ಡೋಲ್, ತಾಷರಾಮ್ ಡೋಲ್ ಜಾನಪದ ಕಲಾತಂಡಗಳು ಭಾಗವಹಿಸಿದ್ದವು. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚನಾ ಸಭೆಯ ಅಧ್ಯಕ್ಷ ಡಾ.ಬಾಬು ರಾಜೇಂದ್ರ ಪ್ರಸಾದ್ ಅವರಿಗೆ ಸಂವಿಧಾನ ಪ್ರತಿ ಹಸ್ತಾಂತರಿಸುವ ಸ್ತಬ್ದ ಗಮನ ಸೆಳೆಯಿತು. ಇದರೊಂದಿಗೆ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳ ಅಡಿ ದೊರೆಯುವ ಸರ್ಕಾರದ ಸೌಲತ್ತುಗಳ ಮಾಹಿತಿಯನ್ನು ಪ್ರಚುರಪಡಿಸಲಾಯಿತು.

ಮೆರವಣಿಗೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿ.ಪಂ. ಸಿಇಓ ಡಾ.ಆಕಾಶ್, ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ, ಉಪ ವಿಭಾಗಾಧಿಕಾರಿ ಕಾಂತರಾಜು ಸೇರಿದಂತೆ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಮುಖಂಡರು ಭಾಗವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಒಂದು ತಿಂಗಳಲ್ಲೇ ಮಧ್ಯಂತರ ಪರಿಹಾರ ವಿತರಣೆಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಶಾಖಾಧಿಕಾರಿ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನಸಂಸದರ ಕಚೇರಿ ಎದುರು ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ ಆರೋಗ್ಯ ರಕ್ಷಣೆಗೆ ಜೀವನ ಶೈಲಿ ಬದಲಾಗಬೇಕು- ಮಾಜಿ ಸಚಿವ ಆಂಜನೇಯ ವಿದ್ಯಾರ್ಥಿವೇತನ ಬಿಡುಗಡೆಗೆ ಸಿಎಂಗೆ ಮನವಿಕುಂಚಿಟಿಗ ಕುಲ ದೇವತೆಗಳ ವಿಶಿಷ್ಟ ಆಚರಣೆ: ಏನಿದು ಶ್ರೀಕಣಿವೆ ಮಾರಮ್ಮನ 'ಸೆಳೆ' ವೈಭವಸಡಗರದ ಹಿರಿಯೂರು ಮಾರಿಕಾಂಬಾ ಜಾತ್ರೆ: ಏಪ್ರಿಲ್ 24ರಂದು ದೇವಿಯ ಬ್ರಹ್ಮರಥೋತ್ಸವಏ.19ಕ್ಕೆ ಸಾಸಲು ಚಿನ್ನಮ್ಮ ಉತ್ಸವ : ಬಂಡಿ ಮೂಲಕ ಮೆರವಣಿಗೆಚಿತ್ರದುರ್ಗ ಮರ್ಚೆಂಟ್ಸ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ