Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುರುಶ್ರೀ ಪ್ರಶಸ್ತಿಗೆ ಭಾಜನರಾದ ಡಾ.ಮಮತ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿವೇಕ ಚೇತನ ಬಾರಿಟಬಲ್ ಟ್ರಸ್ಟ್ ಹಾಗೂ ಶ್ರೀ ರಾಘವೇಂದ್ರ ಪ್ರಕಾಶನ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಶಿಕ್ಷಣ ತಜ್ಞೆ
, ಸಂಪನ್ಮೂಲ ವ್ಯಕ್ತಿ, ಕವಯತ್ರಿ ಮತ್ತು ಲೇಖಕಿ ಡಾ.ಮಮತ ಹೆಚ್.ಎ. ಅವರಿಗೆ ಗುರುಶ್ರೀ ರಾಜ್ಯ ಪ್ರಶಸ್ತಿನೀಡಿ ಗೌರವಿಸಲಾಯಿತು. ಈ ಮೂಲಕ ಡಾ.ಮಮತ ಸಾಧನೆಗೆ ಮತ್ತೊಂದು ಗರಿ ಸೇರ್ಪಡೆಯಾಗಿದೆ.


ಡಾ. ಮಮತ ಅವರು ಎಂ.ಎ., ಎಂ.ಎಡ್ ಪದವೀಧರರಾಗಿದ್ದು, ಸ್ಟೇಟ್, ಐಸಿಎಸ್ಇ, ಸಿಬಿಎಸ್‌ಇ ಹಾಗೂ ಐಬಿ ಪಠ್ಯಕ್ರಮಗಳಲ್ಲಿ ಪರಿಣತಿ ಪಡೆದಿದ್ದಾರೆ. ಕರ್ನಾಟಕದಲ್ಲೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಶಾಲೆಗಳಿಗೆ ಪಠ್ಯಕ್ರಮವನ್ನು ರಚಿಸಿ, ಅದಕ್ಕೆ ಸೂಕ್ತ ಪಠ್ಯಪುಸ್ತಕಗಳನ್ನು ತಯಾರಿಸಿದ ಸಾಧನೆ ಇವರದಾಗಿದೆ. ಪ್ರಸ್ತುತ ಅವರು One World International School ನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದು, ೧೭ ವರ್ಷಗಳ ಬೋಧನಾ ಅನುಭವ ಹೊಂದಿದ್ದಾರೆ.

ಸಿಬಿಎಸ್ಇ ಬೋರ್ಡ್ ಇವರನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಯ್ಕೆ ಮಾಡಿದ್ದು, ಇತರ ಶಾಲೆಗಳಲ್ಲಿಯೂ ಮಾತೃಭಾಷೆ ಕನ್ನಡ, ಧ್ಯಾನ, ಮೈಂಡ್ ಪವರ್ ಕುರಿತಾದ ತರಬೇತಿ ಹಾಗೂ ಉಪನ್ಯಾಸಗಳನ್ನು ನೀಡುತ್ತಿದ್ದಾರೆ. ಅನೇಕ ಶಿಕ್ಷಣ ಸಂಬಂಧಿ ಪುಸ್ತಕಗಳನ್ನು ರಚಿಸಿ ಪ್ರಕಟಿಸಿರುವ ಅವರು, ಶಾಲಾ ಹಾಗೂ ಸಾಹಿತ್ಯ ಕಾರ್ಯಕ್ರಮಗಳಲ್ಲಿ ಅತಿಥಿ, ಸಂಪನ್ಮೂಲ ವ್ಯಕ್ತಿ, ಆಪ್ತಸಮಾಲೋಚಕ, ಲೇಖಕಿ, ಕಥೆಗಾರ್ತಿ, ಕವಯತ್ರಿ, ಗಜಲ್‌ಗಾರ್ತಿ ಮುಂತಾದ ವಿಭಿನ್ನ ಹಣೆಪಟ್ಟಿಗಳನ್ನು ಹೊತ್ತು ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ.


ಇಂಗ್ಲಿಷ್ ಪುಸ್ತಕಗಳನ್ನು ಕನ್ನಡಕ್ಕೆ ಅನುವಾದಿಸುವುದರೊಂದಿಗೆ, ಡಾಕ್ಯುಮೆಂಟರಿ ಹಾಗೂ ಪ್ರೂಫ್ ಕರಕ್ಷನ್‌ಗಳಲ್ಲಿ ಸಹ ಸೇವೆ ಸಲ್ಲಿಸಿದ್ದಾರೆ. ಕಳೆದ ವರ್ಷ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸಿದ ಕೀರ್ತಿ ಇವರದಾಗಿದೆ. ಹಲವಾರು ಸಾಹಿತ್ಯ ಸಮಾರಂಭಗಳಲ್ಲಿ ತೀರ್ಪುಗಾರರಾಗಿ ಸೇವೆ ಸಲ್ಲಿಸಿರುವ ಇವರ ಬರಹಗಳು ದಿನಪತ್ರಿಕೆ, ವಾರಪತ್ರಿಕೆ, ಮಾಸಪತ್ರಿಕೆಗಳಲ್ಲಿ ನಿಯಮಿತವಾಗಿ ಪ್ರಕಟಗೊಂಡಿವೆ.


ಸಾಮಾಜಿಕ ಸೇವೆಯ ಕ್ಷೇತ್ರದಲ್ಲಿಯೂ ಅವರು ಮಾದರಿಯಾಗಿದ್ದು, ಮಹಿಳೆಯರಿಗೆ ಬ್ಯೂಟೀಷಿಯನ್, ಹೊಲಿಗೆ, ಫ್ಯಾಷನ್ ಡಿಸೈನಿಂಗ್, ಕರಕುಶಲತೆ, ಮೆಹಂದಿ, ಕಸೂತಿ ಮುಂತಾದ ವೃತ್ತಿಪರ ತರಗತಿಗಳನ್ನು ನೀಡಿ ಸ್ವಾವಲಂಬಿಗಳಾಗಲು ನೆರವಾಗಿದ್ದಾರೆ.


ಬುದ್ಧಿಮಾಂದ್ಯ ಮಕ್ಕಳಿಗೆ ಅವರ ಸಾಮರ್ಥ್ಯಕ್ಕೆ ತಕ್ಕ ಆರ್ಟ್ & ಕ್ರಾಫ್ಟ್ ತರಬೇತಿ ನೀಡಿ, ಸುಮಾರು ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಮಹಿಳಾ ಸಬಲೀಕರಣ, ಪ್ರಕೃತಿ ಸಂರಕ್ಷಣೆ, ತೃತೀಯ ಲಿಂಗಿಗಳ ಹಕ್ಕುಗಳು, ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷಾಭಿಮಾನ ಬೆಳೆಸುವ ಶಿಕ್ಷಕರ ಪಾತ್ರ, ದೇಶಪ್ರೇಮ ಹಾಗೂ ಭಕ್ತಿ ಮೂಡಿಸುವ ಕುರಿತು ಸಂಶೋಧನಾ ಲೇಖನಗಳನ್ನು ಮಾಡಿದ್ದಾರೆ.

ಅಲ್ಲದೆ, ಬೆಂಗಳೂರು ಮೆಟ್ರೋದಲ್ಲಿ ಶಿಸ್ತಿನ ನಡೆನುಡಿಗಳ ಕುರಿತು ಜಾಹೀರಾತುಗಳ ಮೂಲಕ ಜನಜಾಗೃತಿ ಮೂಡಿಸುವ ಮೂಲಕ ಆಡು(ಮೇಕೆ) ಮುಟ್ಟದ(ತಿನ್ನದ) ಸೊಪ್ಪಿಲ್ಲ, ಡಾ.ಮಮತಾ ಮಾಡದ ಕಾರ್ಯವಿಲ್ಲ ಎನ್ನುವ ಮಟ್ಟಿಗೆ ಬೆಳೆದಿದ್ದಾರೆ.

ಇವರ ಸಾಹಿತ್ಯ ಕೃತಿಗಳು, ಅಧ್ಯಯನಗಳು ಹಾಗೂ ಸಾಮಾಜಿಕ ಸೇವೆಯನ್ನು ಮೆಚ್ಚಿಕೊಂಡು ಅನೇಕ ಸಂಘಸಂಸ್ಥೆಗಳು ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ, ಪುರಸ್ಕಾರ ಹಾಗೂ ಗೌರವಗಳನ್ನು ನೀಡಿ ಸನ್ಮಾನಿಸಿವೆ. ಸಾಹಿತ್ಯ ಕ್ಷೇತ್ರದಲ್ಲಿ ಇವರ ಹೆಸರು Karnataka Book of Records ಮತ್ತು World Book of Records‍ನಲ್ಲಿ ಸಹ ದಾಖಲಾಗಿದೆ.

ಈ ಎಲ್ಲ ಸಾಧನೆಗಳನ್ನು ಪರಿಗಣಿಸಿ, ರಾಘವೇಂದ್ರ ಪ್ರಕಾಶನ ಹಾಗೂ ವಿವೇಕ ಚೇತನ ಟ್ರಸ್ಟ್ ಅಧ್ಯಕ್ಷರು ರಾಜ್ಯ ಮಟ್ಟದ ಗುರುಶ್ರೀ ಪ್ರಶಸ್ತಿ ಪ್ರದಾನ ಮಾಡಿ, ಡಾ. ಮಮತ ಅವರ ಸಾಧನೆಗಳನ್ನು ಶ್ಲಾಘಿಸಿದರು.

ಅವರು ಶಿಕ್ಷಣ ಕ್ಷೇತ್ರದ ಜೊತೆಗೆ ಕಾವ್ಯ, ಲೇಖನ ಹಾಗೂ ಸಾಂಸ್ಕೃತಿಕ ಸೇವೆಯಲ್ಲಿ ನೀಡುತ್ತಿರುವ ಕೊಡುಗೆಗಳನ್ನು ಉನ್ನತವಾಗಿ ಪ್ರಸ್ತಾಪಿಸಿ, ಭವಿಷ್ಯದಲ್ಲಿ ಇನ್ನಷ್ಟು ದೊಡ್ಡ ಮಟ್ಟದ ಸಾಧನೆಗಳನ್ನು ಮಾಡುವಂತೆ ಹಾರೈಸಿದ್ದಾರೆ.
ಕಿರು ಮಾಹಿತಿ ರೂಪದ ಲೇಖನ-ರಾಘವೇಂದ್ರ, (ಶಿಕ್ಷಕರ ಸಂಪನ್ಮೂಲ ವ್ಯಕ್ತಿ).


 

 



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ