Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಲಿ ಟ್ರಾಮಾ ಸೆಂಟರ್ ಮಂಜೂರು-ಸಂಸದ ಡಾ.ಮಂಜುನಾಥ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನಲ್ಲಿ ನಿಮ್ಹಾನ್ಸ್ ಸ್ನಾತಕೋತ್ತರ ಪದವಿ ಮತ್ತು 300 ಹಾಸಿಗೆ ಸಾಮರ್ಥ್ಯದ “Poly trauma centre” ಸ್ಥಾಪನೆಯ ಪ್ರಸ್ತಾವನೆಗೆ ಕೇಂದ್ರ ಸರ್ಕಾರದ ಹಣಕಾಸು ಇಲಾಖೆ ಅನುಮೋದನೆ ನೀಡಿರುವುದು ವೈಯುಕ್ತಿಕವಾಗಿ ಅತ್ಯಂತ ಸಂತಸ ತರಿಸಿದೆ. ಈ ಮೂಲಕ ಅನೇಕ ವರ್ಷಗಳ ಕನ್ನಡಿಗರ ಬೇಡಿಕೆ ಈಡೇರಿದಂತಾಗಿದೆ ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.


ಕನ್ನಡಿಗರ ಬಹುದಿನಗಳ ಕನಸು ಈಡೇರಿಸಿದ ಕೇಂದ್ರ ಸರ್ಕಾರಕ್ಕೆ ಸಂಸದರು ಧನ್ಯವಾದಗಳನ್ನು ಇದೇ ಸಂದರ್ಭದಲ್ಲಿ ಸಲ್ಲಿಸಿದ್ದಾರೆ.

ಈ ಬಗ್ಗೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಕೇಂದ್ರ ಹಣಕಾಸು ಸಚಿವರಿಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರದ ಮೂಲಕ ಮತ್ತು ವೈಯುಕ್ತಿಕವಾಗಿ ಭೇಟಿಯಾಗಿ ಮನವಿ ಸಲ್ಲಿಸಿದ್ದರಿಂದಾಗಿ ಕೇಂದ್ರ ಸರ್ಕಾರ ಇಂದು ಯೋಜನೆ ಮಂಜೂರು ಮಾಡಿದೆ ಎಂದು ಸಂಸದರು ತಿಳಿಸಿದರು.

ಪ್ರಸ್ತುತ ನಮ್ಮ ದೇಶದಲ್ಲಿ ಶೇ 15 % ರಷ್ಟು ಸಾವುಗಳು ರಸ್ತೆ ಅಪಘಾತದಿಂದ ಸಂಭವಿಸುತ್ತಿವೆ ಮತ್ತು ಶೇ 30 ರಷ್ಟು ರಸ್ತೆ ಅಪಘಾತಗಳಲ್ಲಿ ಬಹುಗಾಯಗಳಿಗೆ( multiple injuries) ಒಳಗಾಗುತ್ತಾರೆ.

ಈ ಹಿನ್ನಲೆ ಗಾಯಗೊಂಡವರಿಗೆ ಆದಷ್ಟು ತ್ವರಿತವಾಗಿ (golden hour) ಒಂದೇ ಸೂರಿನಡಿ ಚಿಕಿತ್ಸೆ ಒದಗಿಸುವ ಅವಶ್ಯಕತೆ ಇರುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕದ ಜನತೆಗೆ ವಿಶೇಷವಾಗಿ ಬೆಂಗಳೂರಿಗರಿಗೆ “Poly trauma centre” ಸ್ಥಾಪನೆ ಅತ್ಯಂತ ಸಹಕಾರಿಯಾಗಲಿದೆ ಎಂದು ಡಾ.ಮಂಜುನಾಥ್ ಹೇಳಿದರು.


ಜಯಪ್ರಕಾಶ್ ನಾರಾಯಣ್ “Poly trauma centre” ನಂತರದಲ್ಲಿ ದೇಶದಲ್ಲಿಯೇ ಎರಡನೇ “Poly trauma centre” ಇದಾಗಲಿದೆ. ಇದರ ಜೊತೆಗೆ ಸ್ನಾತಕೋತ್ತರ ಪದವಿ ಘಟಕವನ್ನು ಸ್ಥಾಪಿಸುವುದರಿಂದ ಆಘಾತ ಚಿಕಿತ್ಸಾ ವಿಭಾಗದಲ್ಲಿ ತಜ್ಞರಿಗೆ ನುರಿತ ತರಬೇತಿ ನೀಡುವ ಮೂಲಕ ಅವರ ಸೇವೆಯನ್ನು ದೇಶಾದ್ಯಂತ ಬಳಸಿಕೊಳ್ಳಬಹುದಾಗಿದೆ.

ನಮ್ಮೆಲ್ಲರ ಮನವಿಗೆ ಸ್ಪಂದಿಸಿ ಬೆಂಗಳೂರಿನಲ್ಲಿ ನಿಮ್ಹಾನ್ಸ್ ಸ್ನಾತಕೋತ್ತರ ಪದವಿ ಮತ್ತು 300 ಹಾಸಿಗೆ ಸಾಮರ್ಥ್ಯದ “Poly centre” ಸ್ಥಾಪನೆಯ ಪ್ರಸ್ತಾವನೆಗೆ ಅನುಮೋದನೆ ನೀಡಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಜೆ.ಪಿ ನಡ್ಡಾ ಅವರಿಗೆ ಹಾಗೂ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಕರ್ನಾಟಕ ಜನತೆಯ ಪರವಾಗಿ ಸಂಸದ ಡಾ.ಮಂಜುನಾಥ್ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ