Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಂಬಿಬಿಎಸ್ ಮೊದಲ ವೃತ್ತಿಪರ ವರ್ಷದ ಪರೀಕ್ಷೆಗೆ ಮತ್ತೊಂದು ಅವಕಾಶ ನೀಡಿ-ಡಾ.ಪ್ರಭಾ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಂ.ಬಿ.ಬಿ.ಎಸ್ ಮೊದಲ ವೃತ್ತಿಪರ ವರ್ಷದ ಪರೀಕ್ಷೆಗೆ ಮತ್ತೊಂದು ಪ್ರಯತ್ನ, ಮರುಮೌಲ್ಯಮಾಪನಕ್ಕೆ ಅವಕಾಶ ಒದಗಿಸಬೇಕೆಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರಾದ ಜಗತ್ ಪ್ರಕಾಶ್ ನಡ್ಡಾ ಅವರಿಗೆ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ದಾವಣಗೆರೆ ಸಂಸದೆ ಡಾ,ಪ್ರಭಾ ಮಲ್ಲಿಕಾರ್ಜುನ್ ಮನವಿ ಸಲ್ಲಿಸಿ ಒತ್ತಾಯಿಸಿದರು.

ಪ್ರಸ್ತುತ ನಿಯಮದ ಪ್ರಕಾರ, ಎಂ.ಬಿ.ಬಿ.ಎಸ್ ಮೊದಲ ವರ್ಷದ ಪರೀಕ್ಷೆಯಲ್ಲಿ ಉತ್ತೀರ್ಣಗೊಳ್ಳಲು ವಿದ್ಯಾರ್ಥಿಗಳಿಗೆ ಗರಿಷ್ಠ ನಾಲ್ಕು ಪ್ರಯತ್ನಗಳು ಮಾತ್ರ ಸಿಗುತ್ತವೆ. ನಾಲ್ಕು ಪ್ರಯತ್ನಗಳಲ್ಲಿಯೂ ಉತ್ತೀರ್ಣರಾಗದಿದ್ದರೆ, ಅವರು ವೈದ್ಯಕೀಯ ವಿದ್ಯಾಭ್ಯಾಸವನ್ನು ಮುಂದುವರಿಸಲು ಅವಕಾಶವಿಲ್ಲ.

 ಈ ನಿಯಮದ ಕಾರಣದಿಂದ ಕರ್ನಾಟಕದಲ್ಲಿ 275 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಲಿದೆ.

 ವಿಶೇಷವಾಗಿ ಕೋವಿಡ್–19 ಕಾಲದಲ್ಲಿ ಉಂಟಾದ ಶೈಕ್ಷಣಿಕ ವ್ಯತ್ಯಯಗಳಿಂದಾಗಿ ವಿದ್ಯಾರ್ಥಿಗಳು ಸರಿಯಾಗಿ ಓದಲು, ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ. ಆದ್ದರಿಂದ ನಾಲ್ಕು ಪ್ರಯತ್ನಗಳ ನಂತರ ಅವರನ್ನು ಅನರ್ಹಗೊಳಿಸುವುದು ಅನ್ಯಾಯಕರ ಹಾಗೂ ಅಮಾನವೀಯವಾಗಿದೆ ಎಂದು ಪ್ರಭಾ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ನಿಯಮವನ್ನು ಮರುಪರಿಶೀಲಿಸಬೇಕೆಂದು ಅನೇಕ ವಿದ್ಯಾರ್ಥಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ವಿಚಾರದಲ್ಲಿ ಕರ್ನಾಟಕದ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾಲಯದ ಪ್ರೊಚಾನ್ಸೆಲರ್ ಕೂಡ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ಪತ್ರ ಬರೆದಿದ್ದಾರೆ ಎಂದು ಅವರು ಸಚಿವರಲ್ಲಿ ಗಮನ ಸೆಳೆದರು.
ಈ ಸಮಸ್ಯೆಗೆ ಪರಿಹಾರ ಕೋರಿ ಅನೇಕ ವಿದ್ಯಾರ್ಥಿಗಳು ಈಗಾಗಲೇ  ನ್ಯಾಯಾಲಯಗಳನ್ನು ಸಂಪರ್ಕಿಸಿ ಹೆಚ್ಚುವರಿ ಪ್ರಯತ್ನಗಳಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದರ ಜೊತೆಗೆ
, ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾಲಯದ ಪ್ರೊಚಾನ್ಸೆಲರ್ ಕೂಡ ಈ ವಿಷಯಕ್ಕೆ ಸಂಬಂಧಿಸಿ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಕರ್ನಾಟಕ ಹೈಕೋರ್ಟ್  ಎನ್‌ಎಂಸಿ ಮಾರ್ಗಸೂಚಿಗಳ ಪ್ರಕಾರ ಸಂಪೂರ್ಣ ವಿಚಾರಣೆ ನಡೆಸಿದ ನಂತರ ಮರುಮೌಲ್ಯಮಾಪನ ಮಾಡಲು ಆದೇಶ ನೀಡಿದೆ. ಆದಾಗ್ಯೂ, ವಿಶ್ವವಿದ್ಯಾಲಯವು ಮರುಮೌಲ್ಯಮಾಪನವನ್ನು ನಿರಾಕರಿಸುತ್ತಿದೆ. ಆದ್ದರಿಂದ ಈ ಸಮಸ್ಯೆಯನ್ನು ಬಗೆಹರಿಸಿ ವಿದ್ಯಾರ್ಥಿಗಳಿಗೆ ನೆರವಾಗಬೇಕೆಂದು ಕೇಂದ್ರ ಸಚಿವರಿಗೆ ಸಂಸದೆ ಡಾ.ಪ್ರಭಾ ಅವರು ಮನವಿ ಸಲ್ಲಿಸಿ ಒತ್ತಾಯಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ