Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ರಾಜ್ ವೃತ್ತ ಎಂದು ನಾಮಫಲಕ ಅಳವಡಿಸಲು ಆಗ್ರಹ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಡಿ.ಕ್ರಾಸ್ ವೃತ್ತಕ್ಕೆ ಪದ್ಮಭೂಷಣ ಡಾ.ರಾಜ್‌ಕುಮಾರ್ ವೃತ್ತ ಎಂದು ನಗರ ಸಭೆಯಿಂದ
20-05-2006 ನೇ ಸಾಲಿನಲ್ಲಿ ಸರ್ವ ಸದಸ್ಯರ ಸಭೆಯಲ್ಲಿ ತೀರ್ಮಾನವಾಗಿ ಜಿಲ್ಲಾಧಿಕಾರಿಗಳ ಅನುಮತಿ ಸಹ ಆಗಿದ್ದು ಶ್ರೀ ಪದ್ಮಭೂಷಣ ಡಾ.ರಾಜ್ ಕುಮಾರ್ ವೃತ್ತ ಎಂದು ನಾಮ ಫಲಕ ಸಹ ನಗರ ಸಭೆಯಿಂದ ಹಾಕಲಾಗಿತ್ತು.

 ನಂತರ ಮುತ್ಸಂದ್ರ. ವಾರ್ಡಿನ ನಗರಸಭಾ ಸದಸ್ಯ ಚಂದ್ರಪ್ಪ ನವರು 2009-10ರಲ್ಲಿ ನಗರಸಭೆಯಿಂದ ನೂತನವಾಗಿ ಗ್ರಿಲ್ಸ್ ಹಾಕಿಸಿ ವೃತ್ತ ಮಾಡಿಸಿ  ರಾಘವೇಂದ್ರ ರಾಜಕುಮಾರ್ ಮುಖ್ಯ ಅತಿಥಿಯಾಗಿ ಹಾಗೂ ಅಖಿಲ ಕರ್ನಾಟಕ ಡಾ.ರಾಜಕುಮಾರ್ ಸಂಘದ ಅಧ್ಯಕ್ಷ ಸಾ.ರಾ ಗೋವಿಂದ್ ರವರ ಅಧ್ಯಕ್ಷತೆಯಲ್ಲಿ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಆಗಿನ ಅಧ್ಯಕ್ಷ ಹ.ರಾಮಕೃಷ್ಣರವರ ಸಾರಥ್ಯದಲ್ಲಿ ಶಿಲಾ ಫಲಕವನ್ನು ಅಳವಡಿಸಲಾಗಿತ್ತು.

ಆದರೆ ಮೂರು ವರ್ಷಗಳ ಹಿಂದೆ ರಸ್ತೆ ಅಗಲೀಕರಣಕ್ಕಾಗಿ ವೃತ್ತ ಹಾಗೂ ಶಿಲಾ ಫಲಕವನ್ನು ತೆಗೆದು ಹಾಕಲಾಗಿದ್ದು ರಸ್ತೆ ಅಗಲೀಕರಣದ ನಂತರ ವೃತ್ತವನ್ನು ಮಾತ್ರ ನಿರ್ಮಾಣ ಮಾಡಿ ಪದ್ಮಭೂಷಣ ಡಾ.ರಾಜಕುಮಾರ್ ಶಿಲಾ ಫಲಕವನ್ನು ಹಾಕದೆ ಇರುವುದರಿಂದ ಮತ್ತೆ ಡಿ.ಕ್ರಾಸ್ ವೃತ್ತದಲ್ಲಿ ನಾಮಫಲಕ ಹಾಗೂ ಶಿಲಾ ಫಲಕ ಅಳವಡಿಸಲು ಆಗ್ರಹಿಸಿ ದೊಡ್ಡಬಳ್ಳಾಪುರ ಡಾ.ರಾಜಕುಮಾರ್ ಅಭಿಮಾನಿ ಸಂಘದಿಂದ  ನಗರಸಭೆಯ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ  ಎಸ್ ಸು ನರಸಿಂಹಮೂರ್ತಿ, ಉಪಾಧ್ಯಕ್ಷ ಬಿ.ವಿಠಲ್ ರಾವ್, ಕಾರ್ಯದರ್ಶಿ ಎಂ ವೆಂಕಟೇಶ್, ಖಜಾಂಚಿ ಡಿ.ಎನ್. ತಿಮ್ಮರಾಜ್, ಉಪಾಧ್ಯಕ್ಷ ಆರ್.ಎಂ ಮಹದೇವ್, ಪರಮೇಶ್ ಎಂ, ಶಿವಾಜಿ ರಾವ್, ವಿಠಲ್ ರಾವ್, ಎಂ ಚಂದ್ರಶೇಖರ್, ಸೋಮು, ಆನಂದ್ ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ