Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನಸು ನನಸಾಗಲು ಶ್ರಮ ಅಗತ್ಯ- ಜಿ.ಪಂ ಸಿಇಒ ಡಾ.ಎಸ್.ಆಕಾಶ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇಂದಿನ ಮಕ್ಕಳು ಕಾಣುವ ಕನಸು ನನಸಾಗಲು ಶ್ರಮಪಡುವುದು ಅಗತ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಹೇಳಿದರು.


ನಗರದ ಕವಾಡಿಗರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಜರುಗಿದ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಮಹಾಸಭೆಯನ್ನು ಜವಾಹರಲಾಲ್ ನೆಹರೂ ಭಾವಚಿತ್ರಕ್ಕೆ ಪುಷ್ಪವನ್ನು ಸಮರ್ಪಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.


ಪೋಷಕರು ತಮ್ಮ ಮಗುವಿನ ಬಾಲ್ಯದಲ್ಲಿ ಉತ್ತೇಜಿಸುವ ಕಾರ್ಯಗಳು ಮಗುವಿನ ಮನಸ್ಸಿನ ಮೇಲೆ ಪ್ರಭಾವಬೀರಿ, ಮುಂದಿನ ಸಾಧನೆಗೆ ದಾರಿ ದೀಪವಾಗುತ್ತವೆ.  ಪೋಷಕರು ಮಗುವಿನ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಸೂಕ್ತವಾದ ದಾರಿಗಳನ್ನು ಕಂಡುಕೊಳ್ಳಬೇಕು. ಮಗುವನ್ನು ಶಾಲೆಗೆ ದಾಖಲು ಮಾಡಿದ ನಂತರ ಪ್ರತಿ ತಿಂಗಳೂ ಜರುಗುವ ಮಾಸಿಕ ಸಭೆಯಲ್ಲಿ ಬೋಧನೆ ಹಾಗೂ ಕಲಿಕೆಯ ಕುರಿತು ಚರ್ಚಿಸಿ, ಸೂಕ್ತ ಮಾಹಿತಿಗಳನ್ನು ನೀಡಿದಲ್ಲಿ ಶಾಲೆಯಲ್ಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಉತ್ತಮಪಡಿಸಲು ಸೂಕ್ತ ವೇದಿಕೆಯಾಗುವುದು ಎಂದು ತಿಳಿಸಿದರು.


      ಸರ್ಕಾರ ಹಾಗೂ ಇಲಾಖೆಯಿಂದ ಉಚಿತ ಸಮವಸ್ತ್ರ, ಉಚಿತ ಪಠ್ಯಪುಸ್ತಕ, ಉಚಿತ ಮಧ್ಯಾಹ್ನ ಬಿಸಿಯೂಟ ಯೋಜನೆ, ಉಚಿತ ವಿದ್ಯಾರ್ಥಿವೇತನ, ಪೂರಕ ಪೌಷ್ಟಿಕ ಆಹಾರದಂಥ ಕಾರ್ಯಕ್ರಮಗಳ ಹಮ್ಮಿಕೊಂಡು ಮಕ್ಕಳ ದೈಹಿಕ ಹಾಗೂ ಆರೋಗ್ಯ ಬೆಳವಣಿಗೆಗೆ ಸಹಾಯ ಮಾಡುತ್ತಿದೆ.

ಇವಲ್ಲದೆ ಭೌತಿಕ ಸೌಲಭ್ಯ ಉತ್ತಮಪಡಿಸಿಕೊಳ್ಳಬೇಕಾದರೆ, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಬೇಕು ಹಾಗೂ ಪ್ರತಿನಿತ್ಯ ಶಾಲೆಗೆ ಕಳುಹಿಸಿಕೊಡುವುದು ಪ್ರಮುಖವಾಗಿದೆ ಎಂದು ಹೇಳಿದರು.


      ಮಕ್ಕಳ ಕಲಿಕೆಯನ್ನು ಮೌಲ್ಯಮಾಪನ ಮಾಡಬೇಕೆಂದರೆ, ಶಾಲೆಯಲ್ಲಿ ಜರುಗುವ ಚಟುವಟಿಕೆಗಳನ್ನು ಮಕ್ಕಳು ಪ್ರತಿನಿತ್ಯ ಪೋಷಕರಲ್ಲಿ ಹೇಳಿಕೊಳ್ಳುತ್ತವೆ. ಅವುಗಳನ್ನು ಪುರಸ್ಕರಿಸುತ್ತಾ, ಶೈಕ್ಷಣಿಕ ಕಲಿಕೆಗೆ ಅಗತ್ಯವಾದ ಅಂಶಗಳನ್ನು ಶಾಲಾ ಶಿಕ್ಷಕರೊಂದಿಗೆ ಹಂಚಿಕೊಳ್ಳಬೇಕು.

ಪ್ರತಿ ತಿಂಗಳೂ ಜರುಗುವ ಎಸ್.ಡಿ.ಎಂ.ಸಿ ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಚರ್ಚೆ ಆಗಬೇಕು ಹಾಗೂ ಶಾಲಾಭಿವೃದ್ಧಿಗೆ ಪೋಷಕರು ಸಹಕರಿಸಬೇಕು ಎಂದು ತಿಳಿಸಿದ ಅವರು, ಶೇ.100 ಹಾಜರಾತಿ ಇರುವಂತೆ  ಶಿಕ್ಷಕರು ಕ್ರಮವಹಿಸಬೇಕು ಮಕ್ಕಳ ಕಲಿಕೆಯನ್ನು ಉತ್ತಮಪಡಿಸಬೇಕು ಎಂದು ಸಲಹೆ ನೀಡಿದರು.


ಕಾರ್ಯಕ್ರಮದಲ್ಲಿ ಕವಾಡಿಗರ ಹಟ್ಟಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಎಸ್. ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಂ.ಆರ್.ಮಂಜುನಾಥ್, ನಾಸಿರುದ್ಧಿನ್, ಡಿವೈಪಿಸಿ ವೆಂಕಟೇಶಪ್ಪ, ಡಯಟ್ ಹಿರಿಯ ಉಪನ್ಯಾಸಕರಾದ ಎಸ್.ನಾಗಭೂಷಣ್, ಚಿತ್ರದುರ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಾ, ಕ್ಷೇತ್ರ ಸಮನ್ವಯಾಧಿಕಾರಿ ಸಂಪತ್‍ಕುಮಾರ್. ಗ್ರಾಮ ಪಂಚಾಯಿತಿ ಸದಸ್ಯ ಎನ್.ಪ್ರಭು, ಶಾಲಾ ಮುಖ್ಯ ಶಿಕ್ಷಕ ರುದ್ರಮುನಿ ಇದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ