LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಟ್ಟಡ ಸಾಮಾಗ್ರಿಗಳ ವಸ್ತು ಪ್ರದರ್ಶನ ಉದ್ಘಾಟಿಸಿದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಮನೆ ಕಟ್ಟುವವರ ಆಶೋತ್ತರ ಕನಸುಗಳನ್ನು ಈಡೇರಿಸುವಲ್ಲಿ ಆರ್ಕಿಟೆಕ್ಟ್‌ಗಳ ಜವಾಬ್ದಾರಿ ದೊಡ್ಡದು ಎಂದು ಸಿರಿಗೆರೆಯ ತರಳಬಾಳು ಜಗದ್ಗುರು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಇಂಜನಿಯರ್‌ಗಳಿಗೆ ಕರೆ ನೀಡಿದರು.

ಚಿತ್ರದುರ್ಗ ಜಿಲ್ಲಾ ಪ್ರಾಕ್ಟಿಸಿಂಗ್ ಆರ್ಕಿಟೆಕ್ಟ್ಸ್ ಮತ್ತು ಸಿವಿಲ್ ಇಂಜಿನಿಯರ್‍ಸ್ ಅಸೋಸಿಯೇಷನ್ ವತಿಯಿಂದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿರುವ   ಕಟ್ಟಡ ಸಾಮಾಗ್ರಿಗಳ ವಸ್ತು ಪ್ರದರ್ಶನ ಉದ್ಗಾಟಿಸಿ ಮಾತನಾಡಿದರು.

ಸಿಡಿಪೇಸ್ ಡ್ರೀಮ್ಡ್ ಬಿಲ್ಡ್-೨೦೨೬ ಆಧುನಿಕ ತಂತ್ರಜ್ಞಾನದ ನಿರೀಕ್ಷೆಗೆ ನಿಮ್ಮ ಅಸೋಸಿಯೇಷನ್ ದಾಪುಗಾಲಿಡುತ್ತಿದೆ. ನೀವುಗಳು ಏರ್ಪಡಿಸಿರುವ ವಸ್ತು ಪ್ರದರ್ಶನವನ್ನು ನೋಡಿದರೆ ಪ್ರತಿಭೆಯಿದೆ ಎನ್ನುವುದು ಗೊತ್ತಾಗುತ್ತದೆ. ಹಳೆ ಕಾಲದ ಸ್ಮಾರಕಗಳು ಆಡಳಿತ ನಡೆಸಿದವರ ಕಣ್ಣ ಮುಂದಿಲ್ಲ. ಪ್ರಾಚೀನ ಭಾರತೀಯ ಪರಂಪರೆಯಲ್ಲಿ ವಾಸ್ತುಶಿಲ್ಪ ಗತಕಾಲದ ಇತಿಹಾಸದ ಸಂಕೇತವಾಗಿ ಉಳಿದುಕೊಂಡಿದೆ. ಆಧುನಿಕ ತಂತ್ರಜ್ಞಾನಕ್ಕೆ ನೀವುಗಳು ಅಪ್‌ಡೇಟ್ ಆಗಿರುವುದು ಸಂತೋಷದ ಸಂಗತಿ ಎಂದು ಶ್ಲಾಘಿಸಿದರು.

ಆರ್ಕಿಟೆಕ್ಟ್‌ಗಳು ಎಳೆಯುವ ರೇಖೆಗಳು ಕಟ್ಟಡದ ರೂಪದಲ್ಲಿ ಮೈದಾಳುತ್ತವೆ. ಆಧುನಿಕ ತಂತ್ರಜ್ಞಾನವನ್ನು ಯಶಸ್ವಿಯಾಗಿ ಬಳಸಿಕೊಂಡು ಮನೆ ಕಟ್ಟುವವರ ಕನಸುಗಳಿಗೆ ಕೈಜೋಡಿಸಿ ಎಂದು ಇಂಜಿನಿಯರ್‌ಗಳಿಗೆ ತಿಳಿಸಿದರು.

ಮೂರು ಬಾರಿ ಚಳ್ಳಕೆರೆ ಶಾಸಕರಾಗಿರುವ ಟಿ.ರಘುಮೂರ್ತಿಗೆ ಸಚಿವರನ್ನಾಗಿ ಮಾಡಿ ಎಂದು ನಾನು ಯಾರಿಗೂ ಶಿಫಾರಸ್ಸು ಮಾಡಿಲ್ಲ. ಅವರ ಅಭಿವೃದ್ದಿ ಕೆಲಸಗಳನ್ನು ಗುರುತಿಸಿ ರಾಜ್ಯ ಸರ್ಕಾರ ಮಂತ್ರಿ ಸ್ಥಾನ ನೀಡಿದೆ. ಅಪ್ಪರ್‌ಭದ್ರಾ, ಭರಮಸಾಗರ, ಜಗಳೂರು, ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ಕುರಿತು ನೂತನ ಸಚಿವರ ಜೊತೆ ಚರ್ಚಿಸಿದ್ದೇನೆ. ಭರಮಸಾಗರದ ೪೩ ಕೆರೆಗಳಲ್ಲಿ ೪೦ ಕೆರೆಗಳಿಗೆ ನೀರು ಬರುತ್ತಿದೆ. ಇಂಜಿನಿಯರ್, ಕಂಟ್ರಾಕ್ಟರ್‌ಗಳು ನೀರಾವರಿ ಯೋಜನೆಯ ಕಾಮಗಾರಿಯನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿದರೆ ನೀರು ಹರಿದು ಬರ ಪೀಡಿತ ಪ್ರದೇಶ ಚಿತ್ರದುರ್ಗ ಕ್ಷಾಮ ಎಂಬ ಹಣೆ ಪಟ್ಟಿಯಿಂದ ಹೊರ ಬರಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವ ೫೩೦೦ ಕೋಟಿ ರೂ.ಗಳಿಗೆ ಬದಲಿಗೆ ೬೨೦೦ ಕೋಟಿ ರೂ.ಗಳನ್ನು ಪಡೆಯಬೇಕು. ಬರದ ನಾಡು ಚಿತ್ರದುರ್ಗ ಭಗೀರಥ ನಾಡಾಗಬೇಕು. ಹಾಗಾಗಿ ನೀವುಗಳು ಆಧುನಿಕ ತಂತ್ರಜ್ಞಾನಕ್ಕೆ ದಾಪುಗಾಲಿಟ್ಟು ಯಶಸ್ವಿಯಾಗಿ ಎಂದು ಆರ್ಕಿಟೆಕ್ಟ್‌ಗಳಿಗೆ ಸ್ವಾಮೀಜಿ ಹರಸಿದರು.

ನೂತನ ಸಚಿವ ಟಿ.ರಘುಮೂರ್ತಿ ಮಾತನಾಡಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ ನಂತರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಸೂಚನೆಯಂತೆ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ವೀಕ್ಷಿಸಿ ಅಧಿಕಾರಿಗಳ ಸಭೆ ನಡೆಸಿದ್ದೇನೆ. ನಾನು ಮೂರು ಬಾರಿ ಶಾಸಕನಾಗಲು ಇಂಜಿನಿಯರಿಂಗ್ ಪದವಿ ಪಡೆದಿರುವುದು ಒಂದು ಕಾರಣವಿರಬಹುದು. ಮನೆಗಳನ್ನು ಕಟ್ಟಿ ವಿನ್ಯಾಸಗೊಳಿಸುವ ಕೆಲಸವನ್ನು ಇಂಜಿನಿಯರ್‌ಗಳು ಮಾಡುತ್ತೀದ್ದೀರಿ. ಆಧುನಿಕ ವ್ಯವಸ್ಥೆಯಲ್ಲಿ ಇಂತಹ ಕಟ್ಟಡ ಸಾಮಾಗ್ರಿಗಳ ಪ್ರದರ್ಶನ ಮನೆಗಳನ್ನು ಕಟ್ಟುವವರಿಗೆ ಪ್ರಯೋಜನಕಾರಿಯಾಗಲಿದೆ. ಸಿವಿಲ್ ಇಂಜಿನಿಯರ್‌ಗಳ ಮೇಲೆ ಅತ್ಯಂತ ಜವಾಬ್ದಾರಿಯಿದೆ. ಯಾವುದೇ ಒಂದು ಕಟ್ಟಡ, ಡ್ಯಾಂ, ರಸ್ತೆಗಳು ಸುಭದ್ರವಾಗಿರಬೇಕಾದರೆ ನಿಮ್ಮಗಳ ಪಾತ್ರ ಮುಖ್ಯ ಎಂದು ತಿಳಿಸಿದರು.

೧೯೮೬ ರಲ್ಲಿ ದಾವಣಗೆರೆಯಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪೂರೈಸಿ ಹತ್ತು ವರ್ಷಗಳ ಕಾಲ ಸರ್ಕಾರಿ ಸೇವೆಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡಿದ್ದೇನೆ. ತದ ನಂತರ ರಾಜಿನಾಮೆ ನೀಡಿ ರಾಜಕೀಯ ಪ್ರವೇಶಿಸಿದೆ. ಇಂಜಿನಿಯರ್‌ಗಳಿಗೆ ಪರಿಶ್ರಮವಿರಬೇಕು. ಗುರಿ ಇದ್ದಾಗ ಮಾತ್ರ ಯಾವುದೇ ರಂಗದಲ್ಲಿಯಾಗಲಿ ಯಶಸ್ಸು ಗಳಿಸಬಹುದು. ಸಾಮಾಜಿಕ ಕಳಕಳಿಯಿಟ್ಟುಕೊಂಡು ಕೆಲಸ ಮಾಡಿ. ಕಲುಷಿತ ರಾಜಕಾರಣದಲ್ಲಿ ಸಿರಿಗೆರೆಯ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ನನಗೆ ಉತ್ತಮ ಮಾರ್ಗದರ್ಶನ ನೀಡಿ ಪ್ರೇರಣೆಯಾಗಿದ್ದಾರೆಂದು ಸ್ಮರಿಸಿಕೊಂಡರು.

ಸಿಡಿಪೇಸ್‌ನ ಸಂಸ್ಥಾಪಕ ಅಧ್ಯಕ್ಷ ಪಿ.ಎಲ್.ಸುರೇಶ್‌ರಾಜು ಪ್ರಾಸ್ತಾವಿಕವಾಗಿ ಮಾತನಾಡಿ ೨೦೧೪ ರಲ್ಲಿ ಆರಂಭಗೊಂಡ ಸಿಡಿಪೇಸ್ ಮನೆ ಕಟ್ಟುವವರ ಕನಸುಗಳನ್ನು ಸಾಕಾರಗೊಳಿಸುವ ಉದ್ದೇಶವಿಟ್ಟುಕೊಂಡು ಕೆಲಸ ಮಾಡುತ್ತಿದೆ. ಇದು ನಮ್ಮ ಮೂರನೆ ವಸ್ತು ಪ್ರದರ್ಶನ. ಇಡಿ ರಾಜ್ಯದಲ್ಲಿಯೆ ಇಂತಹ ಅಸೋಸಿಯೇಷನ್ ಎಲ್ಲಿಯೂ ಇಲ್ಲವೆನ್ನುವುದು ಒಂದು ಹೆಗ್ಗಳಿಕೆ ಎಂದರು.

ಸಿಡಿಪೇಸ್ ಅಧ್ಯಕ್ಷ ಇಂಜಿನಿಯರ್ ಸಿ.ರವಿಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮಾಧವ್ ಎಂ.ಪೊಕಾಳೆ, ಎಸ್.ಕೆ.ಸ್ಟೀಲ್ ಮಾರಾಟ ಮುಖ್ಯಸ್ಥ ರಾಜೇಶ್ ಪ್ರದೀಪ್‌ಕುಮಾರ್ ಇವರುಗಳು ವೇದಿಕೆಯಲ್ಲಿದ್ದರು.

ಸಿಡಿಪೇಸ್‌ನ ಉಪಾಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ನಿರ್ದೇಶಕರು, ಇಂಜಿನಿಯರ್‌ಗಳು,ಸ ಮಾದುರಿ ಗಿರೀಶ್, ಜಿ.ಬಿ.ಶೇಖರ್, ಮದೇಹಳ್ಳಿಯ ಶಂಕರಣ್ಣ ಇವರುಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಸವಿತಾ ದಿವಾಕರ್ ಪ್ರಾರ್ಥಿಸಿದರು. ಅರುಣ್‌ಕುಮಾರ್ ಸ್ವಾಗತಿಸಿದರು. ಎನ್.ಶಶಿಧರಗುಪ್ತ, ಉಮೇಶ್ ತುಪ್ಪದ ನಿರೂಪಿಸಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ಹಿರಿಯೂರಿನಲ್ಲಿ ರಾಜಕೀಯ ಪಕ್ಷಗಳ ಸಭೆಶ್ರೀ ಮಲ್ಲಿಕಾರ್ಜುನ ಸ್ವಾಮಿಗಳವರ ಶಿಕ್ಷಣ ಮತ್ತು ಸಮಾಜಸೇವೆ ಆದರ್ಶನೀಯ ಬೇತೂರುಪಾಳ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಪುನರ್ಮಿಲನ ಹಾಗೂ ಗುರುವಂದನೆಶತಮಾನದ ಜ್ಞಾನ ದೇಗುಲ: ಹೀರದ ಸೂಗಮ್ಮ ಶಾಲೆಯ ಶತಮಾನೋತ್ಸವ ಉದ್ಘಾಟಿಸಿದ ಸಚಿವ ಎಂ. ಬಿ. ಪಾಟೀಲ್ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ: ಪುಷ್ಪಾರ್ಚನೆ ಮಾಡಿ ಗೌರವ ನಮನ​ 'ನಶೆ ಮುಕ್ತ ಭಾರತ' ನಿರ್ಮಾಣಕ್ಕೆ ಪ್ರತಿಜ್ಞಾವಿಧಿ: ಬಿ. ವೈ. ವಿಜಯೇಂದ್ರ'ಅಗ್ನಿ-4' ಕ್ಷಿಪಣಿ ಉಡಾವಣೆ ಯಶಸ್ವಿ: ಭಾರತದ ರಕ್ಷಣಾ ವಲಯಕ್ಕೆ ಮತ್ತಷ್ಟು ಬಲ, 'ಆತ್ಮನಿರ್ಭರ ಭಾರತ'ಕ್ಕೆ ದಿಕ್ಸೂಚಿE20 ಎಥನಾಲ್ ಇಂಧನ ನೀತಿ ವಿರುದ್ಧ ಕೇಂದ್ರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳ ಸುರಿಮಳೆ‘ಕಸದಿಂದ ಮುಕ್ತಿ’ ಅಭಿಯಾನಕ್ಕೆ ಬೆಸ್ಕಾಂ ಬೆಂಬಲ:ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿ, ಶಾಸಕರಿಗೆ ಅಧಿಕಾರ ದಾಹ: ಸಚಿವ ಹೆಚ್.ಡಿ. ಕುಮಾರಸ್ವಾಮಿ