Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿಬಿ ಮುಕ್ತ ತೀವ್ರ ಪ್ರಚಾರಾಂದೋಲನ ಯಶಸ್ವಿಗೆ ಕೈಜೋಡಿಸಿ- ಡಾ.ಸುಧಾ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
100
ದಿನ ಟಿಬಿ ಮುಕ್ತ ತೀವ್ರ ಪ್ರಚಾರಾಂದೋಲನ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸಿ..ಸುಧಾ ತಿಳಿಸಿದರು.

ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರ ಸಭಾಂಗಣದಲ್ಲಿ ಗುರುವಾರ ಆರೋಗ್ಯ ಇಲಾಖೆ, ಜಾನ್ಮೈನ್ಸ್ ಅವರ ಸಹಯೋಗದಲ್ಲಿ 100 ದಿನ ಟಿಬಿ ಮುಕ್ತ ತೀವ್ರ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
100
ದಿನಗಳ ಟಿಬಿ ಮುಕ್ತ ತೀವ್ರ ಪ್ರಚಾರ ಆಂದೋಲನ ಕಾರ್ಯಕ್ರಮವು ಇಂದಿಗೆ 87 ದಿನಗಳ ಯಶಸ್ವಿ ಪ್ರಯಾಣ ಬೆಳೆಸಿದೆ. ನಿಮ್ಮೆಲ್ಲರ ಸಹಕಾರ ಸಹಯೋಗದೊಂದಿಗೆ 12 ಹೊಸ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ.

ಪ್ರಧಾನಮಂತ್ರಿಗಳ ನಿಕ್ಷಯ ಮಿತ್ರ ಕಾರ್ಯಕ್ರಮ ಯೋಜನೆಯಲ್ಲಿ ಜಾನ್ ಮೈನ್ಸ್ ಕಂಪನಿಯವರು ಭಾಗಿದಾರರಾಗಿ ಸಮುದಾಯ ಆರೋಗ್ಯ ಕೇಂದ್ರ ಸಿರಿಗೆರೆ ಸುತ್ತಮುತ್ತ ಹೊಂದಿಕೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಯಾಸಪುರ, ವಿಜಾಪುರ, ಹಿರೇಗುಂಟನೂರು, ಭೀಮಸಮುದ್ರ ವ್ಯಾಪ್ತಿಯ ಒಟ್ಟು 35 ಟಿಬಿ ಪ್ರಕರಣಗಳಿಗೆ ಪೌಷ್ಟಿಕ ಪೋಷಕ ಆಹಾರದ ಕಿಟ್ಗಳನ್ನು ಆರು ತಿಂಗಳ ಕಾಲ ನೀಡುತ್ತಿರುವುದು ಪ್ರಶಂಸನೀಯ ಎಂದರು.

ಶೀಘ್ರವಾಗಿ ಕ್ಷಯ ರೋಗ ಪ್ರಕರಣ ಪತ್ತೆ ಹಚ್ಚುವುದು, ಚಿಕಿತ್ಸೆ ದೊರಕಿಸುವುದು ಗುಣಮುಕ್ತರನ್ನಾಗಿ ಮಾಡುವುದು, ಹೊಸ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡುವುದು, ಮರಣ ಪ್ರಮಾಣದರ ಕಡಿಮೆ ಮಾಡುವುದು, ಕ್ಷಯರೋಗದ ಬಗ್ಗೆ ಅರಿವು ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶ ಎಂದರದು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಬಿ.ವಿ.ಗಿರೀಶ್ ಮಾತನಾಡಿ, ಕ್ಷಯರೋಗದ ಬಗ್ಗೆ ಇರುವ ಸಾಮಾಜಿಕ ಕಳಂಕ ತಡೆಯಬೇಕು. ಸಮಾಜದಲ್ಲಿ ಮತ್ತು ಕುಟುಂಬದಲ್ಲಿ ಕ್ಷಯ ರೋಗಿಗಳನ್ನ ಆರೈಕೆ ಮಾಡುವಾಗ ಸಹಕರಿಸಬೇಕು. ಯಾವುದೇ ರೀತಿಯ ಭೇದಗಳನ್ನು ಮಾಡಬಾರದು. ನಿಮ್ಮೊಡನೆ ನಾವಷ್ಟೇ ಅಲ್ಲ ಸಂಪೂರ್ಣ ಸಮುದಾಯದ ಬೆಂಬಲವಿರುತ್ತದೆ. ಯಾವುದೇ ಕಾರಣಕ್ಕೂ ಮಾತ್ರೆಯನ್ನು ತಪ್ಪಿಸದೆ ನುಂಗಿ ಟಿಬಿ ಚಾಂಪಿಯನ್ನಾಗಿ ಇತರರಿಗೆ ಮಾರ್ಗದರ್ಶಿಗಳಾಗಿ ಎಂದರು.

 ಕಂಪನಿಯ ಸಿಎಸ್ಆರ್ ಮುಖ್ಯಸ್ಥ ಮಂಜುನಾಥ್ ಮಾತನಾಡಿ, ಸಮುದಾಯದ ಸೇವೆಗೆ ಆರೋಗ್ಯ ಇಲಾಖೆಯೊಂದಿಗೆ ಸದಾ ಕಾಲ ಕೈ ಜೋಡಿಸುತ್ತೇವೆ ಎಂದರು ಕಾರ್ಯಕ್ರಮದಲ್ಲಿ ಜಾನ್ ಮೈನ್ಸ್ ಡಿಜಿಎಂ ರಣದೇವ್, ಡೆಪ್ಯೂಟಿ ಮ್ಯಾನೇಜರ್ ಸುಭಾಷ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ, ಬಿ.ಮೂಗಪ್ಪ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರವೀಣ್ ಕುಮಾರ್, ನವೀನ್, ವೀರೇಶ್, ಇಸ್ಮಾಯಿಲ್, ನಾಗರಾಜ್, ಸುನಿಲ್,  ದಂತ ವೈದ್ಯೆ ಡಾ.ಬಿಂದ್ಯಾ, ಆಶಾ ಕಾರ್ಯಕರ್ತೆಯರು, 35 ಟಿಬಿ ರೋಗದ ಪ್ರಕರಣದ ಫಲಾನುಭವಿಗಳು ಭಾಗವಹಿಸಿದ್ದರು. ಎಲ್ಲರಿಗೂ ಆಹಾರದ ಕಿಟ್ಗಳನ್ನು ವಿತರಿಸಲಾಯಿತು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಸ್ಕಾಂನ ಪ್ರತಿಭಾವಂತ ಇಂಜಿನಿಯರ್ ರೇಣುಕಾಪ್ರಸಾದ್ ಇನ್ನಿಲ್ಲ​ಸಂದಿಗ್ದ ಪರಿಸ್ಥಿತಿಯಲ್ಲಿ ಹಿರಿಯೂರು ರಾಜಕೀಯ  NEET 2026 ರದ್ದು: ಯುವಜನತೆಯ ಕನಸಿಗೆ ಕೇಂದ್ರದ 'ಮಹಾವಂಚನೆ' – ಎಂ.ಬಿ. ಪಾಟೀಲ್ ಆಕ್ರೋಶಕರ್ನಾಟಕ-ಜಪಾನ್ ಬಾಂಧವ್ಯ ವೃದ್ಧಿ: ಜಪಾನ್ ರಾಯಭಾರಿಯೊಂದಿಗೆ ಸಚಿವ ಎಂ.ಬಿ. ಪಾಟೀಲ್ ಸಮಾಲೋಚನೆರಾಷ್ಟ್ರೀಯ ಪಂಚಾಯತ್ ಪುರಸ್ಕಾರ: ಕರ್ನಾಟಕದ 6 ಪಂಚಾಯತಿಗಳಿಗೆ ಐತಿಹಾಸಿಕ ಗೌರವ'ಆರಕ್ಷಕರೇ ಅಪರಾಧಿಗಳಾದರೆ ಜನರ ಪಾಡೇನು?': ಬಿ.ವೈ. ವಿಜಯೇಂದ್ರ ಆಕ್ರೋಶಕಾಂಗ್ರೆಸ್ ಸರ್ಕಾರ ಆಡಳಿತಾತ್ಮಕವಾಗಿ ದಿವಾಳಿ: ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿಕನ್ನಡ ಕಲಾಕ್ಷೇತ್ರಕ್ಕೆ ತುಂಬಲಾರದ ನಷ್ಟ: ಬಹುಮುಖ ಪ್ರತಿಭೆ ದಿಲೀಪ್ ರಾಜ್ ಇನ್ನಿಲ್ಲ​ಕಾಂಗ್ರೆಸ್‌ಗೆ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಚರ್ಚಿಸುವ ನೈತಿಕತೆ ಇಲ್ಲ: ಕುಮಾರಸ್ವಾಮಿ ವಾಗ್ದಾಳಿಭ್ರಷ್ಟ ಕೆಪಿಎಸ್‌ಸಿ ವ್ಯವಸ್ಥೆಯ ವಿರುದ್ಧ ನಿಖಿಲ್ ಕುಮಾರಸ್ವಾಮಿ 'ಮಹಾಸಮರ'