LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ವೆಂಕಟೇಶ್ ಜಿ. ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿಯೋಜನೆ

Advertisement
Advertisement

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ​
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಡಾ. ವೆಂಕಟೇಶ್ ಜಿ. ಅವರನ್ನು ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಯಾಗಿ ಸುಮೊಟೊ ಮೂಲಕ ಸ್ಥಳ ನಿಯುಕ್ತಿಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಧಿಕೃತ ಜ್ಞಾಪನಾ ಪತ್ರ ಹೊರಡಿಸಿದೆ.

​​ವರ್ಗಾವಣೆ ಹಾಗೂ ಬಿಡುಗಡೆ: ಹಿರಿಯೂರು ತಾಲೂಕು ಆರೋಗ್ಯಾಧಿಕಾರಿ ಹುದ್ದೆಗೆ ಡಾ. ಮಹೇಶ್ ಆರ್. (ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ, ಕೋಡಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ) ಅವರು ವರ್ಗಾವಣೆಯಾದ ಹಿನ್ನೆಲೆಯಲ್ಲಿ, ಜುಲೈ 17, 2026 ರಂದು ಡಾ. ವೆಂಕಟೇಶ್ ಜಿ. ಅವರನ್ನು ಹಿರಿಯೂರು ತಾಲೂಕು ಆರೋಗ್ಯಾಧಿಕಾರಿ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿತ್ತು.

​ವರದಿ ಮಾಡಿಕೊಳ್ಳದ ಕಾರಣ ಸುಮೊಟೊ ನಿಯೋಜನೆ: ಕರ್ತವ್ಯದಿಂದ ಬಿಡುಗಡೆಗೊಂಡ ನಂತರ ಮುಂದಿನ ಸ್ಥಳ ನಿಯುಕ್ತಿಗಾಗಿ ಬೆಂಗಳೂರಿನ ಆಯುಕ್ತಾಲಯದಲ್ಲಿ ವರದಿ ಮಾಡಿಕೊಳ್ಳಬೇಕಿತ್ತು. ಆದರೆ, ಇದುವರೆಗೂ ಅವರು ವರದಿ ಮಾಡಿಕೊಳ್ಳದ ಕಾರಣ, ಇಲಾಖೆಯು 'ಸುಮೊಟೊ' ಮೂಲಕ ಹೊಸ ಸ್ಥಳವನ್ನು ನಿಯೋಜಿಸಿದೆ.

​ಹೊಸ ನಿಯೋಜಿತ ಸ್ಥಳ: ಡಾ. ವೆಂಕಟೇಶ್ ಜಿ. ಅವರನ್ನು ನಾಗಸಮುದ್ರ ಪ್ರಾಥಮಿಕ ಆರೋಗ್ಯ ಕೇಂದ್ರ, ಮೊಳಕಾಲ್ಮೂರು ತಾಲೂಕು, ಚಿತ್ರದುರ್ಗ ಜಿಲ್ಲೆ ಇಲ್ಲಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಯಾಗಿ ಸ್ಥಳ ನಿಯುಕ್ತಿಗೊಳಿಸಲಾಗಿದೆ.

​ನೇಮಕಗೊಂಡಿರುವ ಸ್ಥಳದಲ್ಲಿ ವೈದ್ಯರು ಕೂಡಲೇ ಕರ್ತವ್ಯಕ್ಕೆ ಹಾಜರಾಗಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಭಾರ ವರ್ಗಾವಣೆ ಪ್ರಮಾಣ ಪತ್ರ ಸಲ್ಲಿಸುವಂತೆ ಆಯುಕ್ತರು ಸೂಚಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆ. 25ರಂದು ನೇರ ನೇಮಕಾತಿ ಸಂದರ್ಶನಆ.23ರಂದು ‘ನಾನು, ನೀನು ಮತ್ತು ಸ್ಕಿಜೋಫ್ರೇನಿಯಾ' ಕವನ ಸಂಕಲನ ಲೋಕಾರ್ಪಣೆಆದಿಜಾಂಬವ ಮಠದಲ್ಲಿ ಏಕಪಕ್ಷೀಯ ಸಮಾರಂಭ: ಸಮುದಾಯದ ಮುಖಂಡರಿಂದ ಕಾರ್ಯಕ್ರಮ ಬಹಿಷ್ಕಾರಕಾಯಕದಿಂದ ಮಾತ್ರ ಲಕ್ಷ್ಮಿ ಪ್ರಾಪ್ತಿ; ಶ್ರೀ ಮಾದರ ಚನ್ನಯ್ಯ ಸ್ವಾಮೀಜಿಕರ್ನಾಟಕದ ಬುಡಕಟ್ಟು ಸಮುದಾಯಗಳ ಹಕ್ಕು ಮತ್ತು ಅಭಿವೃದ್ಧಿಗೆ ಸಂಸದ ಗೋವಿಂದ ಕಾರಜೋಳ ಧ್ವನಿಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ 'ಸಾಹುಕಾರ್ ಜಾನಕಿ' ನಿಧನ:ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ಶಾಸಕರಿಂದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆಕ್ವಿನ್ ಸಿಟಿಯಲ್ಲಿ ವಿದೇಶಿ ವಿವಿಗಳ ಕ್ಯಾಂಪಸ್, ಮೈಸೂರಿನಲ್ಲಿ ಏರೋಸ್ಪೇಸ್ ಪಾರ್ಕ್: ಸಚಿವ ಎಂ.ಬಿ. ಪಾಟೀಲ್ ಘೋಷಣೆಐಸಿಎಐ 'ಸಂವಾದ' ಸಮ್ಮೇಳನ ಉದ್ಘಾಟನೆ: ಸಿಎ ವೃತ್ತಿಪರರ ಜ್ಞಾನ ಹಂಚಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ಶ್ಲಾಘನೆಪ್ಯಾರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಕೆ.ಎಸ್. ಶಿಲ್ಪಾಗೆ ಸನ್ಮಾನ: ಗ್ರೂಪ್ 'ಬಿ' ಉದ್ಯೋಗ ಘೋಷಣೆ